ಬಿಆರ್‌ಸಿ ಕಚೇರಿಗೆ ಬಂತು ಹೊಸಕಳೆ


Team Udayavani, Mar 28, 2019, 2:05 PM IST

dvg-1
ಹೊನ್ನಾಳಿ: ಮನಸ್ಸಿದ್ದರೆ ಮಾರ್ಗ ಎನ್ನುವಂತೆ ಪಟ್ಟಣದ ಬಿಆರ್‌ಸಿ ಕಟ್ಟಡಕ್ಕೆ ಕಾಯಕಲ್ಪ ನೀಡಿ, ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಒಂದು ಬಾರಿ ಕಟ್ಟಡದ ಕಡೆಗೆ ಕಣ್‌ ಹಾಯಿಸುವಂತೆ ಮಾಡಿದ್ದಾರೆ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಎಚ್‌.ಎಸ್‌. ಉಮಾಶಂಕರ್‌.
ಈ ಹಿಂದೆ ಬಿಆರ್‌ಸಿ ಕಟ್ಟಡ ಸುಣ್ಣ, ಬಣ್ಣ ಹಾಗೂ ಮೂಲ ಸೌಕರ್ಯವಿಲ್ಲದೆ ದುಸ್ಥಿತಿಯಲ್ಲಿತ್ತು. ಕತ್ತಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಚ್‌.ಎಸ್‌. ಉಮಾಶಂಕರ್‌ ಬಿಆರ್‌ಸಿಯಾಗಿ ಬಂದ ನಂತರ ಕಟ್ಟಡದ ಸೌಂದರ್ಯೀಕರಣಕ್ಕೆ ರೂಪರೇಷೆ ಹಾಕಿಕೊಂಡು ಕಾರ್ಯಪ್ರವೃತ್ತರಾದರು.
ಸರ್ಕಾರದಿಂದ ಅನುದಾನವಿಲ್ಲದೆ ಸುಣ್ಣ, ಬಣ್ಣ, ಗೋಡೆ ಬರಹ, ಫ್ಯಾನ್‌ಗಳು, ಟ್ಯೂಬ್‌ಲೈಟ್‌ಗಳು, ನೆಲಹಾಸು ಮೊದಲಾದವುಗಳನ್ನು ಹೊಂದಿಸುವುದು ಹೇಗೆ ಎಂದು ಚಿಂತಿಸಿ, ಸರ್ಕಾರಿ ಪ್ರಾಥಮಿಕ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆ ನೀಡಲು ವ್ಯಾಟ್ಸ್‌ ಆ್ಯಪ್‌ ಮೂಲಕ ಮನವಿ ಮಾಡಿದರು.
ಕೇಳುವ ಕೈ ಸ್ವತ್ಛವಾಗಿದ್ದರೆ ಕೊಡುಗೈ ದಾನಿಗಳಿಗೆ ಬರವಿಲ್ಲ ಎನ್ನುವಂತೆ ಶಿಕ್ಷಕರು ನಾ ಮುಂದು ತಾ ಮುಂದು ಎಂದು ರೂ.100ರಿಂದ ಹಿಡಿದು ಸಾವಿರದವರೆಗೂ ದೇಣಿಗೆ ನೀಡಿದರು. ಈ ಹಣದಿಂದ ಬಿಆರ್‌ಸಿ ಕಟ್ಟಡಕ್ಕೆ ಸುಣ್ಣ-ಬಣ್ಣ ಮಾಡಿಸಿ, ಶಿಕ್ಷಣಕ್ಕೆ ಪೂರಕವಾದ ಯುಕ್ತಿಗಳಾದ ಬಾಲ ಕಾರ್ಮಿಕ ಪದ್ಧತಿ ತೊಲಗಿಸಿ ಶಿಕ್ಷಣ ಆರಂಭಿಸಿ, ಶಿಕ್ಷಣವೇ ಶಕ್ತಿ ಸೇರಿದಂತೆ ಇತರೆ ಚಿತ್ರ, ಬರಹಗಳನ್ನು ಬರೆಸಲಾಯಿತು. ಕಟ್ಟಡ ಪ್ರವೇಶಿಸುತ್ತಿದ್ದಂತೆ ಬಲ ಭಾಗದಲ್ಲಿ ಶಿಕ್ಷಣ ಇಲಾಖೆ ವರ್ಗೀಕರಣದ ಮಾಹಿತಿ ಬರೆಸಲಾಗಿದೆ.
ಇದರಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮಂತ್ರಿಯಿಂದ ಪ್ರಾರಂಭವಾಗಿ ಕೊನೆ ಹಂತದ ಪ್ರಾಥಮಿಕ ಶಾಲಾ ಶಿಕ್ಷಕರವರೆಗೆ ಮಾಹಿತಿ ಇದೆ. ಈ ಬರವಣಿಗೆಗೆ ತಾಲೂಕಿನ ಚಿತ್ರಕಲಾ ಶಿಕ್ಷಕರನ್ನು ಬಿಡುವಿನ ವೇಳೆಯಲ್ಲಿ ಬಳಸಿಕೊಳ್ಳಲಾಗಿದೆ. ಅಲ್ಲದೇ ಕಚೇರಿಯಲ್ಲಿ ನೀರಿನ ವ್ಯವಸ್ಥೆ. ಫ್ಯಾನ್‌, ಟ್ಯೂಬ್‌ಲೈಟ್‌ಗಳ ವ್ಯವಸ್ಥೆ ಮಾಡಿ ಒಳಗೋಡೆಗಳ ಮೇಲೆ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿವರ ಹಾಗೂ ಮಕ್ಕಳ ಸಂಖ್ಯೆಯನ್ನು ಬರೆಯಿಸಿ ಸಮಗ್ರ ಚಿತ್ರಣ ದೊರೆಯುವಂತೆ ಮಾಡಲಾಗಿದೆ. ಮಹಾತ್ಮರ, ದಾರ್ಶನಿಕರ, ಶಿಕ್ಷಣ ತಜ್ಞರ ಫೋಟೊಗಳನ್ನು ಕಟ್ಟಡದಲ್ಲಿ ಹಚ್ಚಲಾಗಿದೆ.
ಈ ಎಲ್ಲ ಕೆಲಸ ಕಾರ್ಯಗಳಿಗೆ ತಗುಲಿದ ವೆಚ್ಚ ಬರೋಬ್ಬರಿ 1.70 ಲಕ್ಷ ರೂ.ಗಳು. ತಾಲೂಕಿನ ಶಿಕ್ಷಕರು, ಶಾಲೆಗಳು ಕೈ ಜೋಡಿಸಿದ್ದರಿಂದ ಬಿಆರ್‌ಸಿ ಕಚೇರಿ ಈಗ ಒಂದು ಸುಂದರ ಕಚೇರಿಯಾಗಿ ಮಾರ್ಪಟ್ಟಿದೆ.
ತಾಲೂಕಿನ ಎಲ್ಲಾ ಶಿಕ್ಷಕರು ಕೈಜೋಡಿಸಿದ ಪರಿಣಾಮ ತಾಲೂಕು ಕೇಂದ್ರದ ಬಿಆರ್‌ಸಿ ಕಟ್ಟಡಕ್ಕೆ ಕಾಯಕಲ್ಪ ನೀಡಲಾಯಿತು. ಡಯಟ್‌ ಪ್ರಾಂಶುಪಾಲ ಲಿಂಗರಾಜ್‌ ಇದಕ್ಕೆಲ್ಲ ಪ್ರೇರಕರು. ಶಿಕ್ಷಣದ ಅಗತ್ಯಗಳನ್ನು ಪೂರೈಸಲು ಸಹಕರಿಸಿದ ಎಲ್ಲಾ ಶಿಕ್ಷಕರಿಗೆ ಇಲಾಖೆ ಪರ ಧನ್ಯವಾದಗಳು.
 ಎಚ್‌.ಎಸ್‌. ಉಮಾಶಂಕರ್‌, ಬಿಆರ್‌ಸಿ, ಹೊನ್ನಾಳಿ.
ಶಿಕ್ಷಣದ ಮೂಲಭೂತ ಅವಶ್ಯಕತೆಗಳಿಗನುಗುಣವಾಗಿ ಬಿಆರ್‌ಸಿ ಕಚೇರಿ ಕಟ್ಟಡಕ್ಕೆ ಉತ್ತಮ ಸ್ಪರ್ಶ ಕೊಡಲಾಗಿದೆ. ಇದೊಂದು ಪ್ರಯೋಗಾಲಯ ಹಾಗೂ ಡಯಟ್‌ನ ಆಶಯಕ್ಕೆ ತಕ್ಕಂತೆ ನವೀಕರಣಗೊಳಿಸಲಾಗಿದೆ.
 ಜಿ.ಇ. ರಾಜೀವ್‌, ಬಿಇಒ, ಹೊನ್ನಾಳಿ
„ಎಂ.ಪಿ.ಎಂ. ವಿಜಯಾನಂದಸ್ವಾಮಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.