![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 29, 2022, 11:54 AM IST
ಉಳ್ಳಾಲ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಉಳಿಸಲು ಹೋದ ಆಕೆಯ ಸ್ನೇಹಿತ ಸಮುದ್ರಪಾಲದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು,ಯುವತಿಯನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದಾರೆ.
ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿ.ಸೋಜಾ(28) ಮೃತಪಟ್ಟ ಯುವಕ. ಈಕೆಯ ಸ್ನೇಹಿತೆ ಅಶ್ವಿತಾ ಫೆರಾವೋರನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಲಾಯ್ಡ್ ಡಿ.ಸೋಜಾ ಅಶ್ವಿತಾಳನ್ಬು ಕಳೆದ ಎಂಟು ವರ್ಷದಿಂದ ಪ್ರೀತಿಸುತ್ತಿದ್ದು, ಈ ನಡುವೆ ಲಾಯ್ಡ್ ಇನ್ನೊರ್ವ ಯುವತಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಅಶ್ವಿತಾಳ ಆರೋಪವಾಗಿತ್ತು. ಈ ಹಿನ್ನಲೆಯಲ್ಲಿ ಮಾತುಕತೆಗೆ ಸೋಮೇಶ್ವರ ಸಮುದ್ರ ತೀರಕ್ಕೆ ಕರೆದಿದ್ದು, ಲಾಯ್ಡ್ ಮತ್ತು ಅಶ್ವಿತಾಳ ನಡುವೆ ಮಾತಿನ ಚಕಮಕಿ ನಡೆದು ಸಮುದ್ರಕ್ಜೆ ಹಾರಿದ್ದಾಳೆ.
ಆಕೆಯನ್ಬು ರಕ್ಷಿಸುವ ಭರದಲ್ಲಿ ಲಾಯ್ಡ್ ಸಮುದ್ರಕ್ಕೆ ಹಾರಿದ್ದು, ಸ್ಥಳೀಯ ಜೀವರಕ್ಷಕರಾದ ಅಶೋಕ್ ಮತ್ತು ಅವರ ತಂಡ ಅಶ್ವಿತಾಳನ್ನು ರಕ್ಷಿಸಲು ಯಶಸ್ವಿಯಾಗಿದ್ದು ಲಾಯ್ಡ್ ಡಿಸೋಜ ಸಮುದ್ರದಲ್ಲಿಮುಳುಗಿದ್ದು ಆತನ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಲಿಲ್ಲ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.