Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

ಕಾಂಗ್ರೆಸ್ ಸರ್ಕಾರ ತನ್ನ ತಪ್ಪು ನೀತಿಯಿಂದಾಗಿ ರಾಜ್ಯದ ಜನತೆಯ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ

Team Udayavani, Apr 28, 2024, 5:52 PM IST

1-eewqeqwe

ದಾವಣಗೆರೆ : ರಾಜ್ಯದಲ್ಲಿ ಎಲ್ಲೇ ಹೋದರೂ ಮತ್ತೊಮ್ಮೆ ಬಿಜೆಪಿ ಸರ್ಕಾರ ಕೂಗು ಕೇಳಿ ಬರುತ್ತಿದೆ. ಜೂನ್ 4 ರಂದು ರಾಜ್ಯದಲ್ಲಿ ಬಿಜೆಪಿ ವಿಜಯೋತ್ಸವ ನಡೆಯಲಿದ್ದು ದಾವಣಗೆರೆಯಲ್ಲಿ ವಿಶೇಷವಾಗಿ ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಈಗಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸದ ನುಡಿಗಳನ್ನಾಡಿದ್ದಾರೆ.

ಬಿಜೆಪಿ ವಿಕಸಿತ ಭಾರತಕ್ಕಾಗಿ ವಿಜಯ ಸಂಕಲ್ಪ ಸಮಾವೇಶದಲ್ಲಿ  ಮಾತನಾಡಿ,’ ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮೇಲಿನಿಂದ ಕೆಳಗಿನವರೆಗೆ ಸಂಕಷ್ಟ ಮಾಡಿದೆ. ದೆಹಲಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಖಾತೆ ತೆರೆಯುವ ಸಂಭವದ ಬಾಗಿಲು ಮುಚ್ಚಿ ಹೋದಿದೆ. ದಾವಣಗೆರೆಯಲ್ಲಿ ನೆರೆದ ಜನಸ್ತೋಮ ನೋಡಿದರೆ ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಪಾಪಗಳಿಗೆ ಶಿಕ್ಷೆ ಕೊಡುವುದು ನಿಶ್ಚಿತ’ ಎಂದರು.

ಕಾಂಗ್ರೆಸ್‌ನಲ್ಲಿನ ಆಂತರಿಕ ಜಗಳ ಬೀದಿಗೆ ಬರಲಿದೆ. ಎಲ್ಲ ಸುಳ್ಳುಗಳು ಬಯಲಾಗಲಿವೆ. ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ. ಚುನಾವಣೆಗೆ ಬಂದಾಗಲೆಲ್ಲ ಕಾಂಗ್ರೆಸ್ ಇವಿಎಂ ಮೇಲೆ ಆರೋಪದ ಮಂತ್ರ ಜಪಿಸುತ್ತಿತ್ತು. ಮೋದಿ ಗೆದ್ದರೂ ವಿಇಎಂ ಕಾರಣ, ಕಾರ್ಯಕರ್ತರನ್ನು ಸಮಾಧಾನಪಡಿಸುತ್ತಿದ್ದರು.ಇವಿಎಂ ಬಗ್ಗೆ ಮಾತನಾಡದಂತೆ ಸುಪ್ರಿಂಕೋರ್ಟ್ ಸರಿಯಾಗಿ ಚಾಟಿ ಬೀಸಿದೆ . ಈಗ ಅವರಿಗೆ ಚುನಾವಣೆಯಲ್ಲಿ ಸೋತರಿಗೆ ಏನು ಹೇಳಬಹುದು ಎಂಬ ತಯಾರಿ ನಡೆಸಿದ್ದಾರೆ. ಅವರಿಗೆ ಈಗ ನಿಜವಾದ ಸಂಕಷ್ಟ ಎದುರಾಗಿದೆ ಎಂದರು.

