ಕೋವಿಡ್‌ನಿಂದ ಕ್ಷಯರೋಗಿಗಳು ಬಚಾವ್‌


Team Udayavani, Jun 2, 2021, 10:09 PM IST

2-19

„ಎಚ್‌.ಕೆ. ನಟರಾಜ

ದಾವಣಗೆರೆ: ಶ್ವಾಸಕೋಶದ ಮೇಲೆ ದಾಳಿ ಇಡಬಹುದಾದ ಕ್ಷಯರೋಗ ಹಾಗೂ ಕೋವಿಡ್‌-19 ಎರಡನೇ ಅಲೆ ಹೊಡೆತಕ್ಕೆ ಸಿಲುಕಿದ ಜಿಲ್ಲೆಯ ಆರು ಜನರು ಎರಡೂ ಮಹಾಮಾರಿಗಳ ವಿರುದ್ಧ ಹೋರಾಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊರೊನಾ ಎರಡನೇ ಅಲೆಯ ಸೋಂಕು ಜಿಲ್ಲೆಯ ಒಟ್ಟು ಎಂಟು ಜನ ಕ್ಷಯರೋಗಿಗಳಿಗೆ ಹಬ್ಬಿತ್ತು. ಇವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಉಳಿದಂತೆ ಇದೇ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾಗದಿದ್ದರೂ 46 ಜನರು ಕ್ಷಯರೋಗಿಗಳು ಕ್ಷಯದ ತೀವ್ರತೆ ಹೆಚ್ಚಾಗಿ ಮೃತಪಟ್ಟಿದ್ದಾರೆ. ಕ್ಷಯರೋಗದ ಪ್ರಾಥಮಿಕ ಲಕ್ಷಣಗಳು ಲಕ್ಷಣಗಳನ್ನೇ ಹೋಲುವ ಲಕ್ಷಣಗಳೊಂದಿಗೆ ಬಂದೆರಗಿದ ಕೋವಿಡ್‌-19 ಎರಡನೇ ಅಲೆಯ ಸೋಂಕು ಕ್ಷಯರೋಗಿಗಳಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಮೊದಲ ಅಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದ ಕ್ಷಯರೋಗಿಗಳು, ಎರಡನೇ ಅಲೆಯ ಈ ಸಂದರ್ಭದಲ್ಲಿಯೂ ಹೆಚ್ಚಿನ ಸುರಕ್ಷತೆಗೆ ಮುಂದಾಗಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ .

ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಒಟ್ಟು 696 ಕ್ಷಯರೋಗಿಗಳು ಪತ್ತೆಯಾಗಿದ್ದಾರೆ. 640 ಕ್ಷಯರೋಗಿಗಳು ಈವರೆಗೆ ಕೋವಿಡ್‌-19 ವೈರಸ್‌ ತಮ್ಮತ್ತ ಸುಳಿಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸಿ ತಮ್ಮ “ಶ್ವಾಸ’ ಕಾಪಾಡಿಕೊಂಡಿದ್ದಾರೆ.

ಕೊರೊನಾ ಗೆದ್ದ ಕ್ಷಯರೋಗಿಗಳು: ಜಿಲ್ಲೆಯ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಮೂವರು, ಹರಿಹರ ಹಾಗೂ ಹೊನ್ನಾಳಿ ತಾಲೂಕಿನ ತಲಾ ಇಬ್ಬರು ಸೇರಿದಂತೆ ಒಟ್ಟು ಎಂಟು ಕ್ಷಯರೋಗಿಗಳು ಈವರೆಗೆ ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿದ್ದಾರೆ.

ಇವರಲ್ಲಿ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಇಬ್ಬರು, ಹರಿಹರ ತಾಲೂಕಿನ ಒಬ್ಬರು ಹಾಗೂ ಹೊನ್ನಾಳಿ ತಾಲೂಕಿನ ಇಬ್ಬರು ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಜೀವ ಕಾಪಾಡಿಕೊಂಡಿದ್ದಾರೆ. ದಾವಣಗೆರೆ ಗ್ರಾಮಾಂತರ ಹಾಗೂ ಹರಿಹರದ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಕ್ಷಯ ರೋಗಿಗಳು ಕೊರೊನಾ ಮಹಾಮಾರಿ ಎದುರಿಸಲಾಗದೆ ಮೃತಪಟ್ಟಿದ್ದಾರೆ.

ಚನ್ನಗಿರಿ ತಾಲೂಕಿನ 101, ದಾವಣಗೆರೆ ಗ್ರಾಮೀಣ ಭಾಗದ 81, ದಾವಣಗೆರೆ ನಗರ ಭಾಗದ 249, ಹರಿಹರ ತಾಲೂಕಿನ 62, ಹೊನ್ನಾಳಿ ತಾಲೂಕಿನ 80, ಜಗಳೂರು ತಾಲೂಕಿನ 67 ಕ್ಷಯರೋಗಿಗಳು ಕೊರೊನಾ ತಮ್ಮತ್ತ ಸುಳಿಯದಂತೆ ಅಗತ್ಯ ಸುರಕ್ಷತಾ ಕ್ರಮ ಪಾಲನೆಯೊಂದಿಗೆ ಕೊರೊನಾ ಸೋಂಕಿನಿಂದ ದೂರ ಇದ್ದಾರೆ. ಕೊರೊನಾ ಎರಡನೇ ಅಲೆಯ ಆರ್ಭಟ ಇಳಿಯುವವರೆಗೂ ಈ ಕ್ಷಯರೋಗಿಗಳು ಸುರಕ್ಷತೆ, ಜಾಗರೂಕತೆಯನ್ನು ಮರೆಯದೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿರುವ ಬಹುತೇಕ ಕ್ಷಯರೋಗಿಗಳು ಕೋವಿಡ್‌ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೊನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿರುವುದು ಸಮಾಧಾನಕರ ಸಂಗತಿ.

ಟಾಪ್ ನ್ಯೂಸ್

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.