ನಾಲ್ಕು ವರ್ಷದಲ್ಲಿ ಪೋಕ್ಸೋ ಕಾಯ್ದೆಯಡಿ 202 ಪ್ರಕರಣ


Team Udayavani, Jul 22, 2017, 1:34 PM IST

22-GUB-7.jpg

ದಾವಣಗೆರೆ: ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ ತಡೆಗೆ ಜಾರಿಯಾದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ)ಯಡಿ ಈವರೆಗೆ ಜಿಲ್ಲೆಯಲ್ಲಿ 202 ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಆರೋಪಿಗಳಲ್ಲಿ ಜೈಲು ಪಾಲಾಗುತ್ತಿರುವುದು 25 ವರ್ಷ ತುಂಬದ ಯುವಕರೇ ಹೆಚ್ಚು.

ಪೊಕ್ಸೋ ಕಾಯ್ದೆ ಜಾರಿಯಾದ(2013ರಿಂದ) ನಾಲ್ಕು ವರ್ಷಗಳಲ್ಲಿ ಜಿಲ್ಲೆಯ 18 ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಅಚ್ಚರಿಮೂಡಿಸುವಂತಿದೆ. ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಮಾಣ ನಿಬ್ಬೆರಗಾಗಿಸುವಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಲೇ ಇರುವ ಈ ಪ್ರಕರಣಗಳಲ್ಲಿ ಈವರೆಗೆ ಬಂಧನಕ್ಕೆ ಒಳಗಾದವರಲ್ಲಿ 25 ವರ್ಷಕ್ಕಿಂತ ಕಡಮೆ ಇರುವವರ ಸಂಖ್ಯೆಯೇ ಹೆಚ್ಚು. ಬಂಧನಕ್ಕೆ ಒಳಗಾದವರ ಪೈಕಿ ಒಟ್ಟು 235 ಆರೋಪಿಗಳು 25 ವರ್ಷದೊಳಗಿನವರಾಗಿದ್ದಾರೆ.

ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಪೈಕಿ ದಾವಣಗೆರೆ ನಗರ ವ್ಯಾಪ್ತಿಯಲ್ಲಿಯೇ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 76 ಆಗಿವೆ. ಇದರಲ್ಲಿ ಬಂಧಿತರಾದ ಆರೋಪಿಗಳ ಪೈಕಿ 95 ಜನರು 25 ವರ್ಷದೊಳಗಿನ ಯುವಕರಾಗಿದ್ದಾರೆ.

ಪ್ರೇಮ ಪ್ರಕರಣಗಳೇ ಹೆಚ್ಚು….
ದಾಖಲಾದ ಪ್ರಕರಣಗಳಲ್ಲಿ ಪ್ರೇಮ ಪ್ರಕರಣಗಳೇ ಶೇ.80ಕ್ಕೂ ಹೆಚ್ಚಿವೆ ಎಂದು ಅಂದಾಜಿಸಲಾಗಿದೆ. 18 ವರ್ಷ ತುಂಬದ ಯುವತಿ ಪ್ರೇಮ ಪಾಶಕ್ಕೆ ಬೀಳುವ ಯುವಕ, ಆಕೆಯನ್ನು ಪುಸಲಾಯಿಸಿಕೊಂಡು ಓಡಿಹೋಗಿ ಮದುವೆಯಾಗುತ್ತಾರೆ. ಇತ್ತ ಹುಡುಗಿ
ಕಡೆಯವರು ದೂರು ದಾಖಲಿಸುತ್ತಾರೆ. ಅಪ್ರಾಪ್ತ ಬಾಲಕಿಯ ಜೊತೆ ಸಮ್ಮತಿಯಿಂದ ಲೈಂಗಿಕ ಸಂಪರ್ಕ ಹೊಂದಿದರೂ ಅದು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಎಂದೇ ಪರಿಗಣಿಸಲಾಗುವುದು. 2012ರಲ್ಲಿ ದೆಹಲಿಯ ನಿರ್ಭಯ ಅತ್ಯಾಚಾರ ಪ್ರಕರಣ ಸೇರಿದಂತೆ ದೇಶದ ವಿವಿಧ ಕಡೆ ನಡೆದ ದೌರ್ಜನ್ಯ ತಡೆಗೆ ಜಾರಿಗೆ ಬಂದ ಕಾನೂನಿನಡಿ ಬಂಧಿತರಾಗುತ್ತಿರುವ ಆರೋಪಿಗಳು ಪ್ರೇಮಿಗಳೇ ಹೆಚ್ಚು ಎಂಬುದು ಗಮನಿಸಬೇಕಾಗಿದೆ.

ಪತ್ನಿ-ಮಗು ಮನೇಲಿ, ಗಂಡ ಜೈಲಲಿ: ನ್ಯಾಯಾಲಯದಲ್ಲಿರುವ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಪೈಕಿ ಕೆಲವು ವಿಚಿತ್ರವಾಗಿವೆ. ಮೂರು ವರ್ಷ ಪ್ರೀತಿಸಿದ ಯುವಕ ಒಂದೂವರೆ ವರ್ಷದ ಹಿಂದೆ ಅಪ್ರಾಪ್ತೆ ಪ್ರೇಯಸಿಯನ್ನು ಕರೆದುಕೊಂಡು
ದೂರದ ಊರೊಂದಕ್ಕೆ ಹೋದ. ಅಲ್ಲಿ ದೇವಸ್ಥಾನವೊಂದರಲ್ಲಿ ಪೂಜಾರಿ ಸಮ್ಮುಖದಲ್ಲಿ ಮದುವೆಯಾದ. ಒಂದು ವರ್ಷ ಸಂಸಾರ ಸಹ ನಡೆಸಿದ. ಅವರಿಗೊಂದು ಮಗು ಸಹ ಜನಿಸಿತು. ನಂತರ ತನ್ನವರೊಂದಿಗೆ ಜೀವನ ಕಳೆಯುವ ಉದ್ದೇಶದಿಂದ ಸ್ವಂತ
ಊರಿಗೆ ಬಂದ. ಆದರೆ, ಅಲ್ಲಿಯವರೆಗೆ ನೊಂದು, ಆಕ್ರೋಶ ತಡೆಹಿಡಿದಿದ್ದ ಹುಡುಗಿಯ ಪೋಷಕರು ನೇರ ಪೊಲೀಸರಿಗೆ ದೂರು ನೀಡಿದ್ರು. ಪೊಕ್ಸೋ ಅಡಿ ಪ್ರೇಮಿ ಬಂಧಿತನಾಗಿ, ಜೈಲು ಸೇರಿದ. ಪ್ರೇಯಸಿ ಅರ್ಥಾತ್‌ ಅಪ್ರಾಪ್ತ ಹೆಂಡತಿ ತಮ್ಮ ಪ್ರೇಮದ ದ್ಯೋತಕವಾದ ಮಗುವಿನಿಂದ ತನ್ನ ಪ್ರೇಮಿಯ ಪೋಷಕರೊಂದಿಗೆ ಗಂಡನ ಆಗಮನಕ್ಕೆ ಕಾಯುತ್ತಿರುವ ಪ್ರಕರಣಗಳು ಸಹ
ಇವೆ. ಮುಂದೆ ನ್ಯಾಯಾಲಯ ನೀಡುವ ತೀರ್ಪು ಆಧರಿಸಿ, ಪ್ರೇಮಿಗಳ ಬದುಕು ನಿರ್ಧಾರವಾಗಲಿದೆ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.