25 ಕೋಟಿ ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌ ಆರೋಪ

Team Udayavani, Apr 4, 2022, 3:39 PM IST

davangere

ದಾವಣಗೆರೆ: ಇಲ್ಲಿನ ಎಂಸಿಸಿ ಬಿ ಬ್ಲಾಕ್‌ನಲ್ಲಿ ಮಹಾನಗರಪಾಲಿಕೆಗೆ ಸೇರಿದ 25 ಕೋಟಿ ರೂ. ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌ ಗಂಭೀರ ಆರೋಪ ಮಾಡಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ಮಹಾನಗರಪಾಲಿಕೆಯ ನಿವೇಶನದಲ್ಲಿ ಒಳಾಂಗಣ ಕ್ರೀಡಾಂಗಣ, ವಾಣಿಜ್ಯ ಕಟ್ಟಡ, ನಗರಪಾಲಿಕೆ ಕಚೇರಿ ನಿರ್ಮಾಣಕ್ಕೆ ಮನವಿ ಮಾಡಲಾಗುತ್ತಿದೆ. ಸ್ವತಃ ಶಾಸಕ ರವೀಂದ್ರನಾಥ್‌ ಕೂಡ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಆ ನಿವೇಶನ ಕಾರ್ಯಾಲಯಕ್ಕೆ ನಿವೇಶನ ಮಂಜೂರು ಮಾಡಿಕೊಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಮಹಾನಗರಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಅದು ನಮ್ಮ ಜಾಗ ಮತ್ತು ನಮ್ಮ ಹಕ್ಕು. ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟುಕೊಡುವುದಿಲ್ಲ ಎಂದರು.

ಎಂಸಿಸಿ ಬಿ ಬ್ಲಾಕ್‌ನಲ್ಲಿ 3681/10, 3681/10ಎ, 3681/11 ಹಾಗೂ 3681/12 ಸರ್ವೇ ನಂಬರ್‌ನಲ್ಲಿ 131.23 -196.86 ಅಡಿ ಸುತ್ತಳತೆಯ ಮಹಾನಗರ ಪಾಲಿಕೆಗೆ ಸೇರಿದ ನಿವೇಶನ ಇದೆ. ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂ. ಆಗಬಹುದು. ಅಂತಹ ಬೆಲೆ ಬಾಳುವ ಮತ್ತು ಸಾರ್ವಜನಿಕ ಅನುಕೂಲಕ್ಕೆ ಮೀಸಲಿಟ್ಟಿರುವ ಜಾಗವನ್ನ ಬಿಜೆಪಿ ಕಾರ್ಯಾಲಯಕ್ಕೆ ಮಂಜೂರು ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಎಸ್‌. ಎಂ. ವೀರೇಶ್‌ ಹನಗವಾಡಿ ಜ. 20ರಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಿವೇಶನ ಕಬಳಿಸುವ ಯತ್ನ ನಡೆಸಲಾಗುತ್ತಿದೆ ಎಂದು ದೂರಿದರು.

ನಾವು ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟು ಕೊಡುವುದಿಲ್ಲ. ಕಾನೂನು ಹೋರಾಟ ಒಳಗೊಂಡಂತೆ ಎಲ್ಲ ಹಂತದ ಹೋರಾಟ ನಡೆಸುತ್ತೇವೆ. ಆ ಜಾಗವನ್ನು ಬಿಜೆಪಿ ಆಸ್ತಿಯನ್ನಾಗಿ ಮಾಡಿಕೊಳ್ಳಲು ಬಿಡುವುದೇ ಇಲ್ಲ. ಎಂತದ್ದೇ ತ್ಯಾಗಕ್ಕೂ ಸಿದ್ಧ ಎಂದು ಗುಡುಗಿದರು.

