ಆಧಾರ್ ಲಿಂಕ್ಗೆ 31ರ ಗಡುವು
Team Udayavani, Mar 15, 2017, 1:03 PM IST
ದಾವಣಗೆರೆ: ಜಿಲ್ಲೆಯ ಪ್ರತಿ ಬ್ಯಾಂಕ್ ಖಾತೆದಾರರು ಮಾ. 31ರ ಒಳಗೆ ತಮ್ಮ ಉಳಿತಾಯ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಹೇಳಿದರು. ಉಳಿತಾಯ ಖಾತೆಗೆ ಆಧಾರ್ ಜೋಡಣೆಮಾಡದೇ ಹೋದಲ್ಲಿ ಸರ್ಕಾರಿ ಸೌಲಭ್ಯ ಸ್ಥಗಿತಗೊಳ್ಳಲಿವೆ.
ನರೇಗಾ, ಸಾಮಾಜಿಕ ಸುರಕ್ಷಾ ಯೋಜನೆ ಪಿಂಚಣಿದಾರರು, ಜನಧನ್, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಸಾಮಾನ್ಯ ಹಾಗೂ ರೈತರ ಖಾತೆಗಳು ಹೀಗೆ ಎಲ್ಲ ರೀತಿಯ ಖಾತೆಗಳಿಗೆ ಸರ್ಕಾರದ ಸವಲತ್ತು, ನೇರ ನಗದು ಯೋಜನೆ (ಡಿಬಿಟಿ) ಸೌಲಭ್ಯ ದೊರಕಬೇಕಾದರೆ ಆಧಾರ್ ಜೋಡಣೆ ಕಡ್ಡಾಯ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಖಾತೆದಾರರು ತಮ್ಮ ಉಳಿತಾಯ ಖಾತೆಯ ಮುಖ್ಯ ಪುಟ, ಆಧಾರ್ ಕಾರ್ಡ್ ಜೆರಾಕ್ಸ್ ಹಾಗೂ ಬ್ಯಾಂಕ್ ಮಿತ್ರರ ಬಳಿ ದೊರೆಯುವ ಆಧಾರ್ ಜೋಡಣೆ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಕೊಡುವ ಮೂಲಕ ಅತಿ ಸುಲಭವಾಗಿ ಆಧಾರ್ ಜೋಡಣೆ ಮಾಡಿಸಬಹುದು ಎಂದು ತಿಳಿಸಿದರು.ಜಿಲ್ಲೆಯ 36 ವಿವಿಧ ಬ್ಯಾಂಕ್ 241 ಶಾಖೆಗಳಲ್ಲಿ ಸುಮಾರು 15 ಲಕ್ಷ ಉಳಿತಾಯ ಖಾತೆ ಇದ್ದು, ಈಗಾಗಲೇ 8.5 ಲಕ್ಷ ಖಾತೆಗಳಿಗೆ ಆಧಾರ್ ಜೋಡಣೆಯಾಗಿದೆ.
ಇನ್ನೂ 6.5 ಲಕ್ಷ ಖಾತೆಗಳಿಗೆ ಆಧಾರ್ ಜೋಡಣೆಯಾಗಬೇಕಿದೆ. ಜಿಲ್ಲೆಯಲ್ಲಿರುವ 50 ಸಾವಿರ ಜನ ಉದ್ಯೋಗ ಖಾತರಿ ಜಂಟಿ ಉಳಿತಾಯ ಖಾತೆಗಳ ಪೈಕಿ ಶೇ. 40 ಆಧಾರ್ ಜೋಡಣೆಯಾಗಿದೆ. ಸಾಮಾಜಿಕ ಸುರಕ್ಷಾ ಯೋಜನೆಗಳಾದ ವೃದ್ಧಾಪ್ಯ,ಅಂಗವಿಕಲರ, ವಿಧವಾ ವೇತನದಡಿಯಲ್ಲಿ ಬ್ಯಾಂಕುಗಳ ಮೂಲಕ ಹಣ ಪಡೆಯುವವರು 6,647 ಫಲಾನುಭವಿಗಳಲ್ಲಿ 1,745 ಆಧಾರ್ ಜೋಡಣೆಯಾಗಿಲ್ಲ.
