ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲ


Team Udayavani, Jul 8, 2021, 10:18 PM IST

8-16

ದಾವಣಗೆರೆ: ಕೊರೊನಾದಿಂದ ಮೃತಪಟ್ಟವರ ಬಗ್ಗೆ ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಆರೋಪಿಸಿದರು. ಪೆಟ್ರೋಲ್‌-ಡೀಸೆಲ್‌,ಅಡುಗೆ ಅನಿಲ ದರ ಹೆಚ್ಚಳ ಖಂಡಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಸೈಕಲ್‌ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು. ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಮಾಹಿತಿ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಮಾಹಿತಿ ಪಡೆದಾಗ ಸತ್ತಿದ್ದು 36 ಜನ ಎಂಬುದು ಗೊತ್ತಾಯಿತು. ಸರ್ಕಾರ ಈ ರೀತಿ ಸಾವಿನ ಬಗ್ಗೆಯೂ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಅತಿ ಮುಖ್ಯವಾಗಿ ಬಳಸುವ ಟ್ರಾÂಕ್ಟರ್‌, ಪವರ್‌ ಟಿಲ್ಲರ್‌ಗಳಿಗೆ ಬೇಕಾದ ಡೀಸೆಲ್‌ ಬೆಲೆ ನೂರು ರೂಪಾಯಿ ದಾಟುತ್ತಿದೆ. ದಿನೇ ದಿನೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಲಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ಎಲ್ಲ ಅಂಶಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಪಕ್ಷ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕಷ್ಟದಲ್ಲಿ ಇರುವಂತಹವರಿಗೆ ಅಗತ್ಯ ನೆರವು ನೀಡುವುದು ಕಾಂಗ್ರೆಸ್‌ನ ಸಿದ್ಧಾಂತ ಮತ್ತು ಬದ್ಧತೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರ ಅಭಿಲಾಷೆಯಂತೆ ನಾವು ಕೊರೊನಾದಿಂದ ಮೃತಪಟ್ಟವರ ಮನೆಗೆ ಹೋಗಿ ಸಾಂತ್ವನ ಹೇಳಿ ಕೈಲಾದಷ್ಟುನ ನೆರವು ನೀಡುವ ಕೆಲಸ ಮಾಡುತ್ತಿದ್ದೇವೆ. ನಾನು ಕೋಲಾರದಲ್ಲಿ ಈ ಕಾರ್ಯಕ್ರಮ ಪ್ರಾರಂಭಿಸಿದ್ದೇನೆ. ಮಾಜಿ ಸಚಿವ ಮಲ್ಲಿಕಾರ್ಜುನ್‌ ರವರು ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.

ದೇಶದಲ್ಲಿ ಯಾವುದೇ ಜನಪ್ರತಿನಿಧಿ ಉಚಿತವಾಗಿ ಇಡೀ ಕ್ಷೇತ್ರದ ಜನರಿಗೆ ಕೊರೊನಾ ಲಸಿಕೆ ನೀಡಿದ ಉದಾಹರಣೆ ಇಲ್ಲ. ಅಂತಹ ಕೆಲಸವನ್ನು ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮಾತನಾಡಿ, ಪೆಟ್ರೋಲ್‌ ಡೀಸೆಲ್‌, ಅಡುಗೆ ಸಿಲಿಂಡರ್‌ ಬೆಲೆ ಹೆಚ್ಚಾಗಿದೆ. ಲೀಟರ್‌ ಪೆಟ್ರೋಲ್‌ ಬೆಲೆ 105-108 ರೂಪಾಯಿ ಆಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬೆಲೆ ನಿಯಂತ್ರಣ ಮಾಡಬೇಕಾದ ಕಾಂಗ್ರೆಸ್‌ ಸರ್ಕಾರ ಬೇಕಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ, ಉಸ್ತುವಾರಿ ಗುರಪ್ಪ ನಾಯ್ಡು, ನಗರಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಅನಿತಾಬಾಯಿ ಮಾಲತೇಶ್‌, ಡಿ. ಬಸವರಾಜ್‌, ಕೆ.ಎಸ್‌. ಬಸವಂತಪ್ಪ, ಅಬ್ದುಲ್‌ ಲತೀಫ್‌, ಜೆ.ಡಿ. ಪ್ರಕಾಶ್‌, ಕೆ. ಚಮನ್‌ ಸಾಬ್‌, ಜಿ.ಎಸ್‌. ಮಂಜುನಾಥ್‌, ವಿನಾಯಕ ಪೈಲ್ವಾನ್‌, ಸುಧಾ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.