ಎತ್ತಿನಹೊಳೆ: ಇಂದಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ
Team Udayavani, Feb 10, 2017, 3:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳಿವಿಗಾಗಿ ಹಾಗೂ ನೇತ್ರಾವತಿ ನದಿಯ ರಕ್ಷಣೆಗಾಗಿ ಅವೈಜ್ಞಾನಿಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈಬಿಡುವ ನಿಟ್ಟಿನಲ್ಲಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಆಶ್ರಯದಲ್ಲಿ ಫೆ. 10ರಿಂದ ನಡೆಯುವ ಆಮರಣಾಂತ ಉಪವಾಸ ಸತ್ಯಾಗ್ರಹ ಹಾಗೂ ಬೃಹತ್ ಪ್ರತಿಭಟನೆಯು ನಾಡಿನ ಸಮಸ್ತ ಜನರ ಭಾಗವಹಿಸುವಿಕೆಯೊಂದಿಗೆ ಜನಾಂದೋಲನವಾಗಿ ಮೂಡಿಬರಲಿ ಎಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ಗೌರವಾಧ್ಯಕ್ಷ ಎಸ್. ಗಣೇಶ್ ರಾವ್ ಮನವಿ ಮಾಡಿದ್ದಾರೆ.
ಫೆ. 10ರಂದು ಬೆಳಗ್ಗೆ 9.45ಕ್ಕೆ ನಗರದ ಪುರಭವನದ ಬಳಿಯಿರುವ ಗಾಂಧಿ ಪಾರ್ಕ್ನಲ್ಲಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಹಿಂಸಾ ಮಾರ್ಗದ ಆಮರಣಾಂತ ಉಪವಾಸಕ್ಕೆ ಪ್ರೇರಣೆ ತೆಗೆದುಕೊಂಡು ಅಲ್ಲಿಂದ 10.15ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ತೆರಳಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಹಿಂದೂ ಧರ್ಮದ ಸ್ವಾಮೀಜಿಗಳು, ಕ್ರೈಸ್ತ ಧರ್ಮದ ಗುರುಗಳು, ಮುಸ್ಲಿಂ ಧರ್ಮ ಗುರುಗಳು, ಜೈನ ಧರ್ಮದ ಗುರುಗಳು, ಜಿಲ್ಲೆಯ ಹೋರಾಟಗಾರರು, ಮುಖಂಡರು, ರಾಜಕೀಯ ಧುರೀಣರು, ತುಳುನಾಟಕ ರಂಗದ ಪ್ರಮುಖರು ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಬಂಧುಗಳ ಉಪಸ್ಥಿತಿಯಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು. 11.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನ ಸಭೆ ನಡೆಯಲಿದೆ. ಜಿಲ್ಲೆಯ ಎಲ್ಲ ಚುನಾಯಿತ ಶಾಸಕರಿಗೆ, ಜನಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದೆ. ಹೋರಾಟದಲ್ಲಿ ಎಲ್ಲರೂ ಭಾಗಿಯಾಗಿ ಯೋಜನೆ ರದ್ದುಗೊಳ್ಳುವಂತೆ ಮಾಡಬೇಕು ಎಂದವರು ತಿಳಿಸಿದ್ದಾರೆ.
ನ್ಯಾಯ ಸಿಗುವ ತನಕ …
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಕೊಡುವ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ನೀರೆಲ್ಲಿದೆ ಎಂಬುದು ಪ್ರಮುಖ ಪ್ರಶ್ನೆ. ಅವೈಜ್ಞಾನಿಕವಾದ ಹಾಗೂ ಇಲ್ಲದ ನೀರನ್ನು ಕೊಡಲು ಮುಂದಾಗಿರುವ ಯೋಜನೆಯನ್ನು ತತ್ಕ್ಷಣ ನಿಲ್ಲಿಸಬೇಕು ಹಾಗೂ ಕೋಲಾರ- ಚಿಕ್ಕಮಗಳೂರಿನಲ್ಲಿ ಕೆರೆಗಳ ಹೂಳೆತ್ತುವ ಮೂಲಕ ಶಾಶ್ವತ ನೀರಾವರಿ ಯೋಜನೆ ಕೈಗೊಳ್ಳಬೇಕು. ನ್ಯಾಯ ಸಿಕ್ಕಿಲ್ಲವಾದರೆ ಹೋರಾಟ ಮುಂದುವರಿಯುತ್ತದೆ. ಉಪವಾಸದ ವೇಳೆ ಯಾವುದೇ ಸಮಸ್ಯೆಗಳಾದಲ್ಲಿ ಅದರ ಪರಿಣಾಮ ಜಿಲ್ಲೆಯಲ್ಲಿ ಕಾಣಲಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.