ನೋಂದಣಿಯಾದರೂ ಕಾರ್ಮಿಕರಿಗೆ ಸಿಗದ‌ ಸ್ಮಾರ್ಟ್‌ ಕಾರ್ಡ್‌ ನರೇಗಾ: ಶುಲ್ಕ ಪಡೆದು ವಂಚನೆ?


Team Udayavani, Oct 3, 2019, 5:49 AM IST

x-28

ಸುಳ್ಯ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾರ್ಮಿಕರಿಂದ ರಾಜ್ಯ ಮಟ್ಟದ ಖಾಸಗಿ ಸಂಸ್ಥೆಯೊಂದು ನೋಂದಣಿ ಹೆಸರಿನಲ್ಲಿ ತಲಾ 75 ರೂ. ಪಡೆದು ಒಂದು ತಿಂಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ವಿತರಿಸುವುದಾಗಿ ಹೇಳಿದ್ದು, ತಿಂಗಳು ಎಂಟು ಕಳೆದರೂ ಫಲಾನುಭವಿಗಳ ಕೈ ಸೇರಿಲ್ಲ.

ದ.ಕ., ಉಡುಪಿ ಜಿಲ್ಲೆ ಸೇರಿದಂತೆ ನಾನಾ ಜಿಲ್ಲೆಗಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಕಾರದ ಸೂಚನೆಯಂತೆ ಏಜೆನ್ಸಿಯು ನರೇಗಾ ಉದ್ಯೋಗ ಚೀಟಿ ಹೊಂದಿರುವ ಕಾರ್ಮಿಕರನ್ನು ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅಡಿ ನೋಂದಾಯಿಸಿ ಸವಲತ್ತು ನೀಡುವುದಾಗಿ ಹಣ ಪಡೆದಿತ್ತು.

ಏನಿದು ಯೋಜನೆ?
ನರೇಗಾ ಯೋಜನೆಯಡಿಯ ಕಾರ್ಮಿಕರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಾಯ್ದೆ ಅಡಿ ನೋಂದಾಯಿಸಿ ಕುಟುಂಬ ಸದಸ್ಯರ ಸಹಿತ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯ ನೀಡಲು 2018ರಲ್ಲಿ ರಾಜ್ಯ ಸರಕಾರ ಆದೇಶಿಸಿತ್ತು. ಇದರನ್ವಯ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಸರಕಾರಿ ಸ್ವಾಮ್ಯದ ಕಿಯೋನಿಕ್ಸ್‌ ಸಂಸ್ಥೆಗೆ ಕಾರ್ಯಾದೇಶ ನೀಡಿತ್ತು. ಕಿಯೋನಿಕ್ಸ್‌ ಟೆಂಡರ್‌ ಮೂಲಕ ಐಕ್ಯ ಎಂಬ ಸಂಸ್ಥೆಗೆ ನೋಂದಣಿ ಗುತ್ತಿಗೆ ನೀಡಿತ್ತು.

ಹಣ ತೆತ್ತರೂ ಕಾರ್ಡ್‌ ಸಿಗಲಿಲ್ಲ
ಐಕ್ಯ ಬ್ಯುಸಿನೆಸ್‌ ಸೊಲ್ಯೂಶನ್‌ ಪ್ರೈ.ಲಿ. ಸಂಸ್ಥೆ ಗ್ರಾ.ಪಂ.ಗಳಿಗೆ ತೆರಳಿ ಪ್ರತಿ ಫಲಾನುಭವಿಗಳಿಂದ ತಲಾ 75 ರೂ. ಪಡೆದು ನೋಂದಾಯಿಸಿದೆ. ಜಿಲ್ಲೆಯ ಬಹುತೇಕ ಪಂ.ಗಳ ವ್ಯಾಪ್ತಿಯಲ್ಲಿ ಸರಾಸರಿ 100 ಮಂದಿ ಹಣ ಪಾವತಿಸಿದ್ದಾರೆ. ಸ್ಮಾರ್ಟ್‌ಕಾರ್ಡ್‌ ಬಾರದಿರುವ ಬಗ್ಗೆ ಗ್ರಾಮ ಸಭೆಗಳಲ್ಲಿ ಪ್ರಶ್ನಿಸುತ್ತಿದ್ದಾರೆ. ಗ್ರಾ.ಪಂ.ಗಳಿಂದ ತಾ.ಪಂ.ಗೆ ದೂರು ನೀಡಲಾಗಿದೆ.

ಜವಾಬ್ದಾರಿ ಯಾರು ಎಂಬ ಗೊಂದಲ
ಸರಕಾರದ ಸುತ್ತೋಲೆ ಪ್ರಕಾರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮೂಲಕ ನೋಂದಣಿ ಅನುಷ್ಠಾನದ ಜವಾಬ್ದಾರಿ ಹೊಂದಿದೆ. ಜಿಲ್ಲಾ ಅಥವಾ ತಾಲೂಕು ಮಟ್ಟದ ಇಲಾಖೆಗಳಿಗೆ ಹೊಣೆಗಾರಿಕೆ ಇಲ್ಲ. ನೋಂದಣಿ ಸಂಸ್ಥೆಗೆ ಸಂಪರ್ಕ ಮಾಹಿತಿ ಮಾತ್ರ ನೀಡಲು ಸೂಚಿಸಲಾಗಿದೆ.

