ವಿಶ್ವ ಜಾಂಬೂರಿ ಸಾಂಸ್ಕೃತಿಕ ಸಿರಿ ಸಂಭ್ರಮದ ಗರಿ; ವಿಶಿಷ್ಟ ಉತ್ಸವಕ್ಕೆ ಸೊಗಸಿನ ಸಮಾಪನ


Team Udayavani, Dec 27, 2022, 7:00 AM IST

ವಿಶ್ವ ಜಾಂಬೂರಿ ಸಾಂಸ್ಕೃತಿಕ ಸಿರಿ ಸಂಭ್ರಮದ ಗರಿ; ವಿಶಿಷ್ಟ ಉತ್ಸವಕ್ಕೆ ಸೊಗಸಿನ ಸಮಾಪನ

ಮೂಡುಬಿದಿರೆ: ಸಾಂಸ್ಕೃತಿಕ ಕಾರ್ಯಕಲಾಪ, ಸಾಹಸ- ವಿನೋದಾವಳಿಯ ಸಂಗಮ  ವಾಗಿ ಆರು ದಿನಗಳಿಂದ ಆಳ್ವಾಸ್‌ ಆವರಣದ 150 ಎಕ್ರೆ ಪ್ರದೇಶದಲ್ಲಿ ಮೂಡಿಬಂದ “ವಿಶ್ವ ಜಾಂಬೂರಿ’ಯು ವಿಶ್ವದ “ಸಾಂಸ್ಕೃತಿಕ ಚಳವಳಿ’ಗೆ ರಾಜ್ಯದ ಕರಾವಳಿ ಭಾಗದ ಹೊಸ ಅಧ್ಯಾಯ ಸೇರಿದಂತಾಗಿದೆ.

ದೇಶೀಯ ಮಟ್ಟದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ -ಸಂಭ್ರಮಿಸಿದ ಮೊದಲ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಾಂಬೂರಿ ಇದಾಗಿದೆ. ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಆಟೋಟ-ಚಟುವಟಿಕೆಗಳ ವಿಧ್ಯುಕ್ತ ಕಾರ್ಯಕ್ರಮಗಳಿಗೆ ಸೋಮವಾರ ಅಂತಿಮ ತೆರೆ ಎಳೆಯಲಾಯಿತು. ಆದರೆ ಪಂಚ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂಗಳವಾರ ರಾತ್ರಿಯವರೆಗೂ ನಡೆಯಲಿವೆ. ಚಿಕ್ಕಮಗಳೂರಿನ ವಿದ್ಯಾರ್ಥಿ ಕಿಶೋರ್‌ರ ಪ್ರಕಾರ “ಬಹು ಕನಸು ಗಳೊಂದಿಗೆ ಇಲ್ಲಿಗೆ ಆಗಮಿಸಿದ್ದೆವು. ಆದರೆ ನಮ್ಮ ನಿರೀಕ್ಷೆಗಿಂತ ಹೆಚ್ಚು ಕನಸುಗಳನ್ನು ಇಲ್ಲಿ ಬಿತ್ತಿತು. ಎಲ್ಲವೂ ವಿನೂತನ ಅನುಭವ. ವಿಸ್ಮಯವೆನಿಸಿತು’ ಎನ್ನುತ್ತಾರೆ.

ಎಲ್ಲವೂ ದಾಖಲೆ!
ಆವರಣದಲ್ಲಿ ಸೃಷ್ಟಿಸಲಾಗಿದ್ದ “ಅರಣ್ಯ’ದಲ್ಲಿ ನಿತ್ಯವೂ 25 ಸಾವಿರ ಮಂದಿ ಸಂಚರಿಸಿದ್ದಾರೆ. ಸುಮಾರು 2 ಕೋ.ರೂ ವೆಚ್ಚದಲ್ಲಿ ನಿರ್ಮಿಸಲಾದ “ಪುಷ್ಪ ಪ್ರದರ್ಶನ’ ಎಲ್ಲರ ಮೆಚ್ಚುಗೆ ಗಳಿಸಿತು. 3.5 ಎಕ್ರೆಯ ಕೃಷಿ ಮೇಳದಲ್ಲಿ 84 ವಿಧದ ತರಕಾರಿಗಳು, ಸಿರಿಧಾನ್ಯ, 550 ವಿಧದ ಭತ್ತದ ತಳಿಗಳ ಪ್ರದರ್ಶನ, 450 ಕೃಷಿ ಮಳಿಗೆಗಳು ಗಮನಸೆಳೆದವು. ಸರಾಸರಿ 15 ಸಾವಿ ರಕ್ಕೂ ಹೆಚ್ಚು ಜನರು ನಿತ್ಯವೂ ವಿಜ್ಞಾನ ಮೇಳಕ್ಕೆ ಆಗಮಿಸಿದ್ದರು. ಆಂಧ್ರ, ಕೇರಳ ಸಹಿತ ವಿವಿಧ ರಾಜ್ಯಗಳ 1 ಸಾವಿರಕ್ಕೂ ಅಧಿಕ ವಿಜ್ಞಾನ ಮಾದರಿಗಳು ಪ್ರದರ್ಶಿತವಾದವು. ಆಳ್ವಾಸ್‌ನ 12 ಕಿ.ಮೀ. ವ್ಯಾಪ್ತಿಯಲ್ಲಿ ವಿದ್ಯುದ್ದೀಪಗಳನ್ನು ಅಳವಡಿಸಿ ಜೈನಕಾಶಿಗೆ ಮೆರುಗು ನೀಡಲಾಗಿತ್ತು.

