Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

ಶ್ರೀ ಕ್ಷೇ. ಧ. ಗ್ರಾ. ಯೋಜನೆಯಿಂದ ದಶಲಕ್ಷ ಗಿಡಗಳ ನಾಟಿಗೆ ಈಶ್ವರ ಖಂಡ್ರೆ ಚಾಲನೆ

Team Udayavani, Jul 3, 2024, 12:33 AM IST

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

ಬಂಟ್ವಾಳ: ಮಾನವ-ಪ್ರಾಣಿ ಸಂಘರ್ಷದ ಭಾಗವಾಗಿ ಆನೆ ತುಳಿತ ದಿಂದ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದು, ಇದರ ಶಾಶ್ವತ ತಡೆಯ ಜತೆಗೆ ವನ್ಯಜೀವಿ, ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ಆನೆಯ ಚಲನ-ವಲನಗಳನ್ನು ಅಧ್ಯಯನ ಮಾಡಿರುವ ತಜ್ಞರನ್ನು ಕರೆಸಿ ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕಾರ್ಯಾಗಾರವನ್ನು ನಡೆಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯೀದಡಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಜ್ಯಾದ್ಯಂತ ದಶ ಲಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಮಂಗಳವಾರ ಬಂಟ್ವಾಳದ ಆಲಂ ಪುರಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನದಲ್ಲಿ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಸುಮಾರು 65 ಮಂದಿ ವನ್ಯಜೀವಿಗಳಿಂದ ಪ್ರಾಣ ಕಳೆದು ಕೊಂಡಿದ್ದು, ಆನೆ ತುಳಿತದಿಂದಲೇ ಹೆಚ್ಚಿನ ಸಾವು ಸಂಭವಿಸಿದೆ. ಪ್ರಾಣಿಗಳು ನಾಡಿಗೆ ಬರದಂತೆ ರೈಲ್ವೇ ಬೇಲಿ, ಸೋಲಾರ್‌ ಫೆನ್ಸಿಂಗ್‌ ಹಾಕಿದರೂಪ್ರಯೋಜನ ವಾಗಿಲ್ಲ. ಹೀಗಾಗಿ ಕಾರ್ಯಾಗಾರದ ಮೂಲಕ ಆನೆಗಳ ಮಾನ ಸಿಕತೆಯನ್ನು ತಿಳಿಯಲಾಗುವುದು ಎಂದರು.

ಪ್ರಸ್ತುತ ಅರಣ್ಯ ಅಭಿವೃದ್ಧಿ ಅನಿ ವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಹೆಗ್ಗಡೆಯವರು ನಾಡಿಗೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ತಮ್ಮ ರಾಜ್ಯ ಸಭಾ ನಿಧಿಯಿಂದಲೂ ಅನುದಾನ ನೀಡಿ ಬೀದರ್‌ ಜಿಲ್ಲೆಯ ಹಾಲು ಉತ್ಪಾ ದನೆ ಹೆಚ್ಚಳಕ್ಕೆ ಕಾರಣರಾಗಿದ್ದಾರೆ ಎಂದರು.

ಸಸಿ ವಿತರಿಸಿದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಅರಣ್ಯ ಇಲಾಖೆಯ ಕಾರ್ಯವನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡು ತ್ತಿದ್ದು, 50 ಲಕ್ಷ ಮಂದಿಯ ದೊಡ್ಡ ತಂಡ ಇದರಲ್ಲಿ ತೊಡಗಿದೆ ಎಂದರು.

ಪುತ್ತೂರು ನರಿಮೊಗರಿನ ಅವಿನಾಶ್‌ ಕೊಡಂಕಿರಿ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಪ್ರಶಸ್ತಿ ವಿತರಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅರಣ್ಯ ಇಲಾಖೆಯ ಸಿಎಸ್‌ಆರ್‌ ನಿಧಿಯನ್ನು ಬಳಸಿ ಆಲಂಪುರಿ ಉದ್ಯಾನವನ್ನು ಇನ್ನ ಷ್ಟು ಅಭಿವೃದ್ಧಿ ಪಡಿಸಬೇಕು ಎಂದರು.

ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್‌.ಮಮತಾ ಗಟ್ಟಿ, ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಲನ್‌, ಅರಣ್ಯ ಇಲಾಖೆ ಮಂಗಳೂರು ವೃತ್ತ ಸಿಸಿಎಫ್‌ ಡಾ| ವಿ.ಕರಿಕಾಲನ್‌, ಡಿಸಿಎಫ್‌ ಆಂಟೋನಿ ಮರಿಯಪ್ಪ ವೈ.ಕೆ., ಎಸಿಎಫ್‌ ಪಿ.ಶ್ರೀಧರ್‌, ವನ್ಯಜೀವಿ ವಿಭಾಗದ ಶಿವರಾಮ ಬಾಬು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್‌ ಶೆಟ್ಟಿ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ಮುಂದಿನ ಜನಾಂಗಕ್ಕಾಗಿ ಈಗಲೇ ಗಿಡಗಳನ್ನು ಬೆಳೆಸುವ ಕಾರ್ಯವಾಗಬೇಕಿದೆ. ಇರುವ ಗಿಡಗಳ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಈಗಾಗಲೇ ಲಕ್ಷಾಂತರ ಗಿಡಗಳ ನಾಟಿ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಗೇರು ಬೀಜ ಗಿಡಗಳನ್ನೂ ನೆಟ್ಟಿದ್ದೇವೆ. ಸುಮಾರು 600 ಕೆರೆಗಳ ಹೂಳೆತ್ತುವಿಕೆ ನಡೆದಿ ದ್ದು, 100 ದಿನಗಳಲ್ಲಿ 100 ಕೆರೆಗಳ ಹೂಳು ತೆಗೆಯುವ ಕಾರ್ಯ ನಡೆದಿ ದೆ. ಗಿಡ ನಾಟಿಯಲ್ಲಿ ಕ್ರಾಂತಿ ಮಾಡಿದ ಸಾಲು ಮರದ ತಿಮ್ಮಕ್ಕ ಅವರ ಜೀವನೋ ಪಾಯಕ್ಕೆ ಪ್ರತಿ ತಿಂಗಳು 7 ಸಾವಿರ ರೂ. ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆMissing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

Missing ನೇಲ್ಯಕುಮೇರ್‌: ತಡರಾತ್ರಿ ಬಾಡಿಗೆಗೆ ತೆರಳಿದ್ದ ರಿಕ್ಷಾ ಚಾಲಕ ನಿಗೂಢ ನಾಪತ್ತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.