‘ದೇಶದ ಮೂಲೆ ಮೂಲೆಯಲ್ಲಿ ಓಡಾಡಿದ್ದೇನೆ. 2014, 2019 ರಲ್ಲಿ ಬಂದಿದ್ದೇನೆ. ಆದರೆ, ಈಗ 2024 ರಲ್ಲಿ ಬಂದಿರುವ ಪರಿಸ್ಥಿತಿ ಬೇರೆಯೇ ಇದೆ. ದೇಶದಲ್ಲಿ 10 ವರ್ಷ ಮೊಡಿದ ಮಾಡಿದ ಕೆಲಸ, ಕಾರ್ಯವೈಖರಿ, ಅನುಭವ, ಸರಿ-ತಪ್ಪಿನ ನಿರ್ಣಯ ಎಲ್ಲವನ್ನೂ ಅರ್ಥ ಮಾಡಿಕೊಂಡು ನನ್ನ ಜೀವನವನ್ನೇ ಜನರ ಏಳಿಗಾಗಿ ಮುಡಿಪಾಗಿಟ್ಟಿರುವ ಮೋದಿಯನ್ನು ಜನ ಕಾಣುತ್ತಿದ್ದಾರೆ. ದೇಶದ ಸಹೋದರಿಯರು, ಯುವಜನರು, ಮಾತೆಯರು ನನಗೆ ರಕ್ಷಾ ಕವಚವಾಗಿದ್ದಾರೆ. ನಾನು ಎಲ್ಲಿಯೇ ಹೋದರೂ ಜನರು ತೋರುವ ಪ್ರೀತಿ ನೋಡಿದರೆ, ಇದು ನನ್ನ ಅನೇಕ ಜನ್ಮಗಳ ಪುಣ್ಯ ಎನಿಸುತ್ತಿದೆ. ಇದು ಪರಮಾತ್ಮನೇ ನನಗೆ ಕಳುಹಿಸಿದ್ದಾನೆನೋ ಎನಿಸುತ್ತದೆ. ನಿಮ್ಮ ಪ್ರೀತಿಗೆ ಯಾವ ರೀತಿ ಕೃತಜ್ಞತೆ ಸಲ್ಲಿಸಬೇಕೆಂದು ತಿಳಿಯುತ್ತಿಲ್ಲ. ಕೃತಜ್ಞತೆ ಸಲ್ಲಿಸಲು ನನ್ನ ಬಳಿ ಶಬ್ದಗಳೇ ಇಲ್ಲ. ಇನ್ನು ನಾನು ಯಾರಿಗೆ ಕೃತಜ್ಞತೆ ಸಲ್ಲಿಸಬೇಕು ಎಂಬುದೂ ಗೊತ್ತಿಲ್ಲ. ಪರಮಾತ್ಮನಿಗೆ ಕೃತಜ್ಞತೆ ಸಲ್ಲಿಸಬೇಕೋ ಜನತಾ ಜನಾರ್ದನರಾದ ನಿಮಿಗೆ ಸಲ್ಲಿಸಬೇಕೋ ತಿಳಿಯುತ್ತಿಲ್ಲ. ಹಾಗಾಗಿ ನಾನು ದೇಶದ ಜನರ ಮುಂದೆ ತಲೆಬಾಗಿ ನಮ್ರತಾ ಪೂರ್ವಕವಾಗಿ ನಮಸ್ಕಾರ ಹೇಳುವುದನ್ನು ಬಿಟ್ಟರೆ, ಮೌನ ಸಮರ್ಪಣೆ ಮಾಡುವುದನ್ನು ಬಿಟ್ಟರೆ ಬೇರೆನೂ ಇಲ್ಲ. ಆದ್ದರಿಂದ ದೇಶ ಹಾಗೂ ದೇಶದ ಜನರ ರಕ್ಷಣೆ ವಿಚಾರದಲ್ಲಿ ನಾನು ಯಾವತ್ತೂ ವಿಶ್ರಮಿಸುವುದಿಲ್ಲ, ನಿಲ್ಲುವುದಿಲ್ಲ ಹಾಗೂ ತಲೆಬಾಗುವುದಿಲ್ಲ. ದೇಶದ ಜನರಿಗೆ ನನ್ನ ಜೀವನ ಮುಡಿಪಾಡಿಸುವುದೇ ಮೋದಿ ಗ್ಯಾರಂಟಿ’ ಎಂದರು.

‘ಬಿಜೆಪಿ ದೇಶವನ್ನು ಮುಂದೆ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದರೆ. ಕಾಂಗ್ರೆಸ್ ರಾಜ್ಯದಲ್ಲಿ ಹಿಂದಕ್ಕೆ ಒಯ್ಯುವ ಕಾರ್ಯ ಮಾಡುತ್ತಿದೆ. ಮೋದಿ ಸರ್ಕಾರ ವಿಕಸಿತ ಭಾರತಕ್ಕಾಗಿ 24*7 ಕೆಲಸ ಮಾಡಿದರೆ, ಕಾಂಗ್ರೆಸ್ಸಿನಲ್ಲಿ ಎಲ್ಲದ್ದಕ್ಕೂ ಬ್ರೇಕ್ ಹಾಕುವ ಸಂಸ್ಕೃತಿ ಇದೆ. ಅದು ದೇಶದ ಏಕತೆಯನ್ನು ವಿಭಜಿಸುವ, ಅಭಿವೃದ್ಧಿ ತಡೆಯುವ ಸಂಸ್ಕೃತಿ ಹೊಂದಿದೆ’ ಎಂದರು.

’10 ವರ್ಷದಲ್ಲಿ ಎನ್‌ಡಿಎ ಸರ್ಕಾರ ರಾಜ್ಯದ ವಿಕಾಸಕ್ಕಾಗಿ ಕೆಲಸ ಮಾಡಿದೆ. ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಆಡಳಿತವಿದ್ದಾಗ ಸಾಕಷ್ಟು ಅಭಿವೃದ್ಧಿಯಾಗಿದೆ.ಈಗ ಕಾಂಗ್ರೆಸ್ ಆಡಳಿತದಿಂದ ರಾಜ್ಯ ದಿವಾಳಿಯಾಗುತ್ತಿದೆ. ನಂಬರ್ ಒಂದು ಇದ್ದವನು ನಂಬರ್ ಎರಡು ಇದ್ದವನ್ನು ಹೇಗೆ ಕೆಳಗಿಳಿಸಬೇಕು. ನಂಬರ್ ಎರಡು ಇದ್ದವನು ನಂಬರ್ ಒಂದು ಇದ್ದವನ ಕಾಲು ಎಳೆಯುವ ಕೆಲಸ ನಡೆಯುತ್ತಿದೆ ಹೊರತು, ರಾಜ್ಯವನ್ನು ಮೇಲೇಕೆತ್ತುವ ಯೋಚನೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ತಪ್ಪು ನೀತಿಯಿಂದಾಗಿ ರಾಜ್ಯದ ಜನತೆಯ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.