ವಿಶ್ವ ಜಾಂಬೂರಿ: ವಿದ್ಯಾರ್ಥಿಗಳಿಗೆ “ಆರೋಗ್ಯ’ ಭಾಗ್ಯ!
ಜ್ವರ, ಮೈಕೈ ನೋವು ಮೊದಲಾದ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ
Team Udayavani, Dec 27, 2022, 1:38 PM IST
ಮೂಡುಬಿದಿರೆ: ವಿಶ್ವ ಜಾಂಬೂರಿಯಲ್ಲಿ ಸ್ಕೌಟ್ಸ್, ಗೈಡ್ಸ್, ರೇಂಜರ್ಸ್, ರೋವರ್ಸ್ನ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರಿಂದ ಅವರ ಆರೋಗ್ಯಕ್ಕೆ ಆದ್ಯತೆ ನೀಡುವುದು ಬಹುಮುಖ್ಯ. ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದೆ. ದಿನದ 24 ಗಂಟೆಯೂ ದೇಶ ವಿದೇಶದಿಂದ ಆಗಮಿಸಿದ ವಿದ್ಯಾರ್ಥಿಗಳ ಮೇಲೆ ತಜ್ಞ ವೈದ್ಯರ ತಂಡ ನಿಗಾ ಇರಿಸಿ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಐದು ತುರ್ತು ಚಿಕಿತ್ಸಾ ಘಟಕಗಳು, ಮೂರು ಆರೋಗ್ಯ ಕೇಂದ್ರಗಳು, ಎಂಟು ಆ್ಯಂಬುಲೆನ್ಸ್ಗಳ ಜತೆಗೆ ಮಕ್ಕಳ ವಿಶೇಷ ವೈದ್ಯಕೀಯ ತಜ್ಞರು ಸಹಿತ 40 ಮಂದಿ ತಜ್ಞರಿದ್ದರು. ಸಮುದಾಯ ಅಧಿಕಾರಿಗಳು, ಆಶಾಕಾರ್ಯಕರ್ತರನ್ನು ಒಳಗೊಂಡ ಸಮಗ್ರ ತಂಡ ಪಾಳಿಯಲ್ಲಿ ಜಾಂಬೂರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ| ಎಂ. ವಿನಯ್ ಆಳ್ವ, ವೈದ್ಯ ಡಾ| ವಿಷ್ಣು ನೇತೃತ್ವ ಹಾಗೂ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ|ಕಿಶೋರ್ ಕುಮಾರ್ ಸಹಭಾಗಿತ್ವದ ತಂಡ ಜಾಂಬೂರಿಯಲ್ಲಿ ಆರೋಗ್ಯ ರಕ್ಷಣೆಯ ಹೊಣೆಗಾರಿಕೆಯನ್ನು ನಿರ್ವಹಿಸಿದೆ.
ಜಾಂಬೂರಿಯ ಪ್ರಥಮ ದಿನವಾದ ಡಿ. 21ರಂದು 818 ಮಂದಿ, 22ರಂದು 921 ಮಂದಿ, 23ರಂದು 1660 ಮಂದಿ, 24ರಂದು 1995 ಮಂದಿ, ಡಿ. 25ರಂದು 2,695 ಮಂದಿಗೆ ಆಳ್ವಾಸ್ ಕ್ಯಾಂಪಸ್ನ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.
ಐದು ದಿನಗಳಲ್ಲಿ 7,000 ಮಂದಿಗೆ ಚಿಕಿತ್ಸೆ
ಸ್ಕೌಟ್ಸ್, ಗೈಡ್ಸ್, ರೇಂಜರ್ಸ್, ರೋವರ್ಸ್ ನ ವಿದ್ಯಾರ್ಥಿಗಳು ಕಸರತ್ತು ನಡೆಸುವ ವೇಳೆ ಬಹುತೇಕವಾಗಿ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದಿರುವುದೇ ಹೆಚ್ಚು. ಉಳಿದಂತೆ ವಾಂತಿ, ಕೆಮ್ಮು, ಜ್ವರ, ಮೈಕೈ ನೋವು ಮೊದಲಾದ ಆರೋಗ್ಯ ಸಮಸ್ಯೆಗಳಿಗೆ ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಐದು ದಿನಗಳಲ್ಲಿ ಸುಮಾರು 7,000 ಮಂದಿ ಕ್ಯಾಂಪಸ್ ಆವರಣದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.
-ಡಾ| ಕಿಶೋರ್ ಕುಮಾರ್,
ಆರೋಗ್ಯಾಧಿಕಾರಿ, ದ.ಕ. ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.