ಬಿಜೆಪಿ ಗೆಲುವಿಗೆ ಕಾರ್ಯಕರ್ತರ ಸಂಭ್ರಮ


Team Udayavani, Mar 12, 2017, 12:25 PM IST

dvg1.jpg

ದಾವಣಗೆರೆ: ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಸಾಧಿಸಿದ ಮೇಲುಗೈ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಕೆ.ಬಿ. ಬಡಾವಣೆಯಲ್ಲಿರುವ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯದೇವ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ಪಟಾಕಿ, ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. 

ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಪರ ಘೋಷಣೆ ಕೂಗಿದರು. ಈಗ ಉತ್ತರ ಪ್ರದೇಶ, ಮಂದೆ ಕರ್ನಾಟಕದಲ್ಲಿ ನಮ್ಮದೇ ಆಡಳಿತ ಎಂದು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್‌, ಇದು ಪ್ರಧಾನಿ ನರೇಂದ್ರಮೋದಿಯವರೆಗೆ ಸಂದ ಗೆಲುವಾಗಿದೆ. 

ಗರಿಷ್ಠ ಮುಖಬೆಲೆಯ ನೋಟ್‌ ಬ್ಯಾನ್‌ ನಿಂದ ಜನಸಾಮಾನ್ಯರಿಗೆ ತೊಂದರೆ ಆಗಿದೆಎಂಬ ವಿಪಕ್ಷಗಳ ಟೀಕೆ ಸುಳ್ಳು ಎಂಬುದು ಈ ಚುನಾವಣೆ ಮೂಲಕ ಸಾಬೀತಾಗಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ಜನಪರ ಯೋಜನೆಗಳಿಂದಾಗಿ ಉತ್ತರ ಪ್ರದೇಶ, ಉತ್ತರ ಖಾಂಡ್‌, ಮಣಿಪುರದ ಜನತೆ ಮೋದಿಯವರನ್ನುಬೆಂಬಲಿಸಿದ್ದಾರೆ ಎಂದರು. 

ಹೋಳಿ ಹಬ್ಬದ ಕೊಡುಗೆಯಾಗಿ ಬಿಜೆಪಿಗೆ ಈ ಗೆಲುವು ಸಿಕ್ಕಿದೆ. ಈ ಚುನಾವಣೆಯಿಂದ ಹೊಸ ಯುಗ ಆರಂಭವಾದಂತಾಗಿದೆ. ನರೇಂದ್ರಮೋದಿ ನಮ್ಮ ದೇಶದ ಹೆಮ್ಮೆಯ ಪುತ್ರರಾಗಿ ಹೊರಹೊಮ್ಮಿದ್ದಾರೆ. ಗೋವಾ ಚುನಾವಣೆಯಲ್ಲಿ  ಕೊಂಚ ಹಿನ್ನಡೆಯಾಗಿದೆ. ಆದರೆ, ಇತರೆ ಶಾಸಕರ ಬೆಂಬಲದಿಂದ ಅಲ್ಲೂ ಸಹ ನಾವು ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ಅವರು ಹೇಳಿದರು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಈ ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ದೂಳಿಪಟವಾಗಿತ್ತು. ಇದೀಗ 5 ರಾಜ್ಯಗಳ ಚುನಾವಣೆಯಲ್ಲೂ ಮುಖಭಂಗ ಅನುಭವಿಸಿದೆ. ನರೇಂದ್ರ ಮೋದಿಯವರ ಆಡಳಿತ ಮೆಚ್ಚಿರುವ ಜನತೆ ನಮ್ಮ  ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ವಿಪಕ್ಷಗಳು ಸುಳ್ಳು ಆರೋಪ ಮಾಡಿ, ಮೋದಿಯವರ ಜನಪ್ರಿಯತೆ ಕುಗ್ಗಿಸಲು ಯತ್ನಿಸಿದರು. ಆದರೆ, ಜನ ಮೋದಿಯವರ ಬೆಂಬಲಕ್ಕೆ ಇದ್ದಾರೆ ಎಂಬುದು ಸಾಬೀತಾಗಿದೆ ಎಂದರು. ಇದೇ ರೀತಿ ಮುಂದಿನ ನಮ್ಮ ರಾಜ್ಯದ ವಿಧಾನ ಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಪರವಾಗಿ ಬರಲಿವೆ.

ಯಡಿಯೂರಪ್ಪನವರು ಹೇಳಿದಂತೆ 150ಕ್ಕೂ ಹೆಚ್ಚು ಸ್ಥಾನ ನಾವು ಗೆಲ್ಲುತ್ತೇವೆ.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ.  ಕಾಂಗ್ರೆಸ್‌ನ ಭ್ರಷ್ಟ ಸರ್ಕಾರ ತೊಲಗಲಿದೆ ಎಂದು ಅವರು ಹೇಳಿದರು. ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಮಾಜಿ ಶಾಸಕ ಎಸ್‌.ವಿ. ರಾಮಚಂದ್ರ, ಜಿಪಂ ಅಧ್ಯಕ್ಷೆ ಉಮಾ ರಮೇಶ್‌,

ಪಾಲಿಕೆ ಸದಸ್ಯ ಡಿ.ಕೆ. ಕುಮಾರ್‌, ಮುಖಂಡರಾದ ಜಯಪ್ರಕಾಶ್‌ ಕೊಂಡಜ್ಜಿ, ಆನಂದಪ್ಪ, ಎಚ್‌.ಎನ್‌. ಶಿವಕುಮಾರ್‌,ಬಿ. ರಾಜಶೇಖರ್‌, ಪಿ.ಸಿ. ಶ್ರೀನಿವಾಸ್‌, ಎಚ್‌.ಸಿ. ಜಯಮ್ಮ, ಕೆ.ಪಿ. ಕಲ್ಲಿಂಗಪ್ಪ, ಹೇಮಂತಕುಮಾರ್‌, ಶಿವನಗೌಡ ಪಾಟೀಲ್‌, ಪ್ರಭು ಕಲಬುರ್ಗಿ ಇತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

Davanagere; ಬಿಜೆಪಿ ವಿರುದ್ದ ಶೋಷಿತ ಸಮುದಾಯದ ಒಕ್ಕೂಟದಿಂದ ಮೌನ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.