ವೈದ್ಯಕೀಯ ಕಾಲೇಜು ಆರಂಭಕ್ಕೆ ಖಾಸಗಿ ಸಹಭಾಗಿತ್ವ ಬೇಡ


Team Udayavani, Jul 13, 2021, 9:56 PM IST

13-15

ದಾವಣಗೆರೆ: ದಾವಣಗೆರೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಿಗೆ ರಾಜ್ಯ ಸರ್ಕಾರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂದು ಭದ್ರಾ ಮೇಲ್ದಂಡೆ ಯೋಜನೆ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್‌ ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಘೋಷಣೆ ಸ್ವಾಗತಾರ್ಹ. ಆದರೆ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವುದರಿಂದ ಬಂಡವಾಳಶಾಹಿಗಳು, ಉದ್ದಿಮೆದಾರರಿಗೆ ಅನುಕೂಲ ಆಗುತ್ತದೆಯೇ ಹೊರತು ಜನಸಾಮಾನ್ಯರಿಗೆ ಯಾವುದೇ ಅನುಕೂಲ ಆಗುವುದಿಲ್ಲ. ಹಾಗಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂದರು.

ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವುದರಿಂದ ಬಂಡವಾಳಗಾರರು ಬಂಡವಾಳ ಹೂಡಲು ಅನುಕೂಲ ಆಗುತ್ತದೆ. ಜನಸಾಮಾನ್ಯರಿಗೆ ದೊರೆಯಬೇಕಾದ ಸೌಲಭ್ಯಗಳು ಉಚಿತವಾಗಿ ದೊರೆಯುವ ಮಾತೇ ಇರುವುದಿಲ್ಲ. 2 ಲಕ್ಷ ಕೋಟಿ ಬಜೆಟ್‌ ಹೊಂದಿರುವ ರಾಜ್ಯ ಸರ್ಕಾರವೇ ಕಾಲೇಜು ಪ್ರಾರಂಭಿಸಲು ಯಾವುದೇ ಸಮಸ್ಯೆ ಇಲ್ಲ. ಹಾಗಾಗಿ ಸರ್ಕಾರದಿಂದಲೇ ವೈದ್ಯಕೀಯ ಕಾಲೇಜು ಆಗಬೇಕು ಎಂದರು.

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗತ್ಯವಾದ ಜಮೀನು ಹಾಗೂ 500ಕ್ಕೂ ಹೆಚ್ಚು ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇದೆ. ಈಗಾಗಲೇ ಅನೇಕ ವರ್ಷದಿಂದ ಜಿಲ್ಲಾ ಆಸ್ಪತ್ರೆ ನಡೆಯುತ್ತಿದೆ. ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಎಲ್ಲ ಅಗತ್ಯ ಸೌಲಭ್ಯಗಳಿವೆ. ಹಾಗಾಗಿ ಖಾಸಗಿ ಸಹಭಾಗಿತ್ವ ಬೇಡವೇ ಬೇಡ ಎಂದು ತಿಳಿಸಿದರು. ಜು. 10 ರಂದು ದಾವಣಗೆರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ವೈದ್ಯಕೀಯ ಕಾಲೇಜು ಪ್ರಾರಂಭದ ಬಗ್ಗೆ ವಿಸ್ಕೃತ ವರದಿ ಪಡೆಯುವುದಾಗಿ ತಿಳಿಸಿದ್ದಾರೆ.

ಅದರರ್ಥ ದಾವಣಗೆರೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಮಂಜೂರು ಆಗಿಲ್ಲ. ರಾಜ್ಯ ಸರ್ಕಾರ ಮುಂದಿನ ಬಜೆಟ್‌ನಲ್ಲಿ ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭದ ವಿಷಯ ಸೇರಿಸಬೇಕು ಇಲ್ಲವೇ ಸಚಿವ ಸಂಪುಟ ಶೀಘ್ರವೇ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಒಪ್ಪಿಗೆ ನೀಡಬೇಕು. ಸಂಪುಟ ಸಭೆ ಒಪ್ಪಿಗೆ ನೀಡಿದರೂ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡುವುದು ಕಷ್ಟ. ಆ ನಿಟ್ಟಿನಲ್ಲೂ ಸರ್ಕಾರ ಪ್ರಯತ್ನ ಮಾಡಬೇಕು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಆದಷ್ಟು ಬೇಗ ವೈದ್ಯಕೀಯ ಕಾಲೇಜಿನ ಶಂಕುಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಶಂಕುಸ್ಥಾಪನೆಯ ಬದಲಿಗೆ ಉದ್ಘಾಟನೆ ಮಾಡುವುದೇ ಸೂಕ್ತ. ವೈದ್ಯಕೀಯ ಕಾಲೇಜಿನ ವಿಸ್ಕೃತ ವರದಿ ಕಾಮಗಾರಿ ಅಂದಾಜು ವೆಚ್ಚ ತಯಾರಿಸಿ, ಟೆಂಡರ್‌ ಕರೆದು ಗುತ್ತಿಗೆದಾರರ ನಿಗದಿಪಡಿಸಿದ ನಂತರವೇ ಕಾಮಗಾರಿ ಉದ್ಘಾಟನೆ ಮಾಡಬೇಕು ಎಂದು ಒತ್ತಾಯಿಸಿದು.

ಧನ್ಯಕುಮಾರ್‌ ಬಗ್ಗೇನಹಳ್ಳಿ, ಅಜ್ಜಯ್ಯ ಮೆದಿಕೆರನಹಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.