Davanagere: ಬೆಳಗಿನ ಜಾವ ಸುರಿದ ಭಾರೀ ಮಳೆ: ಸಾಕಷ್ಟು ಅವಾಂತರ
Team Udayavani, Aug 14, 2024, 12:32 PM IST
ದಾವಣಗೆರೆ: ಬುಧವಾರ(ಆಗಸ್ಟ್ 14) ಬೆಳಗಿನ ಜಾವ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ವಿವಿಧೆಡೆ ಜನರು ತೀವ್ರ ತೊಂದರೆ ಅನುಭವಿ ಸುವಂತಾಯಿತು.
ಕೆಲವು ಕಡೆ ರಸ್ತೆಯಲ್ಲಿ ನೀರು ಹರಿದ ಪರಿಣಾಮ ಸಂಪರ್ಕ ಬಂದ್ ಆಗಿತ್ತು. ಅಡಕೆ ಇತರೆ ತೋಟಗಳಿಗೆ ನೀರು ನುಗ್ಗಿದೆ. ಜಿಲ್ಲಾ ಕೇಂದ್ರ ದಾವಣಗೆರೆಯ ಬಂಬೂಬಜಾರ್, ಶೇಖರಪ್ಪ ನಗರ ಇತರೆಡೆ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಯಿತು. ನೀರು ಹೊರ ಹಾಕುವುದೇ ದುಸ್ತರವಾಗಿತ್ತು.
ಸೇಂಟ್ ಪಾಲ್ಸ್ ಕಾನ್ವೆಂಟ್ ಇತರೆ ರಸ್ತೆಗಳು ಕೆಸರುಮಯವಾಗಿದ್ದವು. ಶಿವಪ್ಪಯ್ಯ ವೃತ್ತ ಇತರೆಡೆ ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ನಿರಂತರವಾಗಿ ಸುರಿದ ಮಳೆಯಿಂದ ಚನ್ನಗಿರಿ ತಾಲೂಕಿನ ಹಲವಾರು ಕಡೆ ತೋಟಗಳಿಗೆ ನೀರು ನುಗ್ಗಿತ್ತು. ಕೆಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿತ್ತು.ಬೇತೂರು-ರಾಂಪುರ ಸಂಪರ್ಕಿಸುವ ರಸ್ತೆಯ ಮೇಲೆ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡ ಬೇಕಾಯಿತು. ಬೇತೂರು ಗ್ರಾಮದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ನೀರನ್ನು ಮನೆಯಿಂದ ಹೊರ ಹಾಕಲು ಹರ ಸಾಹಸ ಪಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ದಾವಣಗೆರೆ ನಗರದ ಬಂಬೂ ಬಜಾರ್ ನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಜನರು ಪರದಾಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಎಚ್.ಕಲ್ಪನಹಳ್ಳಿ ಗ್ರಾಮದಲ್ಲಿ ನಾಲೆಗಳಲ್ಲಿ ಚಾನಲ್ ಗಳಲ್ಲಿ ಹೂಳು ತುಂಬಿದ್ದರಿಂದ ನೀರು ಗ್ರಾಮಕ್ಕೆ ನುಗ್ಗಿದ ಘಟನೆ ಕೂಡ ನಡೆದಿತ್ತು. ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರು ಸಂಕಷ್ಟ ಪಡಬೇಕಾಯಿತು. ಬೆಳಗಿನ ಜಾವ ಮೂರು ಗಂಟೆಯಿಂದ ಆರಂಭವಾದ ಮಳೆ ಎಡೆಬಿಡದೆ ಸುರಿದಿದೆ. ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಅಡಕೆ ತೋಟಗಳೆಲ್ಲಾ ಸಂಪೂರ್ಣವಾಗಿ ಜಲಾವೃತಗೊಂಡಿವೆ. ಭಾರೀ ಮಳೆಗೆ ಕೆರೆಕಟ್ಟೆಗಳು ಮೈದುಂಬಿ ಹರಿಯುತ್ತಿದ್ದುಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.