45 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ಕಡ್ಡಾಯ


Team Udayavani, Mar 31, 2021, 8:18 PM IST

ಮಜನಹಬಗವ್ಚದಷಸ

 ದಾವಣಗೆರೆ :  ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟಂತಹವರು ಏ. 1ರಿಂದ ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏ. 1 ರಿಂದ 45 ವರ್ಷ ತುಂಬಿದವರೆಲ್ಲ ಯಾವುದೇ ಪೂರ್ವಾಗ್ರಹ ಪೀಡಿತರಾಗದೆ ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಲಸಿಕೆ ಪಡೆದ ನಂತರವೂ ಸೋಂಕು ತಗುಲಬಹುದು. ಆದರೆ ಲಸಿಕೆ, ಸೋಂಕಿತರನ್ನು ಸಾವಿನ ದವಡೆಯಿಂದ ರಕ್ಷಿಸುತ್ತದೆ. ಹಾಗಾಗಿ ಎಲ್ಲ ಅರ್ಹರು ಲಸಿಕೆ ಪಡೆಯಬೇಕು ಎಂದರು. ಕೊರೊನಾ ಲಸಿಕೆ ಬಗ್ಗೆ ಯಾರೂ ನಿರ್ಲಕ್ಷé ವಹಿಸಬಾರದು. ಲಸಿಕೆ ಕುರಿತು ಸುಳ್ಳು ಸುದ್ದಿ, ವದಂತಿಗಳನ್ನು ನಂಬದೇ ಅರ್ಹರೆಲ್ಲರೂ ಉಚಿತ ಲಸಿಕೆ ಪಡೆಯಬೇಕು. ಜೊತೆಗೆ ಇತರರ ಮನವೊಲಿಸಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ರಾಘವನ್‌ ಮಾತನಾಡಿ, ಜಿಲ್ಲೆಯಲ್ಲಿಗ 3,200 ಪ್ರಕರಣಗಳಿಗೆ ಚಿಕಿತ್ಸೆ ನೀಡುವಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಸೆ.17 ರಂದು 3,185 ಪ್ರಕರಣ ದಾಖಲಾಗಿತ್ತು. ಚಿಗಟೇರಿ ಆಸ್ಪತ್ರೆಯನ್ನು ಜಿಲ್ಲಾ ಮಟ್ಟದ 400 ಬೆಡ್‌ ಗಳ ಕೋವಿಡ್‌ ಆಸ್ಪತ್ರೆಯೆಂದು ಗುರುತಿಸಲಾಗಿದೆ. ಮಾ. 29 ರವರೆಗೆ 44 ಸಕ್ರಿಯ ಪ್ರಕರಣಗಳಿದ್ದು, 32 ಜನರು ಆಸ್ಪತ್ರೆಯಲ್ಲಿ ಮತ್ತು 12 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ದಿನ 2200 ರಿಂದ 2500 ರವೆಗೆ ಸ್ವಾಬ್‌ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪಾಸಿಟಿವಿಟಿ ದರ 0.41 ಇದೆ. ಈವರೆಗೆ 264 ಮರಣ ಸಂಭವಿಸಿದ್ದು, ಡಿ. 10 ರಂದು ಕೊನೆಯ ಮರಣ ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಮಲೇರಿಯಾ ನಿಯಂತ್ರಣಾ ಧಿಕಾರಿ ಡಾ| ನಟರಾಜ್‌ ಮಾತನಾಡಿ, ಜಿಲ್ಲೆಯಲ್ಲಿ 2 ಖಾಸಗಿ ಮತ್ತು 100 ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಲಿನಿಕ್‌ಗಳಿವೆ. ಒಟ್ಟು 21 ಸ್ವಾಬ್‌ ಸಂಗ್ರಹಣಾ ಮೊಬೈಲ್‌ ಟೀಂಗಳಿವೆ. 13 ಹಾಸ್ಟೆಲ್‌ಗ‌ಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 1030 ಬೆಡ್‌ ಸಿದ್ದವಾಗಿವೆ. ಖಾಸಗಿ ಮತ್ತು ಸರ್ಕಾರಿ ಸೇರಿದಂತೆ ಒಟ್ಟು 113 ವೆಂಟಿಲೇಟರ್‌ಗಳಿವೆ. ಸಿಸಿಸಿ, ಡಿಸಿಎಚ್‌ಸಿ ಮತ್ತು ಡಿಸಿಎಚ್‌ ಸೇರಿದಂತೆ ಒಟ್ಟು 1890 ಬೆಡ್‌ಗಳಿವೆ. ಸಮಿತಿ ರಚಿಸಿ ನಿರ್ವಹಣಾ ಕೆಲಸ ಮಾಡಲಾಗುವುದು ಎಂದರು.

ಕಳೆದ ಡಿ. 10 ರಂದು ಕೋವಿಡ್‌ನ‌ ಕೊನೆಯ ಸಾವಾಗಿದ್ದು, ನಂತರ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ವೈದ್ಯರ ಶ್ರಮಕ್ಕೆ ಅಭಿನಂದಿಸುತ್ತೇನೆ. ತಾಲೂಕು ಮಟ್ಟದ ಸಮಿತಿಗಳು ಪ್ರತಿ ದಿನ ಕೋವಿಡ್‌ ಪ್ರಗತಿ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಐಎಲ್‌ಐ ಮತ್ತು ಎಸ್‌ ಎಆರ್‌ಐ ಪ್ರಕರಣಗಳ ಸ್ವಾಬ್‌ ಪರೀಕ್ಷೆ ಕಡ್ಡಾಯವಾಗಿ ಆಗಬೇಕು. ಹಳೇ ದಾವಣಗೆರೆ ಭಾಗದಲ್ಲಿ ಹಾಗೂ ಜನನಿಬಿಡ ಪ್ರದೇಶಗಳನ್ನು ಟಾರ್ಗೆಟೆಡ್‌ ಗ್ರೂಪ್‌ ಎಂದು ಗುರುತಿಸಿ ಪರೀಕ್ಷೆ ಸಂಖ್ಯೆಹೆಚ್ಚಿಸಬೇಕು.

ಹಾಸ್ಟೆಲ್‌ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಆರ್‌ಸಿಎಚ್‌ ಅಧಿ ಕಾರಿ ಡಾ| ಮೀನಾಕ್ಷಿ ಮಾತನಾಡಿ, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರ ಲಸಿಕಾಕರಣ ಶೇ. 60 ಆಗಿದೆ. 60 ವರ್ಷ ಮೇಲ್ಪಟ್ಟ 1,58,619 ಜನರಲ್ಲಿ 42,304 ಶೇ. 27 ಲಸಿಕಾಕರಣವಾಗಿದೆ. ದಾವಣಗೆರೆಯಲ್ಲಿ ಅತಿ ಕಡಿಮೆ ಮತ್ತು ಜಗಳೂರು ತಾಲೂಕಲ್ಲಿ ಅತಿ ಹೆಚ್ಚು ಲಸಿಕೆ ಆಗಿದೆ. ಏ. 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆಯನ್ನು ಆನ್‌ಸ್ಪಾಟ್‌ ನೋಂದಣಿಯೊಂದಿಗೆ ಸಬ್‌ ಸೆಂಟರ್‌ಗಳಲ್ಲೂ ವಾರದಲ್ಲಿ ನಾಲ್ಕು ದಿನ ಲಸಿಕೆ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.