ಗುರಿ ಸಾಧನೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಲಹೆ
Team Udayavani, Feb 22, 2017, 12:54 PM IST
ದಾವಣಗೆರೆ: ಆತ್ಮವಿಶ್ವಾಸ, ಕೌಶಲ್ಯ ಮತ್ತು ಸಾಮರ್ಥ್ಯದಿಂದ ಜೀವನದ ಗುರಿ ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ| ಪ್ರಿಯತಮ್ಕುಮಾರ್ ತಿಳಿಸಿದ್ದಾರೆ.
ಜಿ.ಎಂ.ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ವಾತಾವರಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ವಿಭಾಗದ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಇವೆ.
ತಮ್ಮ ಗುರಿ ಸಾಧನೆಗೆ ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಲಿ ಎಂದು ಆಶಿಸಿದರು. ಶಿವಮೊಗ್ಗದ ಜೆಎನ್ಸಿಇ ಕಾಲೇಜಿನ ಡಾ| ಪಿ. ಮಂಜುನಾಥ್, ಇಂದಿನ ದಿನಗಳಲ್ಲಿ ಬಹಳಷ್ಟು ಕಂಪನಿಗಳಲ್ಲಿ ಎಲ್ಒಟಿ ತಂತ್ರಜ್ಞಾನದ ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ತಂತ್ರಜ್ಞಾನದ ಮಹತ್ವ ಅರಿತು ಸತತ ಅಧ್ಯಯನದ ಮೂಲಕ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ| ಪಿ. ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಹೊಸ ಪರಿಕಲ್ಪನೆ ಹಾಗೂ ಪ್ರಾಯೋಗಿಕವಾಗಿ ಆಧುನಿಕ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ಬಳಸಿಕೊಂಡು ಪ್ರಾಜೆಕ್ಟ್ ಸಿದ್ಧಪಡಿಸಬೇಕು. ಇಂತಹ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜು ಉಪ ಪ್ರಾಚಾರ್ಯ ಡಾ| ಬಿ.ಆರ್. ಶ್ರೀಧರ್, ಕಾರ್ಯಾಗಾರದ ಮುಖ್ಯ ಸಂಯೋಜಕ ಡಾ| ಡಿ.ಎನ್. ಚಂದ್ರಪ್ಪ, ಜಿ.ಪಿ. ರಘುದತ್ತೇಶ್, ಅರುಣ್ ಎ. ಬಡಿಗೇರ್, ಬಿ. ರವಿತೇಜ್, ವೈ. ವಿಕಾಸ್ ಇತರರು ಇದ್ದರು. ಎಚ್.ಎಸ್. ಸುಮಾ ಸ್ವಾಗತಿಸಿದರು. ಬಿ.ವಿ. ಸುಸ್ಮಿತಾ, ಸೋನಿಗುಪ್ತಾ ನಿರೂಪಿಸಿದರು. ಪ್ರೊ| ವಿಕಾಸ್ ಎತ್ನಾಳ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.