‌ಕರ್ಫ್ಯೂ ಮಧ್ಯೆಯೂ ಜಲ ಸಂರಕ್ಷಣೆ ಕೈಂಕರ್ಯ


Team Udayavani, May 19, 2021, 8:27 PM IST

19-10-

„ಎಚ್‌.ಕೆ. ನಟರಾಜ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ನಗರ, ಮಹಾನಗರಗಳನ್ನು ತೊರೆದು ಗ್ರಾಮೀಣ ಪ್ರದೇಶಗಳಿಗೆ ಮರಳಿರುವ ಜನರು, ನರೇಗಾ ಯೋಜನೆಯಡಿ ಉದ್ಯೋಗ ಪಡೆದುಕೊಂಡು ಜಲ ಸಂರಕ್ಷಣೆ ಕೈಂಕರ್ಯದಲ್ಲಿ ಭಾಗಿಯಾಗಿದ್ದಾರೆ.

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಜಲಶಕ್ತಿ ಅಭಿಯಾನ ಕೈಗೊಂಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್‌ ಇಲಾಖೆ, ಹಳ್ಳಿಗಳಲ್ಲಿ ಕೂಲಿ ಕೆಲಸಕ್ಕೆ ಬಂದವರಿಗೆ ಹೊಸದಾಗಿ ಉದ್ಯೋಗ ಚೀಟಿ ನೀಡಿ, ಜಲಶಕ್ತಿ ಅಭಿಯಾನ ಯೋಜನೆಯಡಿ ಜಲ ಸಂರಕ್ಷಣೆಯ ವಿವಿಧ ಕಾಮಗಾರಿಗಳಲ್ಲಿ ತೊಡಗಿಸಿದೆ. ಕರ್ಫ್ಯೂ ಕಾರಣದಿಂದಾಗಿ ಮಹಾನಗರಗಳಿಂದ ವಲಸೆ ಬಂದವರಿಗೆ ಹಾಗೂ ಸ್ಥಳೀಯವಾಗಿ ಬೇರೆ ಬೇರೆ ಕೆಲಸ ಮಾಡುತ್ತಿದ್ದವರಿಗೆ ಉದ್ಯೋಗ ಖಾತ್ರಿ ಯೋಜನೆ ದುಡಿಯುವ ಕೈಗಳಿಗೆ ಕೆಲಸ ನೀಡಿ ಆಸರೆಯಾಗಿದೆ. ಏಪ್ರಿಲ್‌ ಹಾಗೂ ಮೇ ಎರಡು ತಿಂಗಳಲ್ಲಿ ಸಾವಿರಾರು ಜನರು ಹೊಸದಾಗಿ ಉದ್ಯೋಗ ಚೀಟಿ ಪಡೆದು ನರೇಗಾ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.

ಏನೇನು ಕಾಮಗಾರಿ?: ಜಲಶಕ್ತಿ ಅಭಿಯಾನದಡಿ ಹಳ್ಳಿಗಳಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ನಾಲಾ ದುರಸ್ತಿ, ಕಲ್ಯಾಣಿ ದುರಸ್ತಿ, ಗೋಕಟ್ಟೆ ನಿರ್ಮಾಣ, ಮಳೆಕೊಯ್ಲು, ಚೆಕ್‌ಡ್ಯಾಮ್‌ ನಿರ್ಮಾಣ, ಇಂಗುಗುಂಡಿ ನಿರ್ಮಾಣ, ಜಲಮರುಪೂರಣ, ಅರಣೀಕರಣ, ಕೃಷಿ ಹೊಂಡ, ಜಮೀನುಗಳಲ್ಲಿ ಬದುಹೊಂಡ ನಿರ್ಮಾಣ, ನಾಲಾ ಪುನಶ್ಚೇತನ, ತೆರೆದಬಾವಿ ಪುನಶ್ಚೇತನದಂಥ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಕಾರ್ಮಿಕರು ಈ ಕಾಮಗಾರಿಗಳನ್ನು ಮಾಡುವ ಮೂಲಕ ಪರೋಕ್ಷವಾಗಿ ಜಲಸಂರಕ್ಷಣೆಯ ಕಾಯಕಕ್ಕೆ ಕೈಜೋಡಿಸಿದಂತಾಗಿದೆ. ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ಗಳು ಚುರುಕಾಗಿ ನಡೆಯುತ್ತಿದ್ದು ಜನರಿಗೆ ಉದ್ಯೋಗ ನೀಡುವ ಜತೆಗೆ ಜಲಮೂಲಗಳ ರಕ್ಷಣೆಯ ಕೆಲಸವೂ ಆಗುತ್ತಿದೆ. ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕರಿಗೆ ನೀರು, ನೆರಳು, ಪ್ರಥಮ ಚಿಕಿತ್ಸೆಗಾಗಿ ವೈದ್ಯಕೀಯ ಕಿಟ್‌ ವ್ಯವಸ್ಥೆ ಮಾಡಿದ್ದು ಕೂಲಿ ಕಾರ್ಮಿಕರ ಆರೋಗ್ಯದ ಮೇಲೆಯೂ ನಿಗಾ ವಹಿಸಲಾಗಿದೆ. ಹೀಗಾಗಿ ದಿನದಿಂದ ದಿನಕ್ಕೆ ನರೇಗಾ ಉದ್ಯೋಗ ಅರಸಿ ಬರುವವರ ಸಂಖ್ಯೆ ಅಧಿಕವಾಗುತ್ತಿದ್ದು ಹೊಸದಾಗಿ ಬರುವವರಿಗೆಲ್ಲ ಉದ್ಯೋಗ ಚೀಟಿ ನೀಡಿ ಉದ್ಯೋಗ ನೀಡಲಾಗುತ್ತಿದೆ.