ಜಿಲ್ಲೆಯಲ್ಲಿರುವ ಒಟ್ಟಾರೆ 2.82 ಲಕ್ಷ ಜನಧನ್ ಖಾತೆಯಲ್ಲಿ 1.7 ಲಕ್ಷ ಆಧಾರ್ ಜೋಡಣೆಯಾಗಿದ್ದು ಇನ್ನೂ 1.12 ಲಕ್ಷ ಖಾತೆಗೆ ಜೋಡಣೆ ಮಾಡಬೇಕಿದೆ ಎಂದು ತಿಳಿಸಿದರು. ಶೇ. 100 ರಷ್ಟು ಆಧಾರ್ ಜೋಡಣೆ ಮಾಡುವ ನಿಟ್ಟಿನಲ್ಲಿ ಮಾ. 16 ರಿಂದ 22 ರವರೆಗೆ ಮಧ್ಯಾಹ್ನ 3 ರಿಂದ ಆಯಾಯ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಜನಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಾ. 21 ರಂದು ದಾವಣಗೆರೆಯ ಎಲ್ಲ ಬ್ಯಾಂಕುಗಳ ಸಹಕಾರದೊಂದಿಗೆ ಲೀಡ್ ಬ್ಯಾಂಕ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮಾ. 31 ರೊಳಗೆ ಆಧಾರ್ ಜೋಡಣೆ ಪೂರ್ಣಗೊಳಿಸಲು ಪಲ್ಸ್ ಪೋಲೀಯೋ ರೀತಿಯಲ್ಲಿ ಮಾ. 17, 24 ಮತ್ತು 30 ರಂದು ಜಿಲ್ಲೆಯ ಎಲ್ಲಾ ಬ್ಯಾಂಕ್ಗಳ 241 ಶಾಖೆಗಳಲ್ಲಿ ಏಕಕಾಲಕ್ಕೆ ಆಧಾರ್ ಜೋಡಣೆ ಮಹಾ ಮೇಳ ಆಚರಿಸಲಾಗುವುದು ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಎನ್. ಟಿ. ಎರ್ರಿಸ್ವಾಮಿ ಮಾತನಾಡಿ, ಹರಿಹರ ತಾಲ್ಲೂಕಿನಹರಗನಹಳ್ಳಿಯನ್ನು ಡಿಜಿಟಲ್ ಗ್ರಾಮವನ್ನಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಲೀಡ್ ಬ್ಯಾಂಕ್ ಆ ಗ್ರಾಮವನ್ನು ದತ್ತು ತೆಗೆದುಕೊಂಡು, ಕಾರ್ಯೋನ್ಮುಖವಾಗಿದೆ. 15 ದಿನಗಳ ಒಳಗೆ ಹರಗನಹಳ್ಳಿಯಲ್ಲಿ ಸಂಪೂರ್ಣ ನಗದು ರಹಿತ ವ್ಯವಸ್ಥೆ ತರುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆನರಾ ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕ ಎಚ್. ಎಂ. ಕೃಷ್ಣಯ್ಯ ಮಾತನಾಡಿ, 10 ರೂಪಾಯಿ ನಾಣ್ಯವನ್ನು ಬ್ಯಾಂಕಿನಲ್ಲಿ ಸ್ವೀಕರಿಸಲಾಗುತ್ತಿದೆ. 10 ರೂಪಾಯಿ ನಾಣ್ಯ ಚಲಾವಣೆಯಲ್ಲಿ ಇಲ್ಲವೆಂಬ ಗಾಳಿ ಸುದ್ದಿಗೆ ಯಾರೂ ಕಿವಿಗೊಡದೆ ಚಲಾವಣೆ ಮಾಡಬೇಕು ಎಂದು ಕೋರಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಅಶ್ವತಿ, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ರೀಜನಲ್ ಮ್ಯಾನೇಜರ್ ಭಾಸ್ಕರ್, ಸಿಂಡಿಕೇಟ್ ಬ್ಯಾಂಕಿನ ಜಯದೇವಪ್ಪ, ಎಸ್ಬಿಎಂ ಬ್ಯಾಂಕಿನ ರಾಮಚಂದ್ರ ಭಟ್, ಎಸ್ ಬಿಐನ ಮೋಹನ್ ನರಸಾಪುರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ
Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ
Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್ ಭವಿಷ್ಯ
PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.