7 ದಶಕ ಕಳೆದರೂ ಬದಲಾಗದ ಸ್ಥಿತಿ


Team Udayavani, Feb 3, 2017, 12:37 PM IST

dvg2.jpg

ದಾವಣಗೆರೆ: ದಲಿತ ವಿದ್ಯಾರ್ಥಿಗಳು ಸಮಾಜದ ಏಳಿಗೆಗೆ ದುಡಿಯಲು ಅಂಬೇಡ್ಕರ್‌, ಬುದ್ಧ, ವಚನಕಾರರ ಹಾದಿ ತುಳಿಯುವುದಾದರೆ ತಮ್ಮ ಮೋಜು ಮರೆಯಬೇಕು ಎಂದು ಪ್ರೊ| ಸಿ.ಕೆ. ಮಹೇಶ್‌ ಅಭಿಪ್ರಾಯಪಟ್ಟಿದ್ದಾರೆ. ರೋಟರಿ ಬಾಲಭವನದಲ್ಲಿ ಗುರುವಾರ ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಮಿತಿ, ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ದಲಿತ  ಸಮುದಾಯ ಇಂದಿಗೂ ಸಹ ಅತ್ಯಂತ ನಿಕೃಷ್ಟ ಸ್ಥಿತಿಯಲ್ಲಿದೆ. 

ಇದರ ನಿವಾರಣೆಗೆ ಹೋರಾಟಗಳು ಬೇಕಿದೆ. ಆದರೆ, ಹೋರಾಟಕ್ಕೆ ಇಳಿಯುವವರು ಬುದ್ಧ, ಬಸವಾದಿ ಶರಣರು, ಅಂಬೇಡ್ಕರರ ದಾರಿಯಲ್ಲಿ ಸಾಗಬೇಕಿದೆ. ಹಾಗೆ ಸಾಗಲು ನಿಮ್ಮ ವೈಯುಕ್ತಿಕ ಮೋಜು ಬಿಡಬೇಕು ಎಂದರು. ದಲಿತ ಹೋರಾಟಗಾರರು ತಮ್ಮ ಕುಟುಂಬ ಸಾಕುವ ಜೊತೆ ಜೊತೆಗೆ ಸಮಾಜ, ಸಮುದಾಯದ ಒಳಿತಿಗೆ ದುಡಿಯಬೇಕು. ಬುದ್ಧ, ಬಸವ, ಅಂಬೇಡ್ಕರರು ತಮ್ಮ ಪ್ರತೀ ಕೆಲಸವನ್ನು ಸಮುದಾಯಕ್ಕೆ ಮೀಸಲಿಟ್ಟರು. ದಮನಿತರು, ಶೋಷಿತರ ಒಳಿತಿಗೆ ಹಗಲಿರುಳು ಶ್ರಮಿಸಿದರು.

ಅಂತಹ ಮಹಾನ್‌ ನಾಯಕರ ಹಾದಿ ತುಳಿಯುವುದು ಇಂದು ನಿಮ್ಮೆಲ್ಲರ ಅನಿವಾರ್ಯತೆ. ಇಂದು ನೀವು ಇಟ್ಟಿರುವ ಹೆಜ್ಜೆ ಆರಂಭವಷ್ಟೇ. ಮುಂದೆ ಸಾಗುವ ದೃಢ ನಿಶ್ಚಯ ಹೊಂದಿ ಎಂದು ಅವರು ಕಿವಿಮಾತು ಹೇಳಿದರು. ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷ ಕಳೆದರೂ ಸ್ಥಿತಿ ಬದಲಾಗಿಲ್ಲ. ಇರುವ ಸಂಪತ್ತಿನ ಶೇ.60ರಷ್ಟು ಆದಾಯ, ಆಸ್ತಿಯನ್ನು ಶೇ.1ರಷ್ಟು ಜನ ಮಾತ್ರ ಅನುಭವಿಸುತ್ತಿದ್ದಾರೆ. ಶೇ.85ರಷ್ಟು ಜನ ಇಂದಿಗೂ ಬಡತನದಲ್ಲಿಯೇ ಇದ್ದಾರೆ.

ಅದರಲ್ಲೂ ಶೇ.50ರಷ್ಟು ಸರ್ಕಾರವೇ ವಿಧಿಸಿರುವ ಬಡತನ ರೇಖೆಗಿಂತ ಕೆಳಗಿದ್ದಾರೆ. ಅಂಬೇಡ್ಕರ್‌ರ ಸಂವಿಧಾನದಿಂದ ಸಿಕ್ಕ ಮೀಸಲಾತಿ ಲಾಭ  ಪಡೆದುಕೊಂಡ ಶೇ.0.1ರಷ್ಟು ಹಿಂದುಳಿದವರು ಇದೀಗ ಒಂದಿಷ್ಟು ಸುಧಾರಣೆ ಕಂಡಿದ್ದಾರೆ. ಆದರೆ, ಸಂಪೂರ್ಣ ಸುಧಾರಣೆ ಇನ್ನೂ ಆಗಿಲ್ಲ ಎಂದು ಅವರು ತಿಳಿಸಿದರು. ಇಷ್ಟು ವರ್ಷ ದೇಶ ಆಳಿದ ಯಾವ ಸರ್ಕಾರವೂ ಸಂವಿಧಾನದ ಆಶಯಗಳನ್ನು ಪೂರ್ಣವಾಗಿ ಜಾರಿಮಾಡಿಲ್ಲ.