ಕಾಮಗಾರಿ ವಿವರ: ಜಿಲ್ಲೆಯಲ್ಲಿ ಸಮಗ್ರ ಕೆರೆ ಅಭಿವೃದ್ಧಿಗಾಗಿ 41 ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು, ಇವುಗಳಲ್ಲಿ 17 ಕಾಮಗಾರಿಗಳು ಪ್ರಗತಿಯಲ್ಲಿವೆ. ನಾಲಾ ದುರಸ್ತಿಗೆ ಸಂಬಂಧಿಸಿ 125 ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು ಇವುಗಳಲ್ಲಿ 37 ಕಾಮಗಾರಿಗಳು ಪ್ರಗತಿಯಲ್ಲಿವೆ. ಕಲ್ಯಾಣಿ ದುರಸ್ತಿಗಾಗಿ ಆರು ಕಾಮಗಾರಿಗಳ ಕ್ರಿಯಾಯೋಜನೆ ತಯಾರಿಸಿದ್ದು ಎರಡು ಕಾಮಗಾರಿ ನಡೆಯುತ್ತಿವೆ. ಇನ್ನು ಗೋಕಟ್ಟೆ ನಿರ್ಮಾಣಕ್ಕಾಗಿ 19 ಕಾಮಗಾರಿಗಳಿಗಾಗಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಇವುಗಳಲ್ಲಿ ಆರು ಕಾಮಗಾರಿಗಳ ಕೆಲಸ ಮುಂದುವರಿದಿದೆ.

ಮಳೆ ಕೊಯ್ಲಿಗಾಗಿ 20 ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು ಮೂರು ಕಾಮಗಾರಿಗಳು ಪ್ರಗತಿಯಲ್ಲಿವೆ. ಚೆಕ್‌ಡ್ಯಾಮ್‌ ನಿರ್ಮಾಣಕ್ಕೆ ಸಂಬಂಧಿಸಿ ಒಂದು ಕ್ರಿಯಾಯೋಜನೆ ತಯಾರಿಸಲಾಗಿದ್ದು ಇನ್ನಷ್ಟೇ ಆರಂಭವಾಗಬೇಕಿದೆ. ಇಂಗುಗುಂಡಿಗೆ ಸಂಬಂಧಿಸಿ 64 ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು 239 ಕಾಮಗಾರಿಗಳು ಪ್ರಗತಿಯಲ್ಲಿವೆ. ಜಲಪುನಶ್ಚೇತನಕ್ಕೆ ಸಂಬಂಧಿಸಿ ಆರು ಕಾಮಗಾರಿಗಳಿಗೆ, ಅರಣ್ಯೀಕರಣಕ್ಕಾಗಿ ಒಂದು ಕಾಮಗಾರಿಯ ಕ್ರಿಯಾಯೋಜನೆ ತಯಾರಾಗಿದ್ದು ಕಾಮಗಾರಿ ಆರಂಭಿಸಲು ಸಿದ್ಧತೆ ನಡೆದಿದೆ. ಕೃಷಿ ಹೊಂಡ ನಿರ್ಮಾಣಕ್ಕೆ ಸಂಬಂಧಿಸಿ 121ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದ್ದು, 34 ಕಾಮಗಾರಿಗಳ ಕೆಲಸ ನಡೆಯುತ್ತಿದೆ. ಜಮೀನುಗಳಲ್ಲಿ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ 182 ಕಾಮಗಾರಿಗಳನ್ನು ಮಾಡಲು ಯೋಜನೆ ರೂಪಿಸಿದ್ದು 117 ಕಾಮಗಾರಿಗಳಲ್ಲಿ ಕೆಲಸ ಭರದಿಂದ ಸಾಗಿದೆ.

ಒಟ್ಟಾರೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಉದ್ಯೋಗ ಕೊಡುವ ಮೂಲಕ ಜಲರಕ್ಷಣೆಯ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆದಿದ್ದು ಸಾವಿರಾರು ಜನರು ಇದರಲ್ಲಿ ತೊಡಗಿಕೊಂಡಿರುವುದು ಉತ್ತಮ ಬೆಳವಣಿಗೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.