![Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?](https://www.udayavani.com/wp-content/uploads/2024/12/u-4-415x267.jpg)
ವಿಶ್ವ ಕೊಂಕಣಿ ಸೇವಾ ಪ್ರಶಸ್ತಿ-2017: ನಾಮ ನಿರ್ದೇಶನಕ್ಕೆ ಆಹ್ವಾನ
Team Udayavani, Aug 5, 2017, 9:01 AM IST
![05-MLR-4.jpg](https://www.udayavani.com/wp-content/uploads/2017/08/5/05-MLR-4.jpg)
ಮಂಗಳೂರು: ವಿಶ್ವ ಕೊಂಕಣಿ ಸರದಾರ ಬಸ್ತಿ ವಾಮನ ಶೆಣೈಯವರು 80 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಶೆಣೈ ಅವರ ಹೆಸರಿನಲ್ಲಿ ಎರಡು ಪ್ರಶಸ್ತಿಗಳನ್ನು ಕೊಡಮಾಡಲು ನಿರ್ಧರಿಸಿದೆ. ಕೊಂಕಣಿ ಭಾಷಿಕರಾಗಿ, ಶೈಕ್ಷಣಿಕ, ಆರೋಗ್ಯ, ವೈದ್ಯಕೀಯ, ಸಾಮಾಜಿಕ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವ್ಯಕ್ತಿ ಮಾತ್ರವಲ್ಲದೇ ಕೊಂಕಣಿ ಭಾಷಿಕರಿಂದ ಸ್ಥಾಪಿಸಲಾದ ಶಿಕ್ಷಣ ಸಂಸ್ಥೆ, ಕೊಂಕಣಿ ಭಾಷಿಕರ ಆಡಳಿತವಿರುವ ಸಂಸ್ಥೆಗಳು, ಸಮಾಜ ಸೇವೆ, ಆರೋಗ್ಯ, ವಿಜ್ಞಾನ, ಪತ್ರಿಕಾರಂಗ, ಕಲೆ, ವಾಣಿಜ್ಯೋದ್ಯಮ, ಕ್ರೀಡೆ ಕ್ಷೇತ್ರಗಳನ್ನೂ ಒಳಗೊಂಡಿದೆ. 2020 ಇಸವಿಯ ವೇಳೆಗೆ ಕೊಂಕಣಿ ಸಮಾಜವನ್ನು ಒಂದು ಬಲಿಷ್ಠ ಸಮಾಜವಾಗಿ ಪರಿವರ್ತಿಸಬೇಕೆಂದು ಕನಸು ಕಂಡ ಟಿ. ಮೋಹನದಾಸ ಪೈಯವರು ಈ ಪ್ರಶಸ್ತಿಗಳನ್ನು ಸ್ಥಾಪಿಸಿರುತ್ತಾರೆ. 2 ಪ್ರಶಸ್ತಿಗಳು ತಲಾ 1ಲಕ್ಷ ರೂ. ನಗದು ಹೊಂದಿರುತ್ತದೆ. ಪುರುಷರಿಗೆ ಹಾಗೂ ಮಹಿಳೆಯರಿಗಾಗಿ ತಲಾ ಒಂದು ಪ್ರಶಸ್ತಿಯನ್ನು ಪ್ರಮಾಣಪತ್ರದೊಂದಿಗೆ ಪ್ರದಾನಮಾಡಲಾಗುತ್ತದೆ.
ನಿಯಮಗಳು ನಾಮನಿರ್ದೇಶನಗೊಂಡವರು ಕೊಂಕಣಿಮಾತೃಭಾಷೆಯಾಗಿರುವ ಏಕ ವ್ಯಕ್ತಿಯಾಗಿರಬಹುದು ಅಥವಾ ಒಂದು ಕೊಂಕಣಿ ಸಂಸ್ಥೆಯಾಗಿರಲೂಬಹುದು. ಮತ್ತು 18ವರ್ಷಕ್ಕೆ ಮೇಲ್ಪಟ್ಟಿರಬೇಕು. ನಾಮ ನಿರ್ದೇಶಿತ ಸಂಸ್ಥೆಗಳು ಕೊಂಕಣಿ ಮಾತೃಭಾಷಿಕರ ಆಡಳಿತಕ್ಕೊಳಪಟ್ಟಿರಬೇಕು ಮತ್ತು ಅವುಗಳ ಸ್ಥಾಪಕರು ಕೊಂಕಣಿಭಾಷಿಕರಾಗಿರಬೇಕು. ನಾಮ ನಿರ್ದೇಶನದ ಸಂದರ್ಭ ಕನಿಷ್ಠ 5 ವರ್ಷದಿಂದ ಅಸ್ತಿತ್ವದಲ್ಲಿ ಇರಬೇಕಾಗುತ್ತದೆ. ವ್ಯಕ್ತಿಗಳು ಅಥವಾ ಸಂಸ್ಥೆಗಳು ಸ್ವತ: ತಮ್ಮ ಬಗ್ಗೆ ನಾಮನಿರ್ದೇಶನ ಮಾಡಬಹುದಾಗಿದೆ.
ಅರ್ಜಿಗಳನ್ನು www.vishwakonkani.org ಅಂತರ್ಜಾಲದಿಂದ ಪಡೆಯ ಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು “”ಅಧ್ಯಕ್ಷರು, ಬಿ.ವಿ.ಎಸ್ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಆಯ್ಕೆ ಸಮಿತಿ, ವಿಶ್ವ ಕೊಂಕಣಿ ಕೇಂದ್ರ, ಲೊಬೊ ಪ್ರಭು ನಗರ ಕೊಂಕಣಿ ಗಾಂವ, ಶಕ್ತಿನಗರ, ಮಂಗಳೂರು ವಿಳಾಸಕ್ಕೆ ಸೆ. 20ರ ಒಳಗೆ ಕಳುಹಿಸಿ ಕೊಡಬೇಕು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
![Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?](https://www.udayavani.com/wp-content/uploads/2024/12/u-4-415x267.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.