ಅಭಿವೃದ್ಧಿ ಕಾರ್ಯಗಳೇ ತಕ್ಕ ಉತ್ತರ
Team Udayavani, Feb 22, 2017, 12:52 PM IST
ದಾವಣಗೆರೆ: ವಿನಾಕಾರಣ ಟೀಕೆ ಮಾಡುವ ಬಿಜೆಪಿಯ ಕೆಲವರಿಗೆ ನಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ತಕ್ಕ ಉತ್ತರ ನೀಡಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿರುಗೇಟು ನೀಡಿದ್ದಾರೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿದ್ದ ಫಲ-ಪುಷ್ಪ ಪ್ರದರ್ಶನದ ಸಮಾರೋಪದಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಬಿಜೆಪಿಗೆ ಅಧಿಕಾರ ನೀಡಿದ್ದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲೂ ಮೂವರು ಮಂತ್ರಿಗಳಿದ್ದರು.
ಯಾವ ಅಭಿವೃದ್ಧಿ ಕೆಲಸ ಮಾಡದೆ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದ್ದನ್ನು ಮನಗಂಡ ಜನತೆ ತಕ್ಕಪಾಠ ಕಲಿಸಿದ್ದನ್ನು ಆ ಪಕ್ಷದವರು ಮರೆಯಬಾರದು ಎಂದು ತಾಕೀತು ಮಾಡಿದರು. ಈಗ ನಾವು ಕೈಗೊಂಡಿರುವ ಅಭಿವೃದ್ಧಿ ಕೆಲಸ ಸಹಿಸದೇ ಬಿಜೆಪಿಯವರು ಜನರ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯವರ ಮಾತಿಗೆ ಜನರೂ ಸಹ ಬೆಲೆ ನೀಡುವುದಿಲ್ಲ ಎಂದರು.
ಸ್ಮಾರ್ಟ್ಸಿಟಿ ಯೋಜನೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಕೆಟಿಂಗ್ ಆಗಿದೆ ಹೊರತು ಯಾವುದೇ ರೀತಿಯಲ್ಲೂ ಅಭಿವೃದ್ಧಿ ಕಂಡಿಲ್ಲ. ದಾವಣಗೆರೆ ನಗರ ಸಹ ಸ್ಮಾರ್ಟ್ಸಿಟಿ ಜನೆಗೆ ಆಯ್ಕೆಯಾಗಿ 2 ವರ್ಷ ಕಳೆದರೂ ಸಹ ಈವರೆಗೂ ಒಂದೇ ಒಂದು ಕೆಲಸ ನಡೆದಿಲ್ಲ. ಸ್ಮಾರ್ಟ್ ಸಿಟಿಗಾಗಿ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ನೀಡಿದರೆ ರಾಜ್ಯ ಸರ್ಕಾರವೂ ಸಹ 500 ಕೋಟಿ ರೂಪಾಯಿ ನೀಡಲಿದೆ.
ಈಗಾಗಲೇ ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ 1 ಸಾವಿರ ಕೋಟಿಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ ಎಂದು ತಿಳಿಸಿದರು. ದಾವಣಗೆರೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಕೆ.ಆರ್. ಮಾರುಕಟ್ಟೆಯನ್ನು 25 ಕೋಟಿ, ಹಳೇ ಬಸ್ ನಿಲ್ದಾಣವನ್ನು 25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.
90 ಕೋಟಿ ಅನುದಾನದಲ್ಲಿ ಯುಜಿ ಕೇಬಲ್ ಅಳವಡಿಕೆ ಹಾಗೂ 480 ಕೋಟಿ ಮೊತ್ತದ ಜಲಸಿರಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಹಿಂದೆ ತೋಟಗಾರಿಕೆ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ಯೋಜನೆ, ಸೌಲಭ್ಯ ನೀಡುತ್ತಿರಲಿಲ್ಲ.
ನಮ್ಮ ತಂದೆ ಶಾಮನೂರು ಶಿವಶಂಕರಪ್ಪ ನವರು ತೋಟಗಾರಿಕೆ ಇಲಾಖೆ ಸಚಿವರಾದ ನಂತರ ಇಲಾಖೆಯ ಎಲ್ಲಾ ಸೌಲಭ್ಯಗಳು ಅರ್ಹರಿಗೆ ತಲುಪಬೇಕೆಂಬ ದೃಷ್ಟಿಯಿಂದ ಯೋಜನೆಗಳನ್ನು ಸಾರ್ವಜನಿಕರಿಗೆ ಪ್ರಚುರಪಡಿಸುವುದರ ಜೊತೆಗೆ ಸಾಕಷ್ಟು ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಮಾಡಿದ್ದನ್ನು ಮುಂದುವರೆಸಲಾಗುತ್ತಿದೆ ಎಂದು ತಿಳಿಸಿದರು.
ದಾವಣಗೆರೆ ಎಪಿಎಂಸಿ ಅಧ್ಯಕ್ಷ ಮುದೇಗೌಡ್ರು ಗಿರೀಶ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಸಚಿವರ ನಿರ್ಲಕ್ಷéಹಾಗೂ ದೂರದೃಷ್ಟಿಯ ಕೊರತೆಯಿಂದಾಗಿ ತೋಟಗಾರಿಕೆ ಇಲಾಖೆ ಕಚೇರಿಯೇ ಕಾಣದಂತಾಗಿತ್ತು. ಯಾವ ಯೋಜನೆಗಳು ಸಹ ಸಾರ್ವಜನಿಕರಿಗೆ ತಲುಪುತ್ತಿರಲಿಲ್ಲ. ಆಗ ಯಾರ ಕೈಗೆ ಯಾವ ಯಾವ ಯೋಜನೆ ಸೇರಿದವು ಎಂಬುದನ್ನು ಆ ಪಕ್ಷದವರು ತಿಳಿಸಲಿ ಎಂದರು.
ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಎ.ಮಂಜು, ಮೇಯರ್ ರೇಖಾ ನಾಗರಾಜ್, ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಎಸ್. ಬಸಪ್ಪ, ತೋಟಗಾರಿಕೆ ಸಂಘದ ಮುರುಗೇಂದ್ರಪ್ಪ, ನಿರ್ಮಲಾ ಸುಭಾಷ್, ರೇಖಾರಾಜು, ಶಿರಮಗೊಂಡನಹಳ್ಳಿಯ ರುದ್ರೇಶ್, ರಾಮರಾವ್, ದೂಡಾ ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಜಿ. ವೇದಮೂರ್ತಿ,ಯತಿರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.