ಆಕ್ಸಿಜನ್‌ ಸಾಗಾಟಕ್ಕೆ ಹೆಚ್ಚುವರಿ ವಾಹನ ವ್ಯವಸ್ಥೆ


Team Udayavani, May 4, 2021, 8:22 PM IST

4-7

ದಾವಣಗೆರೆ: ಜಿಲ್ಲಾಸ್ಪತ್ರೆಯ ಮೆಡಿಕಲ್‌ ಆಕ್ಸಿಜನ್‌ ಪ್ಲಾಂಟ್‌ಗೆ ಆಕ್ಸಿಜನ್‌ ಪಡೆಯಲು ಹೆಚ್ಚುವರಿ ವಾಹನ ವ್ಯವಸ್ಥೆ ಮಾಡಬೇಕು ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಕೋವಿಡ್‌ ಸೋಂಕಿತರಿಗೆ ಸುಗಮ ಆಕ್ಸಿಜನ್‌ ಪೂರೈಕೆ, ಬೆಡ್‌ ವ್ಯವಸ್ಥೆ ಮತ್ತು ಔಷಧೋಪಚಾರದ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ವೈದ್ಯರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಯಲ್ಲಿರುವ 15 ಹೆಚ್ಚುವರಿ ವೆಂಟಿಲೇಟರ್‌ಗಳ ನಿರ್ವಹಣೆಗೆ ನುರಿತ ಸಿಬ್ಬಂದಿಯನ್ನು ನಿಯೋಜಿಸಬೇಕು. ಕೋವಿಡ್‌ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಮತ್ತು ವೈದ್ಯರಿಗೆ ಸೂಚನೆ ನೀಡಿದರು. ಕೋವಿಡ್‌ ಪತ್ತೆ ಹಚ್ಚಲು ಸಿಟಿ ಸ್ಕಾನ್‌ ಮಾಡಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಕೇಂದ್ರದವರು ಹೆಚ್ಚಿನ ದರ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ. ಇಂಥ ತುರ್ತು ಪರಿಸ್ಥಿತಿಯಲ್ಲಿ ವೈದ್ಯರು ಹೆಚ್ಚು ದರ ಪಡೆಯಬಾರದು. ನಿಗದಿತ ದರವನ್ನು ಬೋರ್ಡಿನಲ್ಲಿ ಹಾಕಬೇಕು. ಒಂದು ಪಕ್ಷ ಆ ದರಕ್ಕಿಂತ ಹೆಚ್ಚಿಗೆ ಪಡೆದರೆ ರೋಗಿಗಳ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ರೆಮಿಡಿಸಿವರ್‌ ಅಗತ್ಯವಿಲ್ಲದಿದ್ದರೂ ಈ ಲಸಿಕೆ ನೀಡುವುದನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಆಕ್ಸಿಜನ್‌ ಬೆಡ್‌ಗಳ ಸಂಖ್ಯೆ ಹೆಚ್ಚಿಸುತ್ತಾ ಹೋದರೆ ಆಕ್ಸಿಜನ್‌ ಪ್ರಷರ್‌ ಕಡಿಮೆ ಆಗಲಿದೆ. ಘಟಕದ ಸಾಮರ್ಥ್ಯಕ್ಕನುಗುಣವಾಗಿ ಬೆಡ್‌ ವ್ಯವಸ್ಥೆ ಮಾಡಲಾಗಿದೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ರೆಮ್‌ ಡಿಸಿವರ್‌ ದಾಸ್ತಾನು ಇದೆ ಎಂದರು. ಇದೇ ವೇಳೆ ಜಿಲ್ಲಾಸ್ಪತ್ರೆಯ ಡಾ| ಗಿರೀಶ್‌, ಕೋವಿಡ್‌ ವಾರ್ಡ್‌ ನಿರ್ವಹಿಸುವ ವೈದ್ಯರ ತಂಡಗಳ ಸಂಖ್ಯೆಯನ್ನು 5ರಿಂದ 6ಕ್ಕೆ ಹೆಚ್ಚಿಸಬೇಕಿದೆ. ಇದಕ್ಕೆ ಅವಶ್ಯಕ ವೈದ್ಯರನ್ನು ಮೆಡಿಕಲ್‌ ಕಾಲೇಜು ಮತ್ತು ಇನ್‌ಟರ್ನ್ಸ್ಗಳನ್ನು ಪಡೆಯಬಹುದು ಎಂದು ಸಲಹೆ ನೀಡಿದರು. ಶುಶ್ರೂಷಕರು ಮತ್ತು ಡಿ ಗ್ರೂಪ್‌ಗ್ಳ ಅಗತ್ಯ ಇದ್ದು ಇವರನ್ನು ನೇಮಿಸುವಂತೆ ಶುಶ್ರೂಷಾಧಿಕಾರಿ ಮನವಿ ಮಾಡಿದರು.

ಸಭೆಯಲ್ಲಿ ಪಾಲಿಕೆ ಮಹಾಪೌರ ಎಸ್‌.ಟಿ. ವೀರೇಶ್‌ , ಕೋವಿಡ್‌ ನೋಡಲ್‌ ಅಧಿಕಾರಿ ಪ್ರಮೋದ್‌ ನಾಯಕ್‌, ಡಿಎಚ್‌ಒ ಡಾ| ನಾಗರಾಜ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಯಪ್ರಕಾಶ್‌, ಡಿಎಸ್‌ಒ ಡಾ| ರಾಘವನ್‌, ಡಾ| ಶಶಿಧರ, ಡಾ| ರವಿ ಮತ್ತಿತರ ತಜ್ಞ ವೈದ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.