ಬಾಬೂಜಿ ದೇಶದ ಧೀಮಂತ ನಾಯಕ
Team Udayavani, Apr 6, 2017, 2:30 PM IST
ಜಗಳೂರು: ದಲಿತರ ಹಿತಕ್ಕಾಗಿ ಹೋರಾಟ ಮಾಡಿದ ಮಹಾನ್ ನಾಯಕರು ಅನುಭವಿಸಿದ ಕಷ್ಟ ಸುಖಗಳನ್ನು ಮತ್ತು ಅವರು ಹೇಳಿದ ಅನುಭವದ ಮಾತುಗಳನ್ನು ನಾವಿಂದು ಮರೆಯುತ್ತಿದ್ದೇವೆ ಎಂದು ಜಿಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ ಹೇಳಿದರು.
ಪಟ್ಟಣದ ಸಮಾಜಕಲ್ಯಾಣ ಇಲಾಖಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ 110 ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದಲಿತರು ಹಿರಿಯ ನಾಯಕರ ತತ್ವ ಸಿದ್ಧಾಂತವನ್ನು ಮರೆತ ಇಂದಿನ ದಲಿತರ ಹೋರಾಟಗಾರರು ತಮ್ಮದೇ ದಾಟಿಯಲ್ಲಿ ಹೋರಾಟ ಮಾಡುತ್ತಿರುವುದರಿಂದ ಗುರಿ ತಲುಪುವಲ್ಲಿ ವಿಫಲವಾಗುತ್ತಿದ್ದಾರೆ. ಇದರಿಂದ ಶೋಷಿತ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಆತಂಕ ವ್ಯಕ್ತಪಡಿಸಿದರು.
ಮುಖಂಡ ಜಿ.ಎಚ್.ಶಂಭುಲಿಂಗಪ್ಪ ಮಾತನಾಡಿ, ಜಗಜೀವನ್ರಾಂ ದೇಶದಲ್ಲಿ ಹಸಿರು ಕ್ರಾಂತಿ ಜಾರಿಗೆ ತರುವ ಮೂಲಕ ಕೃಷಿಗೆ ವೈಜ್ಞಾನಿಕ ರೂಪ ಕೊಟ್ಟು ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ ಧಿಧೀಮಂತ ನಾಯಕ. ಆದರೆ ದೇಶದ ಜಾತಿವ್ಯವಸ್ಥೆ ಅವರನ್ನು ಪ್ರಧಾನಿಯಾಗಲು ಬಿಡಲಿಲ್ಲ.
ಜಗಜೀವನ್ರಾಂ ಕೇವಲ ಉಪ ಪ್ರಧಾನಿಯಾಗಿ ತೃಪ್ತಿಪಟ್ಟುಕೊಳ್ಳಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ನಾಗಲಿಂಗಪ್ಪ ಮಾತನಾಡಿ, ತಮ್ಮ ಜೀವಿತಾಧಿವಧಿಗೂ ಕಾಂಗ್ರೆಸ್ ಪಕ್ಷದ ನಿಷ್ಟಾವಂತರಾಗಿದ್ದ ಜಗಜೀವನ್ ರಾಂ ದಲಿತರೆಂಬ ಕಾರಣಕ್ಕಾಗಿಯೇ ಪ್ರಧಾನಿ ಪಟ್ಟ ಕೈತಪ್ಪಿತು.
ಆದರೂ ದೃತಿಗೇಡದೇ ತಳ ಸಮುದಾಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು. ಎಪಿಎಂಸಿ ನಾಮನಿರ್ದೇಶನ ಸದಸ್ಯ ಶಿವಕುಮಾರ್, ನಾಯಕ ಸಮಾಜದ ಕಾರ್ಯದರ್ಶಿ ಬಿ.ಲೋಕೇಶ್, ಸಮಾಜ ಕಲ್ಯಾಣಾಧಿಕಾರಿ ಎಸ್.ಕೆ. ಅಶೋಕ್, ವ್ಯವಸ್ಥಾಪಕ ಮಹೇಶ್, ದಸಂಸ ಕುಬೇಂದ್ರಪ್ಪ, ಕುಬೇರಪ್ಪ, ಮಲ್ಲಿಕಾರ್ಜುನ, ಮುರಳಾರಾಧ್ಯ, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.