ಕ್ರಿಯಾ ಯೋಜನೆಗೆ ಅನುಮೋದನೆ


Team Udayavani, Aug 13, 2021, 6:25 PM IST

13-20

ದಾವಣಗೆರೆ: ಜಿಲ್ಲಾ ಪಂಚಾಯಿತಿ 2021-22ನೇ ಸಾಲಿನಲ್ಲಿ 354.65 ಕೋಟಿ ರೂ.ಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಜಿಪಂ ಸಾಮಾನ್ಯ ಸಭೆಯಲ್ಲಿ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಯಾಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್‌ ಕಾರ್ಯಕ್ರಮಗಳಡಿ 354.65 ಕೋಟಿ ರೂ., ತಾಲೂಕು ಪಂಚಾಯಿತಿ ಕಾರ್ಯಕ್ರಮಗಳಡಿ 716.87 ಕೋಟಿ ರೂ., ಗ್ರಾಮ ಪಂಚಾಯಿತಿ ಕಾರ್ಯಕ್ರಮಗಳಡಿ 35 ಲಕ್ಷ ರೂ. ಸೇರಿದಂತೆ ಒಟ್ಟಾರೆ ಈ ವರ್ಷ ಜಿಲ್ಲೆಗೆ 1071.88 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.

ಇದರಲ್ಲಿ ಜಿಪಂ ಕಾರ್ಯಕ್ರಮಗಳಡಿ ನಿಗದಿಪಡಿಸಿರುವ 354.65 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆಯಿತು. ಪ್ರಸಕ್ತ ಸಾಲಿನಲ್ಲಿ 354.65 ಕೋಟಿ ರೂ. ಗಳ ಅನುದಾನವನ್ನು ಹಂಚಿಕೆ ಮಾಡಲು 30 ವಲಯಗಳನ್ನಾಗಿ ನಿಗದಿಪಡಿಸಲಾಗಿತ್ತು. ಹಂಚಿಕೆ ಮಾಡಲಾಗಿರುವ ಅನುದಾನದಲ್ಲಿ ಸಾಮಾನ್ಯ ಶಿಕ್ಷಣ ವಲಯಕ್ಕೆ ಅತಿ ಹೆಚ್ಚು ಅಂದರೆ 160.27 ಕೋಟಿ ರೂ. ಗಳ ಅನುದಾನ (ಶೇ. 45.19) ನಿಗದಿಪಡಿಸಲಾಗಿದೆ. ವೈದ್ಯಕೀಯ ಮತ್ತು ಜನಾರೋಗ್ಯ ವಲಯಕ್ಕೆ 47.32 ಕೋಟಿ ರೂ., ಕುಟುಂಬ ಕಲ್ಯಾಣ-24.52 ಕೋಟಿ, ಪರಿಶಿಷ್ಟ ಜಾತಿ ಕಲ್ಯಾಣ-25.64 ಕೋಟಿ, ಪರಿಶಿಷ್ಟ ಪಂಗಡ ಕಲ್ಯಾಣ-10.72 ಕೋಟಿ, ಹಿಂದುಳಿದ ವರ್ಗಗಳ ಕಲ್ಯಾಣ-37.03 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣ-2.81 ಕೋಟಿ, ಕೃಷಿ-2.84 ಕೋಟಿ, ತೋಟಗಾರಿಕೆ-4.44 ಕೋಟಿ, ಪಶುಸಂಗೋಪನೆ-4.82 ಕೋಟಿ, ಅರಣ್ಯ-6.68 ಕೋಟಿ, ಗ್ರಾಮೀಣಾಭಿವೃದ್ಧಿ-4.10 ಕೋಟಿ, ಆಯುಷ್‌-5.15 ಕೋಟಿ, ಲೋಕೋಪಯೋಗಿ ಕಾಮಗಾರಿ-5.62 ಕೋಟಿ, ಮೀನುಗಾರಿಕೆ-1.18 ಕೋಟಿ, ರಸ್ತೆ ಮತ್ತು ಸೇತುವೆ-3.29 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಕ್ರಿಯಾ ಯೋಜನೆಗಳಿಗೆ ಸಾಮಾನ್ಯ ಸಭೆ ಅನುಮೋದನೆ ನೀಡಿತು.

ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿಗೆ ರಾಜ್ಯ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನದಡಿ 5.41ಕೋಟಿ ರೂ. ಗಳ ಅನುದಾನದ ವಿವಿಧ ಕಾರ್ಯಕ್ರಮಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಇದರಲ್ಲಿ ಪ್ರಮುಖವಾಗಿ ಕುಡಿಯುವ ನೀರು-26.23 ಲಕ್ಷ ರೂ., ನೈರ್ಮಲ್ಯ-71.64 ಲಕ್ಷ ರೂ., ಶಿಕ್ಷಣ- 170.13 ಲಕ್ಷ ರೂ., ಆರೋಗ್ಯ-53.84 ಲಕ್ಷ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ-19.60 ಲಕ್ಷ, ರಸ್ತೆ-103.66 ಲಕ್ಷ, ವಸತಿ ನಿಲಯಗಳು-50.25 ಲಕ್ಷ, ಪಶುಚಿಕಿತ್ಸಾಲಯ-7.10 ಲಕ್ಷ ಸೇರಿದಂತೆ ರಾಜ್ಯ ಹಣಕಾಸು ಆಯೋಗದ ಅನಿರ್ಬಂತ ಅನುದಾನದಡಿ ಒಟ್ಟು 541.66 ಲಕ್ಷ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ ದೊರೆಯಿತು.

ಜಿಪಂ ಆಡಳಿತಾಧಿಕಾರಿಯಾಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಮಾತನಾಡಿ, ಪ್ರಸಕ್ತ ವರ್ಷ ಆಗಸ್ಟ್‌ ತಿಂಗಳಿನಲ್ಲಿಯೇ ಜಿಪಂನ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ ಡಿಸೆಂಬರ್‌ ಒಳಗಾಗಿಯೇ ನಿಗದಿಪಡಿಸಿದ ಕಾಮಗಾರಿ, ಹಾಗೂ ಕಾರ್ಯಕ್ರಮಗಳಿಗೆ ಅನುದಾನ ವೆಚ್ಚ ಮಾಡಿದಲ್ಲಿ ಮಾರ್ಚ್‌ ವೇಳೆಗೆ ಇನ್ನಷ್ಟು ಹೆಚ್ಚುವರಿ ಅನುದಾನ ಲಭ್ಯವಾಗುತ್ತದೆ. ಅಧಿಕಾರಿಗಳು ಯಾವುದೇ ನೆಪಗಳನ್ನು ಹೇಳದೆ, ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಗುಣಮಟ್ಟದ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಖಚಿತ ಎಂದರು. ಜಿಪಂ ಸಿಇಒ ಡಾ. ವಿಜಯಮಹಾಂತೇಶ ದಾನಮ್ಮನವರ, ಉಪಕಾರ್ಯದರ್ಶಿ ಆನಂದ್‌ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.