ಹದಿಹರೆಯದಲ್ಲಿ ಎಚ್ಚರವಿರಲಿ: ಡಾ| ಗೀತಾಲಕ್ಷ್ಮಿ


Team Udayavani, Feb 24, 2017, 12:39 PM IST

dvg5.jpg

ದಾವಣಗೆರೆ: ಯುವ ಜನಾಂಗ ಹದಿಹರೆಯದ ಉತ್ಸಾಹದ ಅಲೆಯಲ್ಲಿ ವ್ಯಾಮೋಹಕ್ಕೆ ಸಿಲುಕಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಎಸ್‌.ಎಸ್‌. ಹೈಟೆಕ್‌ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಔಷಧಿ ವಿಭಾಗ ಮುಖ್ಯಸ್ಥೆ ಡಾ| ಆರ್‌.ಜಿ. ಗೀತಾಲಕ್ಷ್ಮಿಸಲಹೆ ನೀಡಿದ್ದಾರೆ. 

ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರಾಜ್ಯ ಏಡ್ಸ್‌ ಪ್ರಿವೆನÒನ್‌ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಏಡ್ಸ್‌ ಜಾಗೃತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಯುವ ಜನಾಂಗ ಯಾವುದೇ ಕಾರಣಕ್ಕೂ ವಿವಾಹಪೂರ್ವ ಲೈಂಗಿಕತೆಗೆ ಒಳಗಾಗಬಾರದು. ಜಾಗೃತಿ ಮತ್ತು ಜಾಗೂರುಕತೆಯಿಂದ ಇರಬೇಕು ಎಂದರು. 

ಭಾರತದಂತಹ ಸಂಪ್ರದಾಯ ದೇಶದಲ್ಲಿ ಹಿಂದೆಲ್ಲಾ ಲೈಂಗಿಕ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡುವ ವಾತಾವರಣ ಇರಲೇ ಇಲ್ಲ. ಈಗ ಮಾತನಾಡುವಂತಹ ವಾತಾವರಣ ಕಂಡು ಬರುತ್ತದೆ. ಆದರೆ, ಯಾವುದೇ ಆಗಲಿ ಸ್ವೇಚ್ಛಾಚಾರಕ್ಕೆ ಕಾರಣವಾಗಬಾರದು. ಲೈಂಗಿಕ ವಿಚಾರವೂ ಸಹ ಸ್ವೇಚ್ಛಾಚಾವಾದಲ್ಲಿ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪೀÅತಿ, ಪ್ರೇಮದ ಅಮಲಿನಲ್ಲಿ ನಮ್ಮತನ ಮರೆಯಬಾರದು. ಆಸಕ್ತಿ, ಕುತೂಹಲದಿಂದಾಗಿ ವಿವಾಹಪೂರ್ವ ಲೈಂಗಿಕ ಚಟುವಟಿಕೆ ತೀರಾ ಅಪಾಯಕಾರಿ. ಗೊತ್ತೋ, ಗೊತ್ತಿಲ್ಲದೆಯೋ ಮಾಡುವಂತಹ ಕೆಲಸಕ್ಕೆ ಜೀವನವೇ ಹಾಳಾಗುತ್ತದೆ. ಹಾಗಾಗಿ ಸಾಕಷ್ಟು ಎಚ್ಚರದಿಂದ ಇರಬೇಕು ಎಂದು ತಿಳಿಸಿದರು. ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷೆಗೆ ಒಳಪಡಿಸಿದ ರಕ್ತ ಪಡೆಯುವುದು, ಪದೆ ಪದೆ ಬಳಸಿದ ಸಿರಿಂಜ್‌ ಬಳಸುವುದರಿಂದ ಮಹಾಮಾರಿ ಎಚ್‌ಐವಿ ವೈರಸ್‌ ದೇಹ ಪ್ರವೇಶಿಸುತ್ತದೆ.

ಎಚ್‌ಐವಿ ವೈರಸ್‌ನ ಪ್ರಭಾವ ಹೆಚ್ಚಾಗುತ್ತಿದ್ದಂತೆ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ. ಬಿಳಿ ರಕ್ತ ಕಣಗಳು ನಾಶವಾಗಿ ಎಚ್‌ಐವಿ ಏಡ್ಸ್‌ ಆಗಿ ಪರಿವರ್ತನೆಯಾಗುತ್ತದೆ. ಮಂದೆ ಜೀವಕ್ಕೂ ಅಪಾಯ ಉಂಟು ಮಾಡುತ್ತದೆ ಎಂದು ತಿಳಿಸಿದರು. ಬಹು ಸಂಗಾತಿಗಳೊಂದಿಗೆ, ಅಸುರಕ್ಷಿತ ಲೈಂಗಿಕ ಸಂಪರ್ಕ ಕೂಡದು. ಇತರರಿಂದ ರಕ್ತ ಪಡೆಯಬೇಕಾದ ಸಂದರ್ಭದಲ್ಲಿ ಎಲ್ಲಾ ರೀತಿಯ ಪರೀಕ್ಷೆಯ ನಂತರವೇ ಪಡೆಯಬೇಕು.

ಎಚ್‌ಐವಿ, ಏಡ್ಸ್‌ ಪೀಡಿತರನ್ನು ಮುಟ್ಟುವುದರಿಂದ, ಪಕ್ಕದಲ್ಲಿ ಕುಳಿತುಕೊಳ್ಳುವುದರಿಂದ ಇತರೆ ಮೂಲದಿಂದ ಎಚ್‌ಐವಿ, ಏಡ್ಸ್‌ ಬರುವುದಿಲ್ಲ. ಎಚ್‌ಐವಿ, ಏಡ್ಸ್‌ ಪೀಡಿತರನ್ನು ನಿಕೃಷ್ಟವಾಗಿ ಕಾಣಬಾರದು ಎಂದು ತಿಳಿಸಿದರು. ಕಾಲೇಜು ಪ್ರಾಚಾರ್ಯ ಡಾ| ಕೆ. ಷಣ್ಮುಖ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆಪ್ತ ಸಮಾಲೋಚಕಿ ಸ್ನೇಹಾ ಎಸ್‌. ಹಂಜಿ ಇತರರು ಇದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.