Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ


Team Udayavani, May 15, 2024, 10:09 PM IST

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ದಾವಣಗೆರೆ: ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ ಸಾವಿರಾರು ಮೀನುಗಳು ಸತ್ತಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿ ಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಿದ್ದು, ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ.

ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್‌, ಬ್ಲಾಕ್ ಶಾರ್ಪ್‌ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು.

ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು ಸಂಗ್ರಹ ಇತ್ತು. ಸಹಜವಾಗಿಯೇ ಮೀನುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಗ್ರಾಮಸ್ಥರು, ಸುತ್ತಮುತ್ತಲಿನ ಊರಿನವರು ಮೀನುಗಳನ್ನು ಹಿಡಿದುಕೊಂಡು ಹೋದ ಸುದ್ದಿ ಗೊತ್ತಾಗಿ ಮಂಜಪ್ಪ, ಹನುಮಂತಪ್ಪ, ಸಿದ್ದಪ್ಪ ಕೆರೆ ಬಳಿ ಬಂದಿದ್ದರು. ಸುಮಾರು 3 ಕ್ವಿಂಟಾಲ್ ಮೀನುಗಳನ್ನು ಹಿಡಿದು, 100 ರು.ಗೆ ಕೆಜಿಯಂತೆ ಮಾರಿದರೂ ಮೀನುಗಳ ಮಾರಣ ಹೋಮ ಮಾತ್ರ ತಡೆಯಲಾಗಿಲ್ಲ.

ಬೇತೂರು ಕೆರೆಯಲ್ಲಿ ಮೀನುಗಳು ಸತ್ತು ತೇಲುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆ ಎಲೆಬೇತೂರು, ನಾಗರಕಟ್ಟೆ, ಬಿ.ಚಿತ್ತಾನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದರು.

ಮೀನುಗಾರಿಕೆಗೆ ಟೆಂಡರ್ ಹಾಕಿದ್ದೆವು. ಈಗ ಇನ್ನೇನು ನಮ್ಮ ಬಾಯಿಗೆ ತುತ್ತು ಬರುತ್ತಿದೆಯೆಂಬ ಕಾಲಕ್ಕೆ ಕಾಣದ ಕೈಗಳು ನಮ್ಮ ತುತ್ತಿಗೆ ವಿಷ ಇಕ್ಕಿವೆ. ನಮ್ಮ ಅನ್ನಕ್ಕೆ ಯಾರು ಕಲ್ಲು ಹಾಕಿದ್ದಾರೋ ಗೊತ್ತಾಗುತ್ತಿಲ್ಲ. ಯಾರೋ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿರುವ ಸಾಧ್ಯತೆ ಇದೆ. ಕೆರೆ ಬಳಿ ವಿಷದ ಬಾಟಲು ಪತ್ತೆಯಾಗಿದೆ. ಸುಮಾರು 5 ಟನ್‌ನಷ್ಟು ಮೀನುಗಳು ಸಾವನ್ನಪ್ಪಿವೆ. 2ರಿಂದ 10 ಕೆಜಿವರೆಗಿನ ಮೀನು ಸತ್ತಿವೆ ಎಂದು ತಿಳಿಸಿದರು.

ಕಳೆದ 5 ವರ್ಷದಿಂದ ಸಾಕಿದ್ದ ವಿವಿಧ ಜಾತಿಯ ಸುಮಾರು 5 ಟನ್ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ವಿಷ ಪ್ರಾಶನದಿಂದ ಮೀನುಗಳು ಸಾಯುತ್ತಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.