ಮೊದಲ ಹಂತದಲ್ಲಿ ಆಯ್ದ 8 ಜಿಲ್ಲೆಗಳಲ್ಲಿ ನೋಂದಣಿ ಪ್ರಾರಂಭಗೊಂಡಿತ್ತು. ಕೆಲವೆಡೆ ಶುಲ್ಕ ನೀಡಲು ಕಾರ್ಮಿಕರು ಹಿಂಜರಿದಿದ್ದರು. ಈ ಸಂದರ್ಭ ಸ್ಮಾರ್ಟ್‌ಕಾರ್ಡ್‌ ನೀಡಿ ಅನಂತರ ಶುಲ್ಕ ಪಡೆಯಲು ಸೂಚಿಸಲಾಗಿತ್ತು.

ಅರ್ಧದಲ್ಲೇ ಸ್ಥಗಿತ
ಉದ್ಯೋಗ ಖಾತರಿ ಕಾರ್ಮಿಕರು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವ್ಯಾಪ್ತಿಗೆ ಬರುವುದಿಲ್ಲ ಎಂಬ ಸುಪ್ರಿಂ ಕೋರ್ಟ್‌ ಆದೇಶ ಇದೆ ಎಂದು ನೋಂದಣಿ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ ಅಥವಾ ಜಿಲ್ಲಾಡಳಿತವನ್ನು ಪ್ರಶ್ನಿಸಿದರೆ, ಇದು ಜಿಲ್ಲಾಮಟ್ಟದ ಆದೇಶ ಅಲ್ಲ, ಸರಕಾರದ ಕಾರ್ಯದರ್ಶಿ ಆದೇಶದ ಪ್ರಕಾರ ಸಂಸ್ಥೆ ನೋಂದಣಿ ಮಾಡಿದೆ ಎನ್ನುತ್ತಾರೆ.

ನಮ್ಮಲ್ಲಿ ಗ್ರಾ.ಪಂ.ಗಳಿಗೆ ತೆರಳುವ ಬಗ್ಗೆ ಒಪ್ಪಿಗೆ ಪಡೆದುಕೊಂಡಿದ್ದು ಮಾತ್ರ. ಕಾರ್ಮಿಕ ಇಲಾಖೆ ಮೂಲಕ ಏಜೆನ್ಸಿ ಬರುವ ಸುತ್ತೋಲೆ ಇತ್ತು. ಕಳಂಜ ಗ್ರಾ.ಪಂ.ನಿಂದ ಸ್ಮಾರ್ಟ್‌ ಕಾರ್ಡ್‌ ಸಿಗದಿರುವ ಬಗ್ಗೆ ತಾ.ಪಂ. ಸಭೆಗಳಲ್ಲಿ ಪ್ರಸ್ತಾವವಾಗಿದೆ.
– ಭವಾನಿಶಂಕರ್‌ ಎನ್‌. ಕಾರ್ಯನಿರ್ವಾಹಕ ಅಧಿಕಾರಿ, ಸುಳ್ಯ

ಕಳಂಜ ಗ್ರಾ.ಪಂ.ನಲ್ಲಿ 2018ರ ನ. 24ರಂದು ಐಕ್ಯ ಸಂಸ್ಥೆ ನರೇಗಾ ಉದ್ಯೋಗ ಚೀಟಿ ಹೊಂದಿರುವ 100 ಮಂದಿಯಿಂದ ತಲಾ 75 ರೂ.ಪಡೆದು ನೋಂದಣಿ ಮಾಡಿತ್ತು. ಎಂಟು ತಿಂಗಳು ಕಳೆದರೂ ಕಾರ್ಡ್‌ ಬಂದಿಲ್ಲ. ಇಂತಹ ದೂರು ಹಲವು ಗ್ರಾ.ಪಂ. ವ್ಯಾಪ್ತಿಯಲ್ಲಿದೆ.
ಜಾಹ್ನವಿ ಕಾಂಚೋಡು, ಸುಳ್ಯ ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ

ರಾಜ್ಯ ಮಟ್ಟದಲ್ಲಿ ಆದೇಶ ಪಡೆದು ಏಜೆನ್ಸಿ ಸಂಸ್ಥೆಯೊಂದು ನೇರ ನೋಂದಣಿ ಜವಾಬ್ದಾರಿ ಪಡೆದಿತ್ತು. ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ಇಲಾಖೆಗೆ ಇದರ ಹೊಣೆಗಾರಿಕೆ ಇಲ್ಲ. ಅದರ ಕಾರ್ಯವ್ಯಾಪ್ತಿಯೂ ತಿಳಿದಿಲ್ಲ. ಜಿಲ್ಲಾ ಮಟ್ಟದ ಇಲಾಖೆಗಳಿಗೆ ನಾವು ನಿರ್ದೇಶನ ನೀಡಿಲ್ಲ. ಸಂಸ್ಥೆ ಹಣ ಪಡೆದುಕೊಂಡ ಬಗ್ಗೆಯೂ ನಮಗೆ ಮಾಹಿತಿ ನೀಡಿಲ್ಲ.
– ನಾಗರಾಜ, ಅಸಿಸ್ಟೆಂಟ್‌ ಲೇಬರ್‌ ಕಮಿಷನರ್‌, ಕಾರ್ಮಿಕ ಇಲಾಖೆ

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.