ಎಪಿಎಂಸಿಗೆ ನೂತನ ಸಾರಥಿಗಳ ಆಯ್ಕೆ


Team Udayavani, Feb 10, 2017, 12:42 PM IST

dvg7.jpg

ಜಗಳೂರು: ಇಲ್ಲಿನ ಎಪಿಎಂಸಿ ನೂತನ ಅಧ್ಯಕ್ಷರಾಗಿ ಯು.ಜಿ.ಶಿವಕುಮಾರ್‌, ಉಪಾಧ್ಯಕ್ಷರಾಗಿ ಉಮಾದೇವಿ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಆರಂಭವಾದ ಚುನಾವಣೆಯ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ಯು.ಜಿ.ಶಿವಕುಮಾರ್‌, ಬಿಜೆಪಿಯ ಶ್ರೀಶೈಲಾಚಾರಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. 

ಉಪಾಧ್ಯಕ್ಷ ಸ್ಥಾನಕ್ಕೆ ಉಮಾದೇವಿ ಒಬ್ಬರೇ ನಾಮಪತ್ರ ಸಲ್ಲಿಸಿದರು. ಈ ನಡುವೆ ನಾಮಪತ್ರ ಪರಿಶೀಲನೆ ನಂತರ ನಡೆದ ನಾಮಪತ್ರ ವಾಪಾಸ್ಸು ಪಡೆಯುವ ಪ್ರಕ್ರಿಯೆಯಲ್ಲಿ ಶ್ರೀಶೈಲಾಚಾರಿ ನಾಮಪತ್ರ ವಾಪಾಸ್ಸು ಪಡೆದರು. ಅಧ್ಯಕ್ಷರಾಗಿ ಯು.ಜಿ.ಶಿವಕುಮಾರ್‌, ಉಪಾಧ್ಯಕ್ಷರಾಗಿ ಉಮಾದೇವಿ ಆಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ತಹಶೀಲ್ದಾರ್‌ ಶ್ರೀಧರಮೂರ್ತಿ ಘೋಷಿಸಿದರು. 

ಸದಸ್ಯರಾದ ಎನ್‌.ಎಸ್‌.ರಾಜು, ಡಿ.ಟಿ.ಗುರುಮೂರ್ತಿ, ಎಸ್‌.  ಕೆ.ರಾಮರೆಡ್ಡಿ, ಎಂ.ನಿರ್ಮಲ, ಆರ್‌.ವಿ.ಗೋವಿಂದರಾಜ್‌, ಕೆ.ಹನುಮಂತಪ್ಪ,  ರೇಣುಕಾನಂದ, ಬಿ.ಎನ್‌. ತಿಪ್ಪೇಸ್ವಾಮಿ, ಎಸ್‌.ಜೆ. ಮಲ್ಲಿಕಾರ್ಜುನಸ್ವಾಮಿ,  ಜಿ.ಪಿ.ಶರಣಪ್ಪ ನಾಮನಿರ್ದೇಶನ ಸದಸ್ಯರಾದ ಬಿ.ಬಾಲಮ್ಮ, ಉಮಾಪತಿ, ಎಚ್‌.ಎಸ್‌.ಶಿವಕುಮಾರ್‌, ಎಪಿಎಂಸಿ ಕಾರ್ಯದರ್ಶಿ ಹಾಲಪ್ಪ ಇತರರಿದ್ದರು. 

ತರಕಾರಿ ಮಾರುಕಟ್ಟೆ ಸ್ಥಾಪನೆಗೆ ಆದ್ಯತೆ: ಜಗಳೂರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಜಗಳೂರು ತಾಲೂಕಿನಾದ್ಯಂತ ರೈತರು ಹೆಚ್ಚು ತರಕಾರಿ ಬೆಳೆಯುತ್ತಿದ್ದು, ಅಗತ್ಯ ತರಕಾರಿ ಮಾರುಕಟ್ಟೆ ಸ್ಥಾಪಿಸಲು ಶ್ರಮಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷ ಯು.ಜಿ.ಶಿವಕುಮಾರ್‌ ತಿಳಿಸಿದರು. 

ಈ ವರ್ಷ ತಾಲೂಕಿನಲ್ಲಿ ಭೀಕರ ಬರ ಎದುರಾಗಿ ಬೆಳೆ ಹಾನಿಯಾಗಿರುವುದರಿಂದ ಸಹಜವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಕ ಕಡಿಮೆಯಾಗಿದೆ. ಸರ್ಕಾರದ ಬಿಡುಗಡೆಯಾಗುವ ಅನುದಾನ ಮತ್ತು ಎಪಿಎಂಸಿ ಸಂಗ್ರಹವಾಗುವ ಆದಾಯವನ್ನು ಕ್ರೂಢಿಕರಿಸಿ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು. 

ಶಾಸಕರಿಂದ ಅಭಿನಂದನೆ: ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಾಮನಿರ್ದೇಶನ ಸದಸ್ಯರನ್ನು ಶಾಸಕ ಎಚ್‌.ಪಿ.ರಾಜೇಶ್‌ ಅಭಿನಂದಿಸಿದರು. ಬರಪೀಡಿತ ತಾಲೂಕಿನ ರೈತರ ಸಮಸ್ಯೆಗಳಿಗೆ ಪೂರಕವಾದ ನಿರ್ಣಯ ತೆಗೆದುಕೊಂಡು ಉತ್ತಮ ಆಡಳಿತ ನಡೆಸಬೇಕು. ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿ ಎಪಿಎಂಸಿ ಪ್ರಾಂಗಣವನ್ನು ಅಭಿವೃದ್ಧಿಪಡಿಸಬೇಕು ಎಂದು ಕಿವಿಮಾತು ಹೇಳಿದರು.  

ತಾಪಂ ಉಪಾಧ್ಯಕ್ಷ ಮುದೇಗೌಡ್ರ, ಬ್ಲಾಕ್‌  ಕಾಂಗ್ರೆಸ್‌ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಜಿಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಮುಖಂಡರಾದ ಮೊಬೈಲ್‌ ಮಂಜುನಾಥ್‌, ಬಿಸ್ತುವಳ್ಳಿ ಬಾಬು, ದೇವೇಂದ್ರಪ್ಪ, ಮಾರಣ್ಣ, ಪ್ರಭಣ್ಣ, ಶಿವನಗೌಡ, ಗಿರೀಶ್‌ ಒಡೆಯರ್‌ ಇತರರಿದ್ದರು. 

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.