![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 21, 2020, 10:28 AM IST
ದಾವಣಗೆರೆ: ರಾಜ್ಯ ಸರ್ಕಾರ ಆನ್ಲೈನ್ ಶಿಕ್ಷಣ ಕೈ ಬಿಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್ಎಫ್) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ತನ್ನದೇ ಆದ ಶಾಲಾ-ಕಾಲೇಜುಗಳಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅತ್ಯಗತ್ಯ ಮೂಲ ಸೌಲಭ್ಯಗಳ ಬಗ್ಗೆ ಚಿಂತನೆ ನಡೆಸದೆ ಏಕಾಏಕಿ ಆನ್ಲೈನ್ ಶಿಕ್ಷಣ ಪದ್ಧತಿಗೆ ಮುಂದಾಗಿರುವುದು ಅತ್ಯಂತ ಖಂಡನೀಯ. ಕೂಡಲೇ ಆನ್ಲೈನ್ ಶಿಕ್ಷಣ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿನ ಸಾವಿರಾರು ಸರ್ಕಾರಿ ಶಾಲೆಗಳಲ್ಲಿ ಸರಿಯಾಗಿ ಕೊಠಡಿಗಳೇ ಇಲ್ಲ. ಕೊಠಡಿಗಳಿದ್ದರೂ ಬಾಗಿಲು, ಕಿಟಕಿ ಇಲ್ಲದಂತಹ ಶಾಲೆಗಳೂ ಇವೆ. ಸರ್ಕಾರ ಅಗತ್ಯ ಮೂಲ ಸೌಲಭ್ಯ ಒದಗಿಸದೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಕ್ತಾರರಂತೆ ಆನ್ಲೈನ್ ಶಿಕ್ಷಣ ಜಾರಿಗೆ ಮುಂದಾಗಿರುವುದು ದುರಂತದ ವಿಚಾರ ಎಂದರು.
ದಾವಣಗೆರೆಯ ಜೆಜೆಎಂ ವಿದ್ಯಾರ್ಥಿಗಳ ಬಾಕಿ ಉಳಿಸಿಕೊಂಡಿರುವ 16 ತಿಂಗಳ ಶಿಷ್ಯವೇತನ ಕೂಡಲೇ ಬಿಡುಗಡೆ ಮಾಡಬೇಕು. ರಾಜ್ಯದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ರಾಷ್ಟ್ರೀಕರಣ ಮಾಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.