ಅಧಿಕಾರಿಗಳ ನಿಂದಿಸಿದರೆ ಸಹಿಸಲ್ಲ


Team Udayavani, Sep 18, 2022, 9:01 PM IST

24-MP

ಹೊನ್ನಾಳಿ: ತಹಶೀಲ್ದಾರ್‌ಗೆ ನಿಂದಿಸಿರುವುದು ಸತ್ಯವೆಂದು ಮಾಜಿ ಶಾಸಕರು ಮಾಧ್ಯಮಗಳ ಮುಂದೆ ಒಪ್ಪಿಕೊಳ್ಳುವ ಮೂಲಕ ಮತ್ತೆ ಉದ್ಧಟತನ ತೋರಿದ್ದಾರೆ. ತಕ್ಷಣ ಅವರು ರಾಜಕೀಯ ನಿವೃತ್ತಿ ಹೊಂದಬೇಕು. ಒಂದು ವೇಳೆ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಮನೆ ಪರಿಹಾರ ಕೊಡಿಸಿದ್ದೇನೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸವಾಲೆಸೆದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷಪಾತ ಮಾಡದೆ ಎಲ್ಲರಿಗೂ ಮನೆ ಹಾನಿ ಪರಿಹಾರ ಕೊಡಿಸುವ ಕೆಲಸ ಮಾಡುತ್ತಿದ್ದೇನೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಮನೆ ಹಾನಿ ಪರಿಹಾರ ತೆಗೆದುಕೊಂಡವರು ಶೇ. 70ರಷ್ಟು ಕಾಂಗ್ರೆಸ್‌ನವರೇ ಆಗಿದ್ದಾರೆ ಎಂದರು.

ನನ್ನ ಎದುರಿನಲ್ಲಿಯೇ ತಹಶೀಲ್ದಾರ್‌ ಕಚೇರಿಯಲ್ಲೇ ಮಾಜಿ ಶಾಸಕರು ತಹಶೀಲ್ದಾರರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ತುಂಬು ಗರ್ಭಿಣಿಯಾಗಿರುವ ತಹಶೀಲ್ದಾರರಿಗೆ ಮಾಜಿ ಶಾಸಕರು ಅವಾಚ್ಯ ಶಬ್ದ ಬಳಸಿದ್ದಾರೆ. ಇದಕ್ಕೆ ಅವಳಿ ತಾಲೂಕಿನ ಜನರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಗುಡುಗಿದರು.

ಮಾಜಿ ಶಾಸಕರು ಅಧಿ ಕಾರಿಗಳಿಗೆ ಏಕವಚನದಲ್ಲಿ ಮಾತನಾಡುವುದನ್ನು ಬಿಡಬೇಕು ಎಂದು ತಾಕೀತು ಮಾಡಿದ ರೇಣುಕಾಚಾರ್ಯ, ಮಾಜಿ ಶಾಸಕರು ಅ ಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಜನರಿಗೆ ಪರಿಹಾರ ಸಿಗದೇ ಇದ್ದರೆ ಅದಕ್ಕೆ ಮಾಜಿ ಶಾಸಕರೇ ನೇರ ಕಾರಣ ಎಂದರು.

ಎರಡು ದಿನಗಳ ಹಿಂದೆ ತಹಶೀಲ್ದಾರ್‌ಗೆ ಬೈದಿಲ್ಲ, ಇಂಜಿನಿಯರ್‌ ಅವರಿಗೆ ಬೈದಿದ್ದು ಎಂದು ಹೇಳಿಕೆ ನೀಡಿದ್ದ ಮಾಜಿ ಶಾಸಕರು ಈಗ ಯೂ ಟರ್ನ್ ಹೊಡೆದಿದ್ದಾರೆ. ತಹಶೀಲ್ದಾರ್‌ಗೆ ಬೈದಿದ್ದು ಸತ್ಯ ಎಂದು ಮಾಧ್ಯಮಗಳ ಮುಂದೆ ಹೇಳುತ್ತಿದ್ದು, ಅವರದ್ದು ಎಲುಬಿಲ್ಲದ ನಾಲಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವಳಿ ತಾಲೂಕಿಗೆ ಮಾಜಿ ಶಾಸಕರ ಕೊಡುಗೆ ಶೂನ್ಯ. ಒಂದು ಬಾರಿ ಮಾಜಿ ಶಾಸಕ ಬಸವನಗೌಡ ಅವರ ಅನುಕಂಪದ ಆಧಾರದ ಮೇಲೆ ಗೆದ್ದಿದ್ದ ಅವರು, ಮತ್ತೂಮ್ಮೆ ಸಿದ್ದರಾಮಯ್ಯನವರ ಅಲೆಯಲ್ಲಿ ಗೆದ್ದಿದ್ದರು. ಈ ಬಾರಿ ಸೋಲುತ್ತೇನೆಂಬ ಹತಾಶ ಮನೋಭಾವದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಟುಕಿದರು. ಮನೆ ಹಾನಿ ಬಗ್ಗೆ ಅಪ್‌ಲೋಡ್‌ ಮಾಡಲು ಕಳೆದ ತಿಂಗಳ 30 ಕೊನೆಯ ದಿನಾಂಕವಾಗಿತ್ತು. ಅದನ್ನು ಸೆ. 15ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಅವಳಿ ತಾಲೂಕಿನ ಜನರಿಗೆ ತೊಂದರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ ಮತ್ತೆ ಅದನ್ನು ವಿಸ್ತರಿಸಿದ್ದೇನೆ. ಅವಳಿ ತಾಲೂಕಿನಲ್ಲಿ ಇನ್ನೂ 700ರಿಂದ 800 ಅರ್ಜಿ ಬಾಕಿ ಇದ್ದು, ಅವುಗಳಿಗೂ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ. ಯಾರೂ ಕೂಡ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.