ಆತ್ಮವಿಶ್ವಾಸದಿಂದ ಬದುಕು ಕಟ್ಟಿಕೊಳ್ಳಿ


Team Udayavani, Feb 9, 2017, 12:17 PM IST

dvg2.jpg

ದಾವಣಗೆರೆ: ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳಿರಿಮೆ ಬದಿಗಿಟ್ಟು ಸಕರಾತ್ಮಕ ಚಿಂತನೆ, ಆತ್ಮವಿಶ್ವಾಸ ಬೆಳೆಸಿಕೊಳ್ಳುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಎಸ್‌.ಎಸ್‌. ಹೈಟೆಕ್‌ ವೈದ್ಯಕೀಯ ಮಹಾವಿದ್ಯಾಲಯದ ಫೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ| ಶಶಿಕಲಾ ಪಿ. ಕೃಷ್ಣಮೂರ್ತಿ ಸಲಹೆ ನೀಡಿದ್ದಾರೆ. 

ಬುಧವಾರ ಮಹಿಳಾ ಸೇವಾ ಸಮಾಜದಲ್ಲಿ ಚೈತನ್ಯದ ಚಿಣ್ಣರಿಗೆ ಸದಾವಕಾಶ…ವಿಷಯ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದೇವೆ, ನಾವು ಬಡವರು… ಇಂಥಹ ಕೀಳಿರಿಮೆ ಭಾವನೆ ತೊರೆಯಬೇಕು.

ಜೀವನದ ಗುರಿ ಮುಟ್ಟುವಂತಾಗಲು ಆತ್ಮವಿಶ್ವಾಸದೊಂದಿಗೆ ಸಕರಾತ್ಮಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದರು. ಇಂದಿನ ವಾತಾವರಣದಲ್ಲಿ ಮಕ್ಕಳು ಚಲನಚಿತ್ರ, ಟಿವಿ, ಕಂಪ್ಯೂಟರ್‌, ಮೊಬೈಲ್‌ ವೀಕ್ಷಣೆಗೇ ಆಸಕ್ತಿ ತೋರುತ್ತಾರೆ. ಅದೇ ರೀತಿ ಓದು- ಬರೆಯುವುದಕ್ಕೆ ಆಸಕ್ತಿ ತೋರಬೇಕು. 

ಪರೀಕ್ಷೆಯನ್ನು ಯುದ್ಧ ಎಂಬುದಾಗಿ ಭಾವಿಸದೆ ಹಬ್ಬದ ರೀತಿ ಸಂಭ್ರಮಿಸಬೇಕು. ಸಾಧಿಸುವ ಛಲ, ಏಕಾಗ್ರತೆಯೊಂದಿಗೆ ಚೆನ್ನಾಗಿ ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯಲ್ಲಿ ಯಶ ಸಾಧಿಸಬೇಕು ಎಂದು ತಿಳಿಸಿದರು. ದೈಹಿಕ ಮತ್ತು ಮಾನಸಿಕ ಚೈತನ್ಯ ಒಂದೇ ನಾಣ್ಯದ ಎರಡು ಮುಖ. ದೈಹಿಕ ಚೈತನ್ಯ ಇದ್ದಲ್ಲಿ ಮಾನಸಿಕ ಚೈತನ್ಯವೂ ಇರುತ್ತದೆ. 

ಹಾಗಾಗಿ ವಿದ್ಯಾರ್ಥಿಗಳು ಇತಿಮಿತಿಯಾಗಿ ಉತ್ತಮ ಗುಣಮಟ್ಟ, ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪರೀಕ್ಷೆ ಭಯದಲ್ಲಿ ಉಪವಾಸ ಇರುವುದು ಸಲ್ಲದು. ಪರೀಕ್ಷೆ ದಿನವೂ ಚೆನ್ನಾಗಿ ಊಟ ಮಾಡಬೇಕು. ಜಂಕ್‌ಫುಡ್‌ ಸಂಸ್ಕೃತಿ ಸರಿಯಲ್ಲ. ಜಂಕ್‌ ಫುಡ್‌ ಅನೇಕ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ ಎಂದು ತಿಳಿಸಿದರು. 

ಒಂದು ಸಮೀಕ್ಷೆ ಪ್ರಕಾರ ಯಾವ ಮಕ್ಕಳು ಶಾಲೆಗೆ ಉಪವಾಸ ಬರುತ್ತಾರೋ ಅಂಥಹವರು ವಿದ್ಯೆ, ಕಲಿಕೆಯಲ್ಲಿ ಹಿಂದೆ ಬೀಳುತ್ತಾರೆ ಎಂಬುದು ತಿಳಿದು ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಿಂಡಿ, ಊಟ ಮಾಡಬೇಕು. ಇದರಿಂದ ದೇಹಕ್ಕೆ ಶಕ್ತಿ, ಚೈತನ್ಯ ದೊರೆಯುತ್ತದೆ.

ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಶಾಲಾ-ಕಾಲೇಜು ಸಮಯದಲ್ಲಿ ನೈಸರ್ಗಿಕ ಕರೆಗೆ ಹೋಗಬೇಕಾಗುತ್ತದೆ ಎಂಬ ಕಾರಣಕ್ಕಾಗಿಯೇ ಬಹುತೇಕ ವಿದ್ಯಾರ್ಥಿನಿಯರು ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದೇ ಇಲ್ಲ. ಇದು ಸರಿಯಲ್ಲ. ನೀರು ಕುಡಿಯದೇ ಇದ್ದಲ್ಲಿ ಕ್ರಮೇಣವಾಗ ರೋಗ ನಿರೋಧಕ ಶಕ್ತಿ, ಚೈತನ್ಯ ಕಡಿಮೆ ಆಗುತ್ತದೆ.

ದಿನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯಬೇಕು. ಬೇಸಿಗೆಯಲ್ಲಿ ಬೀದಿ ಬದಿಯ ತಿಂಡಿ-ತಿನಿಸು ತಿನ್ನಕೂಡದು. ಹಸಿರು ಸೊಪ್ಪು, ತರಕಾರಿ, ಮೊಸರು, ಮಜ್ಜಿಗೆ ಹೆಚ್ಚಾಗಿ ಬಳಸಬೇಕು. ದೇಹ ಮತ್ತು ಮಾನಸಿಕ ಸದೃಢತೆ, ಸಮತೋಲನ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.  

ಮಹಿಳಾ ಸಮಾಜದ ಅಧ್ಯಕ್ಷೆ ಕಂಚೀಕೆರೆ ಸುಶೀಲಮ್ಮ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು. ಓದುವುದು, ಬರೆಯುವುದು ಕರ್ತವ್ಯದಂತೆ ಮಾಡುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು. ಮಹಿಳಾ ಸಮಾಜದ ಐರಣಿ ಜಯಶೀಲಮ್ಮ, ಪುಟ್ಟಮ್ಮ ಮಹಾರುದ್ರಯ್ಯ, ಆಡಳಿತಾಧಿಕಾರಿ ವಾಮದೇವಪ್ಪ ಇದ್ದರು. 

ಟಾಪ್ ನ್ಯೂಸ್

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

8 High Courts; ಸಿಜೆಗಳನ್ನು ನೇಮಿಸಿದ ಕೇಂದ್ರ ಸರ್ಕಾರ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.