10ರೊಳಗೆ ರೈಲ್ವೆ ಮೇಲ್ಸೇತುವೆ ಸಭೆ: ಸಚಿವರ ಭರವಸೆ


Team Udayavani, Feb 28, 2017, 1:22 PM IST

dvg3.jpg

ದಾವಣಗೆರೆ: ಅಶೋಕ ಚಿತ್ರಮಂದಿರ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಮಾ.10ರ ಒಳಗೆ ಸಭೆ ಸೇರಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ದಶಕಗಳಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಆಗುತ್ತಿರುವ ರೈಲ್ವೆ ಗೇಟ್‌ ಸಮಸ್ಯೆ ನಿವಾರಣೆಗೆ ಸೋಮವಾರ ಗೇಟ್‌ ಬಳಿಯೇ ಧರಣಿ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿ. ಧರಣಿನಿರತ ಜೆಡಿಎಸ್‌ ಕಾರ್ಯಕರ್ತರ ಮನವಿ ಸೀÌಕರಿಸಿ, ಮಾತನಾಡಿದ ಸಚಿವರು, ಇಲ್ಲಿ ನನ್ನ ಜಾಗ ಇದೆ.

ಅದೇ ಕಾರಣಕ್ಕೆ ಮೇಲ್ಸೇತುವೆ ನಿರ್ಮಾಣ ಕಾರ್ಯಕ್ಕೆ ಹಿಂದೇಟು ಹಾಕಲಾಗುತ್ತಿದೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ನಗರದ ಜನತೆಗೆ ಒಳಿತಾಗುವುದಾದರೆ ನಾನು ನನ್ನ ಜಾಗ ಬಿಟ್ಟುಕೊಡಲು ಸಿದ್ಧನಿದ್ದೇನೆ. ಆದರೆ, ರೈಲ್ವೆ ಇಲಾಖೆ ಇದುವರೆಗೂ ನಿರ್ಮಾಣ ಮಾಡಿರುವ ಬಹುತೇಕ ಬ್ರಿಡ್ಜ್ಗಳು ಸಮಸ್ಯೆ ಉಂಟುಮಾಡಿವೆ. ಇದೇ ಕಾರಣಕ್ಕೆ ಕಾಮಗಾರಿ ವಿಳಂಬ ಆಗುತ್ತಿದೆ ಎಂದರು. ಇದುವರೆಗೆ ರೈಲ್ವೆ ಇಲಾಖೆಯಿಂದ ನೀಡಿರುವ ನೀಲ ನಕಾಶೆಗಳು ಸಮಸ್ಯೆ ಪರಿಹಾರಕ್ಕೆ ಪೂರಕವಾಗಿಲ್ಲ.

ಬದಲಿಗೆ ಇನ್ನೊಂದು ರೀತಿಯ ಸಮಸ್ಯೆ ಉಂಟುಮಾಡುವ ರೀತಿಯಲ್ಲಿವೆ. ಇದನ್ನು ಮನಗಂಡೇ ಉತ್ತಮ ಯೋಜನೆ ರೂಪಿಸಲು ತಿಳಿಸಲಾಗಿತ್ತು. ಆದರೆ, ಇಲಾಖೆಯ ಅಧಿಕಾರಿಗಳು ಕೊಟ್ಟ ನೀಲ ನಕಾಶೆಯಲ್ಲಿಯೇ ಒಂದನ್ನು ಒಪ್ಪಿಕೊಳ್ಳಿ ಎಂಬುದಾಗಿ ಹೇಳುತ್ತಿದ್ದಾರೆ. ಇದು ಸಾಧ್ಯವಿಲ್ಲ. ಮೇಲ್ಸೇತುವೆ ಸಂಬಂಧ ರೈಲ್ವೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯೊಂದಿಗೆ ಮಾ. 10ರ ಒಳಗೆ ಸಭೆ ನಡೆಸುವೆ ಎಂದು ಅವರು ಭರವಸೆ ನೀಡಿದರು. 

ಇದಕ್ಕೂ ಮುನ್ನ ಮಾತನಾಡಿದ ಜೆಡಿಎಸ್‌ ಯುವ ಘಟಕದ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾ ಖಾನ್‌, ಹಲವು ದಶಕಗಳಿಂದಲೂ ಸಾರ್ವಜನಿಕರಿಗೆ ಈ ರೈಲ್ವೆ ಗೇಟ್‌ ಸಮಸ್ಯೆ ಕಾಡುತ್ತಿದೆ. ಹಳೆ ಭಾಗದ ಜನರು ಈ ಭಾಗಕ್ಕೆ ಬರಲು ಪ್ರತಿದಿನ ಪರದಾಡಬೇಕಿದೆ. ದಿನಕ್ಕೆ 30ಕ್ಕೂ ಹೆಚ್ಚು ಬಾರಿ ರೈಲ್ವೆ ಗೇಟ್‌ ಮುಚ್ಚುವುದರಿಂದ ವಾಹನ ಸವಾರು ಕಿರಿಕಿರಿ ಅನುಭವಿಸುತ್ತಾರೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಹಲವು ಬಾರಿ ಹೋರಾಟ ನಡೆಸಲಾಗಿದೆ.

ಆದರೆ, ಯಾರೂ ಸಹ ಸ್ಪಂದಿಸಲ್ಲ ಎಂದು ಅವರು ಹೇಳಿದರು. ಇಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲು ಕೇಂದ್ರ ರೈಲ್ವೆ ಇಲಾಖೆ 37 ಕೋಟಿ ರೂ. ಮಂಜೂರುಮಾಡಿ ನಾಲ್ಕು ವರ್ಷ ಕಳೆದಿವೆ. ಆದರೆ, ಕಾಮಗಾರಿ ಮಾತ್ರ ಇದುವರೆಗೆ ಆರಂಭವೇ ಆಗಿಲ್ಲ. ರಾಜ್ಯ ಸರ್ಕಾರ ತನ್ನದೇನು ತಪ್ಪಿಲ್ಲ ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿದರೆ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿದೆ. ನಿಜಕ್ಕೂ ಸಮಸ್ಯೆ ಯಾರದ್ದು ಎಂಬುದು ತಿಳಿಯಬೇಕು.

ಜೊತೆಗೆ ಶೀಘ್ರ ಬ್ರಿಡ್ಜ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು. ರೈಲ್ವೆ ಹೋರಾಟಗಾರ ಎಂ.ಎಸ್‌.ಕೆ. ಶಾಸ್ತ್ರಿ, ಜೆಡಿಎಸ್‌ನ ಸಂಗನಗೌಡ, ಶ್ರೀನಿವಾಸ್‌ ಬಸಾಪತಿ, ಟಿ. ಅಸYರ್‌, ಸಾದಿಕ್‌, ಟಿ. ಮೊಹಮ್ಮದ್‌ ಗೌಸ್‌ ಪೀರ್‌, ಅನೀಸ್‌ ಪಾಷ, ಬಾತಿ ಶಂಕರ್‌, ಕೆ.ಎ. ಪಾಪಣ್ಣ, ಕೆ. ದಾದಾಪೀರ್‌, ಗುರುಪಾದಯ್ಯ ಮಠದ್‌ ಇತರೆ ಪ್ರಮುಖರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಧರಣಿಗೂ ಮುನ್ನ ಕಾರ್ಯಕರ್ತರು ಜಯದೇವ ವೃತ್ತದಿಂದ ಮೆರವಣಿಗೆ ನಡೆಸಿದರು.  

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.