174 ಕ್ವಿಂಟಲ್‌ ಪಡಿತರ ವಶ


Team Udayavani, Jul 18, 2017, 1:37 PM IST

18-DV-3.gif

ಹರಿಹರ: ಬಡವರಿಗೆ ವಿತರಿಸಬೇಕಾದ ಪಡಿತರ ಧಾನ್ಯಗಳ ಅಕ್ರಮ ದಾಸ್ತಾನಿನ ಮೇಲೆ ಭಾನುವಾರ ರಾತ್ರಿ ಹಾಗೂ ಸೋಮವಾರ ಸಂಜೆ ದಾಳಿ ನಡೆಸಿರುವ ಅಧಿಕಾರಿಗಳು ಒಟ್ಟು 174 ಕ್ವಿಂಟಲ್‌ ಅನ್ನಭಾಗ್ಯ ಧಾನ್ಯ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ್‌ ಗಂಗಲ್‌ ನೇತೃತ್ವದ ತಂಡ ಭಾನುವಾರ ರಾತ್ರಿ ಕೈಗಾರಿಕಾ ಪ್ರದೇಶದ ಗೋದಾಮಿನ ಮೇಲೆ ದಾಳಿ ನಡೆಸಿದಾಗ 330 ಚೀಲ ಅಕ್ಕಿ, 14 ಚೀಲ ಗೋಧಿ ಪತ್ತೆಯಾಗಿದೆ. 2.15 ಲಕ್ಷ ಅಕ್ಕಿ, 6200 ರೂ. ಗೋಧಿ ಸೇರಿದಂತೆ ಒಟ್ಟು 15290 ಕಿಲೋ ಅನ್ನಭಾಗ್ಯ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಡಿತರ
ಧಾನ್ಯದ ಈ ಅಕ್ರಮ ದಂದೆಕೋರ ಎನ್ನಲಾದ ಆರೋಪಿ ತಾಜುದ್ದೀನ್‌ ದಾಳಿ ವೇಳೆ ಪರಾರಿಯಾಗಿದ್ದು, ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆ ಮೇಲೂ ದಾಳಿ: ಪ್ರಭಾವಿಯಾಗಿರುವ ತಾಜುದ್ದೀನ್‌ ಮನೆಯಲ್ಲೂ ಅಕ್ರಮ ಧಾನ್ಯ ಸಂಗ್ರಹಿಸಿದ್ದಾನೆ ಎಂಬ ಮಾಹಿತಿ ಮೇರೆಗೆ ಮತ್ತೆ ಸೋಮವಾರ ಸಂಜೆ 6-30ಕ್ಕೆ ನಗರದ ಗೌಸಿಯಾ ಕಾಲೋನಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಮನೆ ಎದುರಿನ ಗೋಡೌನ್‌ನಲ್ಲಿ 30 ಸಾವಿರ ರೂ ಬೆಲೆಯ, ತಲಾ 40 ಕೆ.ಜಿ.ಯ 56 ಚೀಲ ಅನ್ನಭಾಗ್ಯ ಅಕ್ಕಿ ಪತೆಯಾಗಿದ್ದು, ಜಪು¤ ಮಾಡಲಾಗಿದೆ.
ಸರ್ಕಾರ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿಯನ್ನು ಪಾಲೀಶ್‌ ಮಾಡಿ, ನಕಲಿ ಬ್ರಾಂಡ್‌ ಮುದ್ರಿತವಾದ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿ, ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಸಿಪಿಐ ಲಕ್ಷಣ್‌ ನಾಯ್ಕ, ಪಿಎಸ್‌ಐ ಸಿದ್ದೇಗೌಡ, ಎಎಸ್‌ಐ ಮಾರಣ್ಣ, ಆಹಾರ ನಿರೀಕ್ಷಕ ಯು.ಎಚ್‌.ರಮೇಶ್‌ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇದು ಎರಡನೇ ದಾಳಿ
ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಇದೆ ಆರೋಪಿ ತಾಜುದ್ದೀನ್‌ ಎಂಬಾತನಿಗೆ ಸೇರಿದ್ದೆನ್ನಲಾದ ನಗರದ ಲಕ್ಷ್ಮೀ ಫೌಂಡ್ರಿ ಪಕ್ಕದ ಗೋದಾಮಿನಲ್ಲಿ ದಾಳಿ ನಡೆಸಿ, ಅಂದಾಜು 2.5 ಲಕ್ಷ ಬೆಲೆಯ, 139 ಕ್ವಿಂಟಲ್‌ ಅಕ್ಕಿಯನ್ನು ಜಪ್ತಿ ಮಾಡಲಾಗಿತ್ತು. ದಾಳಿ ವೇಳೆ ತಾಜುದ್ದೀನ್‌ ಮತ್ತು ಸೈಯದ್‌ ನುರಾನ್‌ ಎಂಬುವರನ್ನು ಬಂದಿಸಲಾಗಿತ್ತಾದರೂ, ಜಾಮೀನಿನ ಮೇಲೆ ಹೊರಬಂದ ಆರೋಪಿ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾನೆ. ಆರೋಪಿಗಳ ಹಿಂದೆ ಹೊರರಾಜ್ಯಗಳಿಗೆ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುವ ದೊಡ್ಡ ಜಾಲವೇ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

2-bng

Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

1-munirathna

DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್‌: ಎಸ್‌ಐಟಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

2(2)

Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್‌ ಟೈಗರ್‌!

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.