ಏತ ನೀರಾವರಿ ಯೋಜನೆಯಲ್ಲಿ ಎಚ್.ಡಿ. ಪೈಪ್ ಬಳಸಿ
Team Udayavani, Jun 8, 2021, 10:16 PM IST
ದಾವಣಗೆರೆ: ಜಗಳೂರು ತಾಲೂಕಿನ 57 ಕೆರೆಗಳಿಗೆ ನೀರೊದಗಿಸುವ ದೀಟೂರು ಏತ ನೀರಾವರಿ ಯೋಜನೆ ಕಾಮಗಾರಿಯಲ್ಲಿ ತಾಂತ್ರಿಕ ತಜ್ಞರ ಸಲಹೆಯಂತೆ ಎಚ್.ಡಿ. ಪೈಪ್ ಅಳವಡಿಸಬೇಕು ಎಂದು ಭದ್ರಾ ಮೇಲ್ದಂಡೆ ಯೋಜನೆ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್ ಒತ್ತಾಯಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಎಚ್.ಡಿ. ಪೈಪ್ ಬಳಸುವುದರಿಂದ 100 ರಿಂದ 150 ವರ್ಷಗಳ ಪೈಪ್ಗ್ಳು ಬಾಳಿಕೆ ಬರುತ್ತವೆ. ನೀರು ಲೀಕೇಜ್, ಸೋರಿಕೆ ಪ್ರಮಾಣ ಕಡಿಮೆ. ಹಾಗಾಗಿ ಈಗ ಅಳವಡಿಸಲಾಗುತ್ತಿರುವ ಎಂ.ಎಸ್. ಪೈಪ್ ಬದಲಿಗೆ ಎಚ್.ಡಿ. ಪೈಪ್ ಅಳವಡಿಸಬೇಕು ಎಂದರು.
ಒಟ್ಟಾರೆ 660 ಕೋಟಿ ರೂ. ವೆಚ್ಚದ ಜಗಳೂರು ತಾಲೂಕಿನ 57 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರೊದಗಿಸುವ ದೀಟೂರು ಏತ ನೀರಾವರಿ ಯೋಜನೆಯ ಪ್ರಾರಂಭಿಕ ಹಂತದಲ್ಲಿ ಕಾಮಗಾರಿ ಸ್ಥಳದಲ್ಲೇ ಪೈಪ್ ಸಿದ್ಧಪಡಿಸಿ ಅಳವಡಿಸಲಾಗುತ್ತಿತ್ತು. ಎಂ.ಎಸ್. ಪೈಪ್ ಅಳವಡಿಕೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಕಾರ್ಖಾನೆಗಳಲ್ಲಿ ತಯಾರಿಸಿದ ಪೈಪ್ ಅಳವಡಿಸಲಾಗುತ್ತಿತ್ತು. ಈಗ ಮತ್ತೆ ಎಂ.ಎಸ್. ಪೈಪ್ಗ್ಳನ್ನೇ ಅಳವಡಿಸಲಾಗುತ್ತಿದೆ. ಗುತ್ತಿಗೆದಾರರಿಗೆ ಅನುಕೂಲ ಆಗುವಂತೆ ಎಂ.ಎಸ್. ಪೈಪ್ ಅಳವಡಿಕೆ ಕುರಿತಂತೆ ಆದೇಶ ಹೊರಡಿಸಲಾಗಿದೆ ಎಂದು ದೂರಿದರು.
ಎಂ.ಎಸ್. ಪೈಪ್ಗ್ಳು 25 ರಿಂದ 40 ವರ್ಷ ಮಾತ್ರ ಬಾಳಿಕೆ ಬರುತ್ತವೆ. ಯುಟಿ ಪರೀಕ್ಷೆಯಲ್ಲೂ ಎಂ.ಎಸ್. ಪೈಪ್ ಬಹಳ ದಿನ ಬಾಳಿಕೆ ಬರುವುದಿಲ್ಲ ಎಂಬುದು ಗೊತ್ತಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದ ಯೋಜನೆಯ ಮೂಲ ಉದ್ದೇಶವೇ ಈಡೇರುವುದಿಲ್ಲ. ಈಗ ಏನಾದರೂ ಸುಮ್ಮನಾದಲ್ಲಿ ನಮ್ಮ ಮುಂದಿನ ಪೀಳಿಗೆ ತುಂಬಾ ತೊಂದರೆ ಅನುಭವಿಸಬೇಕಾಗುತ್ತದೆ. ಹಾಗಾಗಿಯೇ ಎಂ.ಎಸ್. ಪೈಪ್ಗ್ಳ ಬದಲಿಗೆ ಎಚ್.ಡಿ. ಪೈಪ್ ಅಳವಡಿಸಬೇಕು ಮತ್ತು ಲೋಪ ದೋಷ ಸರಿಪಡಿಸಬೇಕು ಎಂಬುದು ನಮ್ಮ ಒತ್ತಾಯ ಎಂದು ತಿಳಿಸಿದರು.
ಎಂ.ಎಸ್. ಪೈಪ್ ಅಳವಡಿಸುತ್ತಿರುವ ಬಗ್ಗೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ವಿ. ರಾಮಚಂದ್ರ ಅವರ ಗಮನಕ್ಕೆ ತರಲಾಗಿದೆ. ಎಂ.ಎಸ್. ಪೈಪ್ಗ್ಳ ಸಾಮರ್ಥ್ಯದ ಬಗ್ಗೆ ಪರೀಕ್ಷೆ ನಡೆಸಿಕೊಡುವಂತೆ ಯುಬಿಡಿಟಿ, ಬಿಐಇಟಿ ಇಂಜಿನಿಯರಿಂಗ್ ಕಾಲೇಜಿನವರಿಗೆ ಕೋರಲಾಗಿದೆ. ಚಟ್ನಹಳ್ಳಿ ಗುಡ್ಡದವರೆಗೆ ಪೈಪ್ಲೈನ್ ಬರಲಿದೆ. ಅಲ್ಲಿಂದ ಗುರುತ್ವಾಕರ್ಷಣ ಬಲದಿಂದ ಮುಂದಕ್ಕೆ ನೀರು ಹರಿಯಲಿದೆ. 22 ಕೆರೆಗಳ ಏತ ನೀರಾವರಿ ಯೋಜನೆಯಂತೆ ಈ ಯೋಜನೆಯೂ ಹಾಳಾಗಬಾರದು.
ಆ ಕಾರಣಕ್ಕಾಗಿಯೇ ಎಚ್.ಡಿ. ಪೈಪ್ ಅಳವಡಿಸಬೇಕು. ತಾಲೂಕಿನ ಯುವ ಸಮೂಹ ಯೋಜನೆ ಕಾಮಗಾರಿಯತ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ದೇವಿಕೆಗೆ ಗ್ರಾಮ ಪಂಚಾಯಿತಿ ಸದಸ್ಯ ಯು. ಗುರುಸ್ವಾಮಿ, ಚಟ್ನಿಹಳ್ಳಿ ಜಂಬುಗೌಡ್ರು, ಪ್ರಭು ಅಣಜಿಗೆರೆ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.