ಶಾಸಕ ರೇಣುಕಾಚಾರ್ಯ ಬಂಧಿಸಿ ಗಡಿಪಾರು ಮಾಡಿ
Team Udayavani, Apr 3, 2022, 6:07 PM IST
ದಾವಣಗೆರೆ: ಬೇಡ ಜಂಗಮ ಹೆಸರಲ್ಲಿ ನಕಲಿಜಾತಿ ಪ್ರಮಾಣಪತ್ರ ಪಡೆದಿರುವ, ದಲಿತಹೋರಾಟಗಾರರ ವಿರುದ್ಧ ಸುಳ್ಳು ಮೊಕದ್ದಮೆಹೂಡಿರುವ ಡಾ| ಎಂ.ಪಿ. ದಾರಕೇಶ್ವರಯ್ಯ ಮತ್ತುಅವರಿಗೆ ಕುಮ್ಮಕ್ಕು ನೀಡಿರುವ ಹೊನ್ನಾಳಿ ಶಾಸಕಎಂ.ಪಿ. ರೇಣುಕಾಚಾರ್ಯ ಅವರನ್ನ ಕೂಡಲೇಬಂಧಿಸಬೇಕು ಎಂದು ದಲಿತ ಪರ ಸಂಘಟನೆಗಳಮುಖಂಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷಡಾ| ವೈ. ರಾಮಪ್ಪ ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಶಾಸಕ ಎಂ.ಪಿ. ರೇಣುಕಾಚಾರ್ಯಅವರು ಬೇಡ ಜಂಗಮ ಜಾತಿ ಪ್ರಮಾಣಪತ್ರಪಡೆದಿರುವುದಾಗಿ ಸದನದಲ್ಲೇ ಒಪ್ಪಿಕೊಂಡಿದ್ದಾರೆ.ಹಾಗಾಗಿ ಕೂಡಲೇ ಅವರನ್ನು ಬಂಧನಕ್ಕೆಒಳಪಡಿಸಬೇಕು ಮಾತ್ರವಲ್ಲ ರಾಜ್ಯದಿಂದಲೇಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಕಾಯ್ದೆ ಅಧಿನಿಯಮ 7ರ ಪ್ರಕಾರ ಸುಳ್ಳು ಮಾಹಿತಿಸಲ್ಲಿಸಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುವುದುಶಿಕ್ಷಾರ್ಹ ಮತ್ತು ಅಕ್ಷಮ್ಯ ಅಪರಾಧ. ಹಾಗಾಗಿರಾಜ್ಯ ಸರ್ಕಾರ ಕೂಡಲೇ ರೇಣುಕಾಚಾರ್ಯವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು.
ಶಾಸಕಸ್ಥಾನದಿಂದ ಕಿತ್ತೂಗೆಯಬೇಕು. ರೇಣುಕಾಚಾರ್ಯಮತ್ತು ದಾರಕೇಶ್ವರಯ್ಯ ಅವರನ್ನು ಒಂದರೆಡುದಿನಗಳಲ್ಲಿ ಬಂಧಿಸಬೇಕು ಎಂದು ಕೋರಿಜಿಲ್ಲಾ ರಕ್ಷಣಾಧಿಕಾರಿಯವರಿಗೆ ಮನವಿಸಲ್ಲಿಸಲಾಗುವುದು. ಬಂಧನಕ್ಕೆ ಒಳಪಡಿಸಸದೇಹೋದಲ್ಲಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿಜಿಲ್ಲೆ, ರಾಜ್ಯಮಟ್ಟದಲ್ಲಿ ತೀವ್ರ ಸ್ವರೂಪದ ಹೋರಾಟನಡೆಸಲಾಗುವುದು ಎಂದು ಎಚ್ಚರಿಸಿದರು.
ಬೆಂಗಳೂರು ಉತ್ತರ ತಾಲೂಕಿನಲ್ಲೇ600ಕ್ಕೂ ಹೆಚ್ಚು ಜನರು ಬೇಡ ಜಂಗಮ ಜಾತಿಪ್ರಮಾಣಪತ್ರ ಪಡೆದಿರುವು ದು ಯಕ್ಷ ಮತ್ತುಅಚ್ಚರಿಯ ಪ್ರಶ್ನೆಯಾಗಿದೆ. ಪರಿಶಿಷ್ಟ ಜಾತಿ ಮತ್ತುಪಂಗಡಗಳ ಕಾಯ್ದೆ ಅಧಿನಿಯಮ 4ರ ಪ್ರಕಾರಸ್ಥಳ ಮಹಜರು, ಪೂರ್ವಜರ ಪೂರ್ವಾಪರಮಾಹಿತಿ ಪಡೆದ ನಂತರವೇ ಜಾತಿ ಪ್ರಮಾಣಪತ್ರನೀಡಬೇಕು. ಆದರೆ, ಯಾವುದೇ ನಿಯಮಅನುಸರಿಸದೆ ಜಾತಿ ಪ್ರಮಾಣಪತ್ರ ನೀಡಲಾಗಿದೆ.ಸಂಬಂಧಿತರ ವಿರುದ್ಧವೂ ಸರ್ಕಾರ ಸೂಕ್ತ ಕ್ರಮತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.