ಕಾಂಗ್ರೆಸ್‌ ಸದಸ್ಯ ಎ. ನಾಗರಾಜ್‌ ಮಾತನಾಡಿ, ಮಹಾನಗರ ಪಾಲಿಕೆ ಬಜೆಟ್‌ ಸಭೆಯಲ್ಲಿ ಏಕಾಏಕಿ ಸ್ವಯಂ ಘೋಷಣೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನ ವಿರೋಧಿಸಿ ಮುಂದಿನ ದಿನಗಳಲ್ಲಿ ಹಂತ ಹಂತದ ಹೋರಾಟ ನಡೆಸಲಾಗುವುದು. ಕೊರೊನಾ ಕಾರಣದಿಂದ ತೆರಿಗೆ ಹೆಚ್ಚಳ ಮಾಡದಂತೆ ಮನವಿ ಮಾಡಲಾಗಿತ್ತು. ಆದರೂ ಬಜೆಟ್‌ ಸಭೆಯಲ್ಲಿ ಎಸ್‌ ಎಎಸ್‌ ಪದ್ಧತಿಯಡಿ ಶೇ. 3 ರಷ್ಟು ತೆರಿಗೆ ಹೆಚ್ಚಿಸಿರುವುರಿಂದ ಜನರಿಗೆ ಹೊರೆ ಅಗಲಿದೆ. 2005-06ರಲ್ಲಿ ನಿಗದಿಯಾಗಿರುವಂತೆ ತೆರಿಗೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

2020-21ನೇ ಸಾಲಿನಲ್ಲಿ ಜಿಲ್ಲಾಧಿಕಾರಿ ಅಧಿಕಾರಾವಧಿಯಲ್ಲಿ ವಸತಿ ವಲಯಕ್ಕೆ ಶೇ. 15, ವಾಣಿಜ್ಯ ಸಂಕೀರ್ಣಕ್ಕೆ ಶೇ. 17 ತೆರಿಗೆ ಹೆಚ್ಚಿಸಲಾಗಿದೆ. ಈಗ ಉಪ ನೋಂದಣಿ ಇಲಾಖೆ ಮೌಲ್ಯದ ಆಧಾರದಲ್ಲಿ ಶೇ. 3 ರಿಂದ 5ರಷ್ಟು ತೆರಿಗೆ ಹೆಚ್ಚಿಸಿರುವುದರಿಂದ ತೆರಿಗೆ ಪಾವತಿದಾರರಿಗೆ ಹೆಚ್ಚು ಹೊರೆ ಆಗಲಿದೆ. ಒಂದು ವರ್ಷ ತೆರಿಗೆ ಕಟ್ಟದೇ ಹೋದಲ್ಲಿ ಶೇ. 24ರಷ್ಟು ದಂಡ ಹಾಕಲಾಗುವುದು. ಮೂಲ ಕಂದಾಯಕ್ಕೆ ಸೆಸ್‌ ವಿಧಿಸಬೇಕು. ತೆರಿಗೆ ಹೆಚ್ಚಳ ಹಿಂದಕ್ಕೆ ಪಡೆಯಬೇಕು. ಇಲ್ಲದೆ ಹೋದರೆ ಕಾಂಗ್ರೆಸ್‌ ನಿಂದ ಹೋರಾಟ ಮಾಡಲಾಗುವುದು ಎಂದರು.

ಸದಸ್ಯ ಕೆ. ಚಮನ್‌ ಸಾಬ್‌ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು, ಜನರ ಬೇರೆಡೆ ಗಮನ ಸೆಳೆಯಲು ಹಿಜಾಬ್‌, ಕಾಶ್ಮೀರ್‌ ಫೈಲ್ಸ್‌, ಈಗ ಜಟ್ಕಾ, ಹಲಾಲ್‌ ಕಟ್‌ ವಿಚಾರ ಕೈಗೆತ್ತಿಕೊಂಡಿವೆ ಎಂದು ದೂರಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್‌, ಗಣೇಶ್‌ ಹುಲ್ಮನೆ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.