![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 17, 2020, 11:33 AM IST
ಜಗಳೂರು: 3.32 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ರಸ್ತೆಗೆ ಹಾಕಿರುವ ಡಾಂಬರ್ ಕಿತ್ತು ಹೋಗುತ್ತಿದ್ದು, ಕಳಪೆ ಕಾಮಗಾರಿ ಮಾಡಲಾಗಿದೆ ಎಂದು ಗುರುಸಿದ್ದಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ಲೋಕೋಪಯೋಗಿ ಇಲಾಖೆ ವತಿಯಿಂದ ಸಿಎಂಆರ್ಜಿವೈ 2.61 ಕೋಟಿ ಮತ್ತು 5054 ಬಜೆಟ್ ಯೋಜನೆಯಡಿ 1.16 ಕೋಟಿ ಸೇರಿದಂತೆ ಒಟ್ಟು 3 ಕೋಟಿ 32 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ಹೊಸಕೆರೆ ಗ್ರಾಮದಿಂದ ಗುರುಸಿದ್ದಪುರ ಮಾರ್ಗವಾಗಿ ಬಸವನ ಕೋಟೆ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.
ಕಾಮಗಾರಿ ಪ್ರಾರಂಭವಾಗಿ ಕೆಲವು ದಿನಗಳಾಗಿದ್ದು, ಇನ್ನೂ ಕಾಮಗಾರಿ ಸಂಪೂರ್ಣ ಮುಗಿದಿಲ್ಲ. ಆಗಲೇ ಗುರುಸಿದ್ದಪುರ ಗ್ರಾಮದ ಸಮೀಪ ರಸ್ತೆಗೆ ಹಾಕಿರುವ ಡಾಂಬರು ಕಿತ್ತು ಹೋಗಿದೆ. ಅಧಿ ಕಾರಿಗಳು ಮತ್ತು ಗುತ್ತಿಗೆದಾರರರನ್ನು ಕೇಳಿದರೆ ಇಲ್ಲ ಸಲ್ಲದ ಸಾಬೂಬು ಹೇಳುತ್ತಾರೆ ಎನ್ನುತ್ತಾರೆ ಗ್ರಾಮದ ಶಿವು.
ಸಂಸದರ ಮಾತಿಗೂ ಬೆಲೆಕೊಡದ ಗುತ್ತಿಗೆದಾರ: ಕಾಮಗಾರಿ ಭೂಮಿಪೂಜೆಗೆ ಬಂದಿದ್ದ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಎಸ್.ವಿ. ರಾಮಚಂದ್ರ ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆ ದಾರರಿಗೆ ಸೂಚನೆ ನೀಡಿದ್ದರು. ಆದರೂ ಗುತ್ತಿಗೆದಾರರು ಗುಣಮಟ್ಟ ಕಾಪಾಡುವಲ್ಲಿ ವಿಫಲರಾಗಿದ್ದಾರೆ.
ರಸ್ತೆ ಪಕ್ಕದಲ್ಲಿ ಪೈಪ್ಲೈನ್ ಹೋಗಿರುವುದರಿಂದ ರಸ್ತೆ ಈ ರೀತಿಯಾಗಿದೆ. ಸರಿಪಡಿಸುವಂತೆ
ಗುತ್ತಿಗೆದಾರನಿಗೆ ಸೂಚನೆ ನೀಡಲಾಗುವುದು.
ರುದ್ರಪ್ಪ,
ಎಎಇ, ಲೋಕೋಪಯೋಗಿ ಇಲಾಖೆ.
ಪೈಪ್ಲೈನ್ ಹೋಗಿರುವುದರಿಂದ ಡಾಂಬರು ಕಿತ್ತು ಹೋಗುತ್ತಿದೆ. ಅದನ್ನು ಸರಿಪಡಿಸುತ್ತೇವೆ.
ರಾಜೇಂದ್ರ ಪ್ರಸಾದ್,
ಗುತ್ತಿಗೆದಾರ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.