ಖಾಸಗಿ ಬಡಾವಣೆಗಳ ವಿನ್ಯಾಸ ಪರಿಶೀಲಿಸಿ
Team Udayavani, Apr 18, 2017, 12:52 PM IST
ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಖಾಸಗಿ ಬಡಾವಣೆಗಳ ವಿನ್ಯಾಸ ತಿಳಿಯಲು ಸೂಕ್ತ ಪರಿಶೀಲನೆ ನಡೆಸಿ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.
ಸೋಮವಾರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆಗೆ ಸಂಬಂಧಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ನೀಡುತ್ತಿರುವ ಮಾಹಿತಿ ವ್ಯತಿರಿಕ್ತವಾಗಿದೆ. ಜೊತೆಗೆ ಅಕ್ರಮ ಬಡಾವಣೆ ನಿರ್ಮಾಣ ಕುರಿತು ದೂರು ಸಹ ಇವೆ.
ಈ ಬಗ್ಗೆ ಸಮರ್ಪಕವಾಗಿ ತಿಳಿಯಲು ಇಲಾಖೆಯಿಂದ ಸೂಕ್ತ ಪರಿಶೀಲನೆ ನಡೆಸಿ ಎಂದರು. ಇದಕ್ಕೂ ಮುನ್ನ ಪಾಲಿಕೆ ಸಿಪಿಐ ಸದಸ್ಯ ಎಚ್.ಜಿ. ಉಮೇಶ್ ಸಚಿವರಿಗೆ ದೂರು ನೀಡಿ, ನಗರದ ಅನೇಕ ಕಡೆ ನಿರ್ಮಾಣಗೊಂಡಿರುವ ಖಾಸಗಿ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯವೇ ಇಲ್ಲ.
ಪಾಲಿಕೆ, ದೂಡಾ ಅಧಿಕಾರಿಗಳು ಸ್ಥಳ ಪರಿಶೀಲಿಸದೇ ಡೋರ್ ನಂಬರ್ ನೀಡುತ್ತಾರೆ. ಬಡಾವಣೆಗಳ ವಿನ್ಯಾಸಕ್ಕೆ ಅನುಮತಿ ನೀಡುತ್ತಿದ್ದಾರೆ. ಅನೇಕ ಬಡಾವಣೆಗಳಲ್ಲಿ ಕುಡಿಯುವ ನೀರು, ಒಳಚರಂಡಿ ಸಮಸ್ಯೆ ಇದೆ. ಇದೀಗ ಪಾಲಿಕೆ ಹಣದಿಂದ ಇವುಗಳ ದುರಸ್ತಿ ಮಾಡಬೇಕಾದ ಸ್ಥಿತಿ ಇದೆ ಎಂದು ದೂರಿದ್ದರು.
ದೂರು ಕುರಿತು ಸಚಿವ ಬೇಗ್ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ಪಾಲಿಕೆ ಅಧಿಕಾರಿಗಳಿಂದ ಬಡಾವಣೆಗಳ ನಿರ್ಮಾಣ ಕುರಿತು ಮಾಹಿತಿ ಪಡೆದರು. ದೂಡಾ ಅಧಿಕಾರಿ ರೇಣುಕಾ ಪ್ರಸಾದ್, ಪಾಲಿಕೆ ವ್ಯಾಪ್ತಿಯಲ್ಲಿ 500 ಖಾಸಗಿ ಬಡಾವಣೆಗಳಿದ್ದು, ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು.
ಇನ್ನು ಪಾಲಿಕೆ ಆಯುಕ್ತ ಬಿ.ಎಚ್.ನಾರಾಯಣಪ್ಪ, 4000-5000 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಆಗಿವೆ. 4000 ಖಾಸಗಿ ಬಡಾವಣೆ ಇವೆ ಎಂದಿದ್ದರು. ಇದನ್ನು ಆಲಿಸಿದ ನಂತರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಮೊದಲು ಸಮರ್ಪಕವಾಗಿ ಪರಿಶೀಲನೆ ನಡೆಸಿ ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಮೇಯರ್ ಅನಿತಾ ಮಾಲತೇಶ್, ಉಪ ಮೇಯರ್ ಜಿ. ಮಂಜಮ್ಮ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಭೀಮಾಶಂಕರ್ ಎಸ್. ಗುಳೇದ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಅನಿರುದ್ಧ ಶ್ರವಣ್, ದೂಡಾ ಅಧ್ಯಕ್ಷ ರಾಮಚಂದ್ರಪ್ಪ ಇತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.