ಅಂಬೇಡ್ಕರ್‌ ರಚಿತ ಸಂವಿಧಾನದ ಆಶಯ ಸಕಾರಗೊಳಿಸುವ ಬಹು ದೊಡ್ಡ ಹೊಣೆಗಾರಿಕೆ ದಲಿತ ವಿದ್ಯಾರ್ಥಿಗಳ ಮೇಲಿದೆ. ಆದ್ದರಿಂದ ವಿದ್ಯಾರ್ಥಿಗಳು ಸಂಘಟಿತರಾಗಬೇಕು. ಶಿಕ್ಷಣ ಪಡೆಯುವ ಮೂಲಕ ಕುಟುಂಬ, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಸಲಹೆ ನೀಡಿದರು.  ದಾವಣಗೆರೆ ವಿವಿ ಸಿಂಡಿಕೇಟ್‌ ಸದಸ್ಯ ಡಾ| ಎಚ್‌. ವಿಶ್ವನಾಥ್‌ ಮಾತನಾಡಿ, ಅಂಬೇಡ್ಕರ್‌ ಶಿಕ್ಷಣವೆಂಬ ಅಸ್ತ್ರದ ಮೂಲಕ ವಿಶ್ವದ ಎಲ್ಲಾ ಕಾನೂನು ಅಧ್ಯಯನ ಮಾಡಿ, ದೇಶಕ್ಕೆ ಇಷ್ಟು ದೊಡ್ಡ ಸಂವಿಧಾನ ನೀಡಿದ್ದಾರೆ.

ಆದರೆ, ದಲಿತರಿಗೆ ರಕ್ಷಣೆ ಇಲ್ಲವಾಗಿದೆ. ನಿರಂತರವಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಇದನ್ನು ತಡೆಯಲು ಸಂವಿಧಾನದ ಜೊತೆಗೆ ನಮ್ಮ ಜನರಲ್ಲಿ ಜ್ಞಾನ ಬೆಳೆಯಬೇಕಾದ ಅನಿವಾರ್ಯತೆ ಇದೆ. ಸರ್ಕಾರದ ಕಿವಿ ಹಿಂಡುವ ಮಟ್ಟಕ್ಕೆ ನಮ್ಮ ಜನರು ಬೆಳೆಯಬೇಕಿದೆ ಎಂದರು. ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಎಚ್‌.ಬಿ. ಮಂಜುನಾಥ್‌ ಕಬ್ಬೂರು, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಚ್‌. ಮಲ್ಲೇಶ್‌, ವರದಿಗಾರರ ಕೂಟದ ಜಿಲ್ಲಾಧ್ಯಕ್ಷ ಬಸವರಾಜ್‌ ದೊಡ್ಮನಿ, ಚಿಂತಕ ಮರುಡಪ್ಪ, ತಿಪ್ಪಣ್ಣ ಕತ್ತಲಗೆರೆ, ಸಿದ್ರಾಮಣ್ಣ ಬುಳ್ಳಸಾಗರ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Childhood traumas and their long-term effects on mental health

Health; ಬಾಲ್ಯದ ಆಘಾತಗಳು ಮತ್ತು ಮಾನಸಿಕ ಆರೋಗ್ಯದ ಮೇಲೆ ಅವುಗಳ ದೀರ್ಘಕಾಲೀನ ಪರಿಣಾಮಗಳು

Kottigehara

Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ

Nothing- CMF ಉತ್ಪನ್ನಗಳಿಗೆ ಶೇ.50ಕ್ಕೂ ಹೆಚ್ಚಿನ ರಿಯಾಯಿತಿಗಳನ್ನು ಪ್ರಕಟಿಸಿದ ನಥಿಂಗ್

Nothing- CMF ಉತ್ಪನ್ನಗಳಿಗೆ ಶೇ.50ಕ್ಕೂ ಹೆಚ್ಚಿನ ರಿಯಾಯಿತಿಗಳನ್ನು ಪ್ರಕಟಿಸಿದ ನಥಿಂಗ್

Miracle: ಈ ಶಿವಲಿಂಗಕ್ಕೆ ದಿನದ 24 ಗಂಟೆ ಸಮುದ್ರದೇವನಿಂದಲೇ ಅಭಿಷೇಕ… ಏನಿದು ಮಹಿಮೆ

Miracle: ಈ ಶಿವಲಿಂಗಕ್ಕೆ ದಿನದ 24 ಗಂಟೆ ಸಮುದ್ರದೇವನಿಂದಲೇ ಅಭಿಷೇಕ… ಏನಿದು ಮಹಿಮೆ

Bantwal: KSRTC ಬಸ್ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!

Bantwal: KSRTC ಬಸ್ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

prakarana tanikha hantadallide movie trailer out

Prakarana Tanikha Hantadallide Movie; ಟ್ರೇಲರ್‌ ನಲ್ಲಿ ಪ್ರಕರಣದ ವಿವರ

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

1-ddd

Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.