‘ಯಕ್ಷಗಾನ ಸಾಂಸ್ಕೃತಿಕ ಸಂಪನ್ನತೆಯ ಮಹಾನ್‌ ಕಲೆ’


Team Udayavani, Apr 27, 2018, 10:22 AM IST

27-April-4.jpg

ಮೂಡಬಿದಿರೆ: ಯಕ್ಷಗಾನ ಸಾಂಸ್ಕೃತಿಕ ಸಂಪನ್ನತೆಯ ಮಹಾನ್‌ ಕಲೆ. ಮನುಷ್ಯರನ್ನು ಆಧ್ಯಾತ್ಮಿಕವಾಗಿ ಶ್ರೀಮಂತಗೊಳಿಸುವ ಕಲೆ. ಯಾವುದೇ ವಿದ್ಯೆಯನ್ನು ಕಲಿಯಲು ನಾಯಿ ನಿದ್ರೆ, ಬಕ ಧ್ಯಾನ, ಕಾಕ ಚೇಷ್ಟೆ, ಮಿತಾಹಾರಿ ಹಾಗೂ ಗೃಹತ್ಯಾಗಿ ಎಂಬ ಗುಣಗಳಿರಬೇಕು ಎಂಬುದು ಯಕ್ಷಗಾನಕ್ಕೂ ಅನ್ವಯ. ಪಾಠದೊಂದಿಗೆ ಯಕ್ಷಗಾನವನ್ನೂ ಕಲಿತು, ಶರೀರ, ಬುದ್ಧಿ, ಮನಸ್ಸುಗಳ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಿರಿ ಎಂದು ಯಕ್ಷಗಾನ ಕಲಾವಿದ, ಯಕ್ಷಗಾನ ಅಕಾಡೆಮಿಯ ನೂತನ ಸದಸ್ಯ ಜಬ್ಟಾರ್‌ ಸಮೋ ತಿಳಿಸಿದರು.

ಬುಧವಾರ ಯಕ್ಷ ದೇಗುಲ ಕಾಂತಾವರದ ಆಶ್ರಯದಲ್ಲಿ ಕಾಂತಾ ವರ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಎ. 11ರಿಂದ 25ರವರೆಗೆ ನಡೆದ ಉಚಿತ ಯಕ್ಷ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಿರಿಯ, ಹಿರಿಯ ಹಾಗೂ ಪ್ರೌಢ ವಿಭಾಗಗಳಲ್ಲಿ ಪಾಲ್ಗೊಂಡಿದ್ದ, ಉಡುಪಿ ಮತ್ತು ದ.ಕ. ಜಿಲ್ಲಾವ್ಯಾಪ್ತಿಯ 87 ಮಂದಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕಪಟ್ಟಿ ವಿತರಿಸಿ ಅವರು ಮಾತನಾಡಿದರು. ಶುಲ್ಕಗಳ ಶಿಬಿರಗಳೇ ವಿಜೃಂಭಿಸುತ್ತಿರುವ ಈ ಕಾಲದಲ್ಲಿ ಯಾವುದೇ ಶುಲ್ಕವಿಲ್ಲದೆ ಶಿಬಿರವನ್ನು ಒಂದು ತಪಸ್ಸಿನಂತೆ ಮಹಾವೀರ ಪಾಂಡಿಯವರು ನಡೆಸಿದ್ದಾರೆ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಗಳಾಗಿ ಅಮೆ ರಿಕಾದಲ್ಲಿ ಎಂಜಿನಿಯರ್‌ ಆಗಿದ್ದು ಉದ್ಯೋಗದೊಂದಿಗೆ ಯಕ್ಷಗಾನದ ಕಂಪನ್ನೂ ಪಸರಿಸುತ್ತಿರುವ ಹವ್ಯಾಸಿ ಕಲಾವಿದ ಕೌಡೂರು ರಘು ರಾಮ ಶೆಟ್ಟಿ, ‘ಕಣಿಪುರ’ ಯಕ್ಷಗಾನ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಎಂ. ನಾ. ಚಂಬಲ್ತಿಮಾರ್‌, ಗ್ರಾ.ಪಂ. ಸದಸ್ಯೆ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು.

ಯಕ್ಷ ದೇಗುಲದ ಅಧ್ಯಕ್ಷ ಶ್ರೀಪತಿ ರಾವ್‌ ಬೆಳುವಾಯಿ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಧರ್ಮರಾಜ ಕಂಬಳಿ, ಪ್ರೊ| ಬಿ. ಪದ್ಮನಾಭ ಗೌಡ, ಗೋವರ್ಧನ ಎಂ., ಸಂದೀಪ್‌ ಪುತ್ರನ್‌ ಬೆಳ್ಮಣ್‌ ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ಯಕ್ಷಗುರು ಮಹಾವೀರ ಪಾಂಡಿ ನಿರೂಪಿಸಿದರು.

ಭಾಗವಹಿಸಿದ ಕಲಾವಿದರು
ಹದಿನೈದು ದಿನಗಳ ಶಿಬಿರದಲ್ಲಿ ದಿವಾಣ ಶಿವಶಂಕರ ಭಟ್‌, ದೀವಿತ್‌ ಎಸ್‌. ಕೋಟ್ಯಾನ್‌, ಹರಿರಾಜ್‌ ಶೆಟ್ಟಿಗಾರ್‌ ಕಿನ್ನಿಗೋಳಿ, ಗಣೇಶ್‌ ಶೆಟ್ಟಿ ಸಾಣೂರು (ನಾಟ್ಯ), ಶ್ರೀಧರ ಡಿ.ಎಸ್‌. , ಉಜಿರೆ ಅಶೋಕ ಭಟ್‌, ಕೆರೆಗದ್ದೆ ವೆಂಕಟರಮಣ ಭಟ್‌, ಗಾಳಿಮನೆ ವಿನಾಯಕ ಭಟ್‌ (ಪ್ರಸಂಗ ಮಾಹಿತಿ, ಅರ್ಥಗಾರಿಕೆ), ಚಂದ್ರನಾಥ ಬಜಗೋಳಿ (ಅಭಿನಯ ಸಿದ್ದಾಂತ), ಎಂ. ನಾ. ಚಂಬಲ್ತಿಮಾರ್‌ (ಯಕ್ಷಗಾನ ಮತ್ತು ಮಾಧ್ಯಮ), ದೇವಾನಂದ ಭಟ್‌ (ಪಾತ್ರಗಳ ಮೌಲ್ಯ ವಿವೇಚನೆ), ಸುಗಂಧ ಕುಮಾರ್‌ ಕಾರ್ಕಳ, ಶಶಿಕಲಾ ಹೆಗ್ಡೆ ಕಾರ್ಕಳ (ಕಲಾಭಿರುಚಿ, ಕಲಾವಿದರ ವ್ಯಕ್ತಿತ್ವ) ಭಾಗವಹಿಸಿದ್ದರು.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.