BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
ಸಭೆ ನಡೆಸದಂತೆ, ಬಹಿರಂಗ ಹೇಳಿಕೆ ನೀಡದಂತೆ ತಾಕೀತು; ದಾವಣಗೆರೆಯಲ್ಲಿ ಆಗಬೇಕಿದ್ದ ಸಭೆಯಿಂದ ಭಿನ್ನರು ದೂರ
Team Udayavani, Sep 30, 2024, 6:45 AM IST
ದಾವಣಗೆರೆ: ಪಕ್ಷ ದೊಳಗಿನ ಗೊಂದಲಗಳ ಬಗ್ಗೆ ಯಾವುದೇ ಸಭೆ ನಡೆಸದಂತೆ, ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ವರಿಷ್ಠರ ಖಡಕ್ ಸೂಚನೆ ಹಿನ್ನೆಲೆಯಲ್ಲಿ ರವಿವಾರ ದಾವಣಗೆರೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವ ದಲ್ಲಿ ಕರೆದಿದ್ದ ಭಿನ್ನರ ಗುಪ್ತ ಸಭೆ ವಿಫಲಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಸ್ವಪಕ್ಷದವರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಲೇ ಬೆಳಗಾವಿ, ಬೆಂಗಳೂರಿನಲ್ಲಿ ಗುಪ್ತ ಸಭೆ ನಡೆಸಿದ್ದ ಯತ್ನಾಳ್ ಬಳಗಕ್ಕೆ ದಾವಣಗೆರೆಯಲ್ಲಿ ಮುಖಂಡರ ಬೆಂಬಲ ಸಿಗಲಿಲ್ಲ. ಹೀಗಾಗಿ ಸಭೆಯನ್ನು ಸ್ಥಳೀಯವಾಗಿ ನಡೆದಿರುವ ಗಣೇಶನ ಮೆರವಣಿಗೆ ಮೇಲಿನ ಕಲ್ಲು ತೂರಾಟ ಘಟನೆಗೆ ಸೀಮಿತಗೊಳಿಸಲಾಯಿತು.
ಯತ್ನಾಳ್ ಬಳಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹ ನಿಗದಿಯಾಗಿದ್ದ ತಮ್ಮ ದಾವಣಗೆರೆ ಪ್ರವಾಸವನ್ನೇ ಮೊಟಕುಗೊಳಿಸಿದರು.
ಜಿಲ್ಲೆಯ ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ರಾಜೇಶ್, ಪ್ರೊ| ಲಿಂಗಣ್ಣ ಅವರನ್ನೂ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಅವರೆಲ್ಲರೂ ಸಭೆಯಿಂದ ದೂರ ಉಳಿದಿದ್ದರಿಂದ ಉದ್ದೇಶ ಈಡೇರಿಲ್ಲ ಎನ್ನಲಾಗಿದೆ.
ನಿರೀಕ್ಷಿತ ಮಟ್ಟದಲ್ಲಿ ಸಭೆ ಯಶಸ್ವಿಯಾಗದಿದ್ದರೂ ಯತ್ನಾಳ್ ಸ್ವಪಕ್ಷದವರ ವಿರುದ್ಧ ವಾಗ್ಧಾಳಿಯನ್ನು ನಿಲ್ಲಿಸಲಿಲ್ಲ. ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ರವಾನೆಯೂ ಆಗಿದ್ದು ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ಪಕ್ಷದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ. ಈ ಹಿಂದೆ ಕುಮಾರ ಬಂಗಾರಪ್ಪ ಮನೆಯಲ್ಲಿ ಸಭೆ ಮಾಡಿದಾಗಲೇ ಏನು ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದರು.
ಸಭೆಯಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ, ಜಿ.ಎಂ. ಸಿದ್ದೇಶ್ವರ, ಗಾಯತ್ರಿ ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ್ ಹಾಗೂ ಸ್ಥಳೀಯ ಪ್ರಮುಖರಷ್ಟೇ ಭಾಗಿಯಾಗಿದ್ದರು.
ಆಂತರಿಕ ಚರ್ಚೆ ಇಲ್ಲ
-ಯತ್ನಾಳ್ ನೇತೃತ್ವದಲ್ಲಿ ನಡೆಯಬೇಕಿದ್ದ ಗುಪ್ತ ಸಭೆ
-ಯತ್ನಾಳ್, ಪ್ರತಾಪ್ ಸೇರಿ ಕೆಲವರು ಮಾತ್ರ ಭಾಗಿ
-ರಮೇಶ್ ಜಾರಕಿಹೊಳಿ, ಎಸ್.ವಿ. ರಾಮಚಂದ್ರ, ಲಿಂಗಣ್ಣ ಗೈರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !
State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ
Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.