ಸುರಕ್ಷತೆ ವಿಚಾರದಲ್ಲಿ ರಾಜಿ ಇಲ್ಲ : ಬೊಮ್ಮಾಯಿ


Team Udayavani, Sep 3, 2021, 12:25 PM IST

CM Basavaraja Bommai in Davanagere

ಪ್ರಾತಿನಿಧಿಕ ಚಿತ್ರ

ದಾವಣಗೆರೆ : ಸುರಕ್ಷತೆ ವಿಚಾರದಲ್ಲಿ ರಾಜ್ಯ ಯಾವುದೇ ರಾಜಿ ಮಾಡಿಕೊಳ್ಳಲ್ಲ. ಉಗ್ರರು ರಾಜ್ಯದಲ್ಲಿ ಬೇರು ಬಿಡಲು ಅವಕಾಶ ನೀಡದೆ ಹೋರಾಡಿ ಸದೆಬಡಿದಿದ್ದೇವೆ. ಅಂಥ ಉಗ್ರ ಸಂಘಟನೆಗಳನ್ನು ಪತ್ತೆ ಹಚ್ಚಿಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಜಿಎಂಐಟಿ ಕಾಲೇಜು ಆವರಣದಲ್ಲಿ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉಪಸ್ಥಿತಿಯಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಅಪರಾಧ ತಡೆಯಲು ಅಮಿತ್‌ ಶಾ ಅವರು ಕಳೆದ ಬಾರಿ ಬಂದಾಗ ಸೂಚಿಸಿದ ಎರಡು ಸಲಹೆಗಳನ್ನು (ಸಂಚಾರಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಹಾಗೂ ವಿಶೇಶಾಧಿಕಾರಿಗಳ ನಿಗಾ ವಹಿಸುವಿಕೆ) ರಾಜ್ಯ ಗೃಹ ಇಲಾಖೆ ಪಾಲಿಸಿದೆ.

ಪೊಲೀಸ್‌ ಶಾಲೆಗಳಲ್ಲಿ ಮಿಲಿಟರಿ ಮಾದರಿಯಲ್ಲಿ ಗುಣಮಟ್ಟದ ಶಿಸ್ತಿನ ಶಿಕ್ಷಣನೀಡಲಾಗುತ್ತಿದೆ. ಗಾಂಧಿ ನಾಡಿನವರಾದ ಅಮಿತ್‌ ಶಾ ಅವರ ಕೈಯಿಂದಲೇ ನಗರದಲ್ಲಿ ನಿರ್ಮಾಣಗೊಂಡ ಗಾಂಧಿ ಭವನ ಉದ್ಘಾಟನೆಯಾಗಿರುವುದು ರಾಜ್ಯದ ಜನರ ಯೋಗಾಯೋಗ ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕೊಡುಗೆ ದೇಶದ ಇತಿಹಾಸದಲ್ಲಿ ಅವಿಸ್ಮರಣೀಯವಾಗಲಿದೆ. ಭಾರತ ದೇಶದ ಸಮಗ್ರತೆ, ಏಕತೆ, ಅಖಂಡತೆಗೆ ದುಡಿದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಬಳಿಕ ಅಮಿತ್‌ ಶಾ ದಿಟ್ಟ ಹಾಗೂ ಗಟ್ಟಿ ನಿರ್ಧಾರ ಕೈಗೊಂಡು ಜಮ್ಮು-ಕಾಶ್ಮೀರದಲ್ಲಿ ಜಾರಿಯಲ್ಲಿದ್ದ 370ನೇ ವಿಧಿ ರದ್ದುಪಡಿಸಿದ್ದಾರೆ. ಜಮ್ಮು-ಕಾಶ್ಮೀರವನ್ನು ದೇಶದ ಅಖಂಡತೆಗೆ, ಸಮಗ್ರತೆಗೆ ಸೇರಿಸಿ ದಿಟ್ಟತನ ಪ್ರದರ್ಶಿಸಿದ್ದಾರೆ ಎಂದರು.

ಇಂದು ಅಪಘಾನಿಸ್ತಾನದಲ್ಲಿ ಜನರ ಮಾನ-ಪ್ರಾಣ ಸಂಕಷ್ಟಕ್ಕೆ ಸಿಲುಕಿದೆ. ವಿಶೇಷವಾಗಿ ಮಹಿಳೆ, ಮಕ್ಕಳು ಆತಂಕದಲ್ಲಿದ್ದಾರೆ. ಇಂಥ ಆತಂಕದ ಸ್ಥಿತಿ ನಮ್ಮ ದೇಶದಲ್ಲಿ ಬರಬಾರದೆಂದು ಅಮಿತ್‌ ಶಾ ಅವರು ಗೃಹ ಸಚಿವರಾದ ಮೇಲೆ ಜಮ್ಮು-ಕಾಶ್ಮೀರದಲ್ಲಿದ್ದ 370ನೇ ವಿಧಿ ತೆಗೆಯುವ ನಿರ್ಣಯ ಕೈಗೊಂಡರು. ಜಮ್ಮು-ಕಾಶ್ಮೀರವನ್ನು ಭಾರತದಲ್ಲಿ ಸಂಪೂರ್ಣ ಸೇರಿಸಿ ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕಾರಣೀಕರ್ತರಾದರು. ಹೀಗಾಗಿ ಅವರ ಕಾರ್ಯ ಇತಿಹಾಸದ ಪುಟ ಸೇರಿದೆ ಎಂದು ಬಣ್ಣಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ್‌ ನಿರಾಣಿ, ಬಿ.ಸಿ.ಪಾಟೀಲ, ಆನಂದ್‌ ಸಿಂಗ್‌, ಬೈರತಿ ಬಸವರಾಜ್‌, ಸಂಸದ ಡಾ|ಜಿ. ಎಂ. ಸಿದ್ದೇಶ್ವರ, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್‌.ವಿ. ರಾಮಚಂದ್ರ, ಜಿ.ಕರುಣಾಕರ ರೆಡ್ಡಿ, ಪ್ರೊ| ಎನ್‌. ಲಿಂಗಣ್ಣ, ಕೊಂಡಜ್ಜಿ ಮೋಹನ್‌ ಇದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.