ಬಡವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹ
Team Udayavani, May 31, 2021, 9:40 PM IST
ಹರಿಹರ: ತಾಲೂಕಿನ ಎಲ್ಲಾ ವರ್ಗದ ಬಡ ನಿರ್ವಸತಿಕರಿಗೆ ವಸತಿ ವ್ಯವಸ್ಥೆ ದೊರಕಿಸಿಕೊಡಲು ಆಗ್ರಹಿಸಿ ಡಿಎಸ್ಎಸ್ ನಿಂದ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಭಾನುವಾರ ವಸತಿ ಸಚಿವ ವಿ.ಸೋಮಣ್ಣರಿಗೆ ಮನವಿ ನೀಡಲಾಯಿತು.
ದಸಂಸ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ, ಹಾಲಿ ಕೇಂದ್ರ ಮತ್ತು ರಾಜ್ಯ ಸರಕಾರದ ನಾನಾ ವಸತಿ ಯೋಜನೆಗಳ ಲಾಭ ಎಲ್ಲಾ ವರ್ಗದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ರಾಜಕಾರಣಿಗಳ ಬಾಲ ಬಡಿಯುವವರಿಗೆ ಮಾತ್ರ ದೊರಕುತ್ತಿದೆ. ಈ ಯೋಜನೆಗಳು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ.
ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಹೆಬ್ಬಯಕೆ ಹಾಗೂ ಹಕ್ಕಾಗಿದೆ. ಆರ್ಥಿಕ ಚೈತನ್ಯ ಇಲ್ಲದವರಿಗೆ ಸ್ವಂತ ಮನೆ ಹೊಂದುವುದು ಕನ್ನಡಿಯ ಗಂಟಾಗಿದೆ. ಚುನಾವಣೆಯಲ್ಲಿ ಎಲ್ಲಾ ಪಕ್ಷಗಳ ರಾಜಕಾರಣಿಗಳು ವಸತಿ ಯೋಜನೆ ಬಗ್ಗೆ ಪುಂಖಾನು, ಪುಂಖವಾಗಿ ಭಾಷಣ ಬಿಗಿಯುತ್ತಾರೆ. ಸಭೆಗಳಲ್ಲಿ ಅ ಧಿಕಾರಿಗಳು ಅಂಕಿ, ಅಂಶಗಳ ಸರಮಾಲೆಯನ್ನು ಪೋಣಿಸುತ್ತಾರೆ. ಆದರೆ ವಸತಿ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಪ್ರತಿ ಗ್ರಾಮದಲ್ಲೂ ಸರಕಾರದ ಜಮೀನು ಲಭ್ಯವಿದೆ. ಅಲ್ಲಿ ವಸತಿ ಯೋಜನೆಗಳನ್ನು ಜಾರಿ ಮಾಡಬಹುದು.
ಆದರೆ ಈ ಕಾರ್ಯಕ್ಕೆ ಆಡಳಿತ, ವಿಪಕ್ಷದ ರಾಜಕಾರಣಿಗಳಾಗಲಿ, ಅಧಿಕಾರಿಗಳಾಗಲಿ ಮನಸ್ಸು ಮಾಡದಿರುವುದು ವಿಪರ್ಯಾಸವಾಗಿದೆ. ಮನೆಯಿಲ್ಲದವರು ಬಾಡಿಗೆ ಮನೆಗಳಲ್ಲಿ, ಸರಕಾರದ ಜಾಗಗಳ ಅಂಚುಗಳಲ್ಲಿ, ರಸ್ತೆ ಬದಿಯಲ್ಲಿ ಗುಡಿಸಲು ರೂಪದ ಮನೆಗಳಲ್ಲಿ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಬಯಲು ಶೌಚಾಲಯವೇ ಇವರಿಗೆ ಗತಿಯಾಗಿದೆ. ಇತರೆ ಮೂಲ ಸೌಕರ್ಯ ಕನಸಿನ ಮಾತಾಗಿದೆ.
ಪ್ರತಿ ಗ್ರಾಮದಲ್ಲಿ ಹಾಗೂ ನಗರದ ವಾರ್ಡ್ಗಳಲ್ಲಿರುವ ಬಡ ನಿರ್ವಸತಿಕರಿಗೆ ಸಭೆ ನಡೆಸಿ ಮನೆಗಳ ಅಗತ್ಯದ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಒಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಬಡ ನಿರ್ವಸತಿಕರಿಗೆ ನಿವೇಶನ, ಮನೆ ದೊರಕಿಸಲು ತಾವು ಆದ್ಯತೆ ನೀಡಬೇಕಾಗಿ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕ ಬಿ.ಪಿ.ಹರೀಶ್, ಉಮಾ ಮಹೇಶ್ವರ, ಸುಭಾಷ್ ಎಚ್.ಜಿ., ಜಿಗಳಿ ಪ್ರದೀಪ್ ಕುಮಾರ್, ವೇಟ್ ಲಿಫ್ಟರ್ ಮೊಹಮ್ಮದ್ ರμàಕ್ ಎಂ.ಡಿ., ರವಿಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.