8 ಆ್ಯಂಬುಲೆನ್ಸ್‌, 3 ಆರೋಗ್ಯ ಕೇಂದ್ರಗಳು, 5 ತುರ್ತು ಚಿಕಿತ್ಸಾ ಘಟಕಗಳಲ್ಲಿ ಉಚಿತ ಚಿಕಿತ್ಸೆ ಹಾಗೂ ಔಷಧದ ವ್ಯವಸ್ಥೆ ಮಾಡಲಾಗಿತ್ತು. ಚಿತ್ರಸಂತೆಯಲ್ಲಿ 400ಕ್ಕೂ ಅಧಿಕ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು.

ದೇಶ ವಿದೇಶದ 10 ಮಂದಿ
ಛಾಯಾಚಿತ್ರಗ್ರಾಹಕರು ಭಾಗವಹಿಸಿ ದ್ದರು. 50ಕ್ಕೂ ಅಧಿಕ ಪುಸ್ತಕ ಮಳಿಗೆಯಲ್ಲಿ 50 ಸಾವಿರಕ್ಕೂ ಅಧಿಕ ಪುಸ್ತಕಗಳಿದ್ದವು. 150 ಆಹಾರ ಮಳಿಗೆ, 100 ಸ್ವದೇಶಿ ಮಳಿಗೆಗಳಿದ್ದವು. 2 ಸಾವಿರ ಆಳ್ವಾಸ್‌ನ ಹಾಗೂ 2 ಸಾವಿರ ಸ್ಕೌಟ್ಸ್‌, ಗೈಡ್ಸ್‌ನ ಸ್ವಯಂಸೇವಕರು ಪಾಲ್ಗೊಂಡಿದ್ದರು. 10 ವೇದಿಕೆಗಳಿದ್ದವು. 2400 ಜನರು ಕುಳಿತುಕೊಳ್ಳಬಹುದಾದ ಗ್ಯಾಲರಿ (ಮುಖ್ಯ ವೇದಿಕೆ) ಹಾಗೂ 60 ಸಾವಿರ ಕುರ್ಚಿಗಳು ಬಳಕೆಯಾಗಿವೆ. ಎಲ್ಲವೂ ಹೊಸ ದಾಖಲೆ!

ವಸತಿ ಬಹುವಿಧ!
48,570 ವಿದ್ಯಾರ್ಥಿಗಳಿಗೆ 27 ವಸತಿ ನಿಲಯಗಳಲ್ಲಿ ವಸತಿ ವ್ಯವಸ್ಥೆಮಾಡಲಾಗಿತ್ತು. ಕಲಾವಿದರಿಗೆ ಸ್ಥಳೀಯವಾಗಿ 380 ರೂಂ ವ್ಯವಸ್ಥೆ, 2 ಸಾವಿರ ಸಿಬಂದಿಗೆ ಜಿ.ವಿ. ಪೈ ಹಾಸ್ಟೆಲ್‌ನಲ್ಲಿ ಹಾಗೂ 6 ಪಿಜಿ, 10 ಗೆಸ್ಟ್‌ ಹೌಸ್‌ಗಳಲ್ಲಿ ವಸತಿ ಹಾಗೂ ಹೊರದೇಶದ ಪ್ರತಿನಿಧಿಗಳಿಗೆ ಗೆಸ್ಟ್‌ಹೌಸ್‌ ಹಾಗೂ ಆಳ್ವಾಸ್‌ ಶೋಭಾವನದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿತ್ತು.

ಎಲ್ಲವೂ ಸ್ವತ್ಛ-ಸುಂದರ!
ಆಳ್ವಾಸ್‌ ಕ್ಯಾಂಪಸ್‌ನಲ್ಲಿ ಯಾವುದೇ ಕಾರ್ಯಕ್ರಮವಿದ್ದರೂ ಸ್ವತ್ಛತೆ, ಶಿಸ್ತು ಹಾಗೂ ಸಮಯ ಪಾಲನೆಗೆ ಆದ್ಯತೆ. ಈ ಮೂರು ಅಂಶಗಳ ಮೂಲಕವೇ ಡಾ| ಎಂ. ಮೋಹನ ಆಳ್ವ ಅವರು ಗುರುತಿಸಿಕೊಂಡಿದ್ದಾರೆ. ವಿಶ್ವ ಜಾಂಬೂರಿಗೆ ವಿಶೇಷ ಮಾರ್ಗದರ್ಶನ ನೀಡಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು ಡಾ| ಆಳ್ವ ಅವರು. ದೇಶ-ವಿದೇಶದ ಜನ ಭಾಗವಹಿಸಿದ್ದರೂ ಎಲ್ಲೂ ಈ ಮೂರು ಅಂಶಗಳಿಗೆ ಕೊರತೆಯಾಗಲಿಲ್ಲ. ಇದರಲ್ಲಿ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ನ ಪದಾಧಿಕಾರಿಗಳ-ವಿದ್ಯಾರ್ಥಿಗಳ ಹಲವು ತಿಂಗಳ ಶ್ರಮ ಉಲ್ಲೇಖನೀಯ. ಆಳ್ವಾಸ್‌ ಸಹಿತ ವಿವಿಧ ಶಾಲೆ-ಕಾಲೇಜಿನ, ಸಂಘ ಸಂಸ್ಥೆಗಳ ಪಾತ್ರ ಕೂಡ ಹಿರಿದು.

 

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.