ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ


Team Udayavani, Oct 27, 2021, 1:16 PM IST

davanagere news

ದಾವಣಗೆರೆ: ಆಂಗ್ಲ ಶಾಲೆಯಲ್ಲಿ ಕಲಿತರೆ ಮಕ್ಕಳುದೊಡ್ಡ ಹುದ್ದೆ ಅಲಂಕರಿಸುತ್ತಾರೆಂಬ ಭಾವನೆಅಷ್ಟು ಸರಿಯಲ್ಲ. ಜ್ಞಾನ ಗ್ರಹಿಕೆ ಆಗುವುದೇಮಾತೃಭಾಷೆಯಲ್ಲಿ. ಕನ್ನಡ ನಮಗೆ ಹೃದಯಭಾಷೆಯಾಗಿದ್ದು, ಹತ್ತನೇ ತರಗತಿವರೆಗೆ ಮಕ್ಕಳು ಕನ್ನಡ ಭಾಷೆಯಲ್ಲಿಯೇ ಓದುವುದು ಒಳಿತು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ತಾಲೂಕಿನ ಕಬ್ಬೂರು ಗ್ರಾಮದ ಸರ್ಕಾರಿಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕನ್ನಡಮತ್ತು ಸಂಸ್ಕೃತಿ ಇಲಾಖೆ ಹಾಗೂ ಮುರಾರ್ಜಿಕಲಾ ಬಳಗ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಹಾಗೂ 66ನೇ ಕನ್ನಡ ರಾಜ್ಯೋತ್ಸವದಅಂಗವಾಗಿ ಆಯೋಜಿಸಿದ್ದ ಕಬ್ಬೂರು ಸಾಂಸ್ಕೃತಿಕಸಂಭ್ರಮ ಹಾಗೂ “ಕನ್ನಡಕ್ಕಾಗಿ ನಾವುಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಂಗ್ಲ ಶಾಲೆಗೆ ಮಕ್ಕಳನ್ನು ಕಳುಹಿಸುವವ್ಯಾಮೋಹದಿಂದ ಪೋಷಕರು ಹೊರಬರಬೇಕು.ಜಗತ್ತಿನ ದೊಡ್ಡ ಕಂಪನಿಗಳಲ್ಲಿ ಕನ್ನಡದ ಬಾವುಟಹಾರಿಸಿದ ಬಹುತೇಕರು ಕನ್ನಡ ಶಾಲೆಗಳಲ್ಲಿಕಲಿತವರಾಗಿದ್ದಾರೆ ಎಂಬುದನ್ನು ಅರಿಯಬೇಕು.ಮಕ್ಕಳಿಗೆ ವಿದ್ಯೆ ಜೊತೆ ಒಳ್ಳೆಯ ಸಂಸ್ಕಾರ ನೀಡುವಕರ್ತವ್ಯ ಪೋಷಕರದ್ದಾಗಿದೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ನಡುವೆಸಾಮರಸ್ಯ ಬೆಸೆಯುತ್ತವೆ. ಇತ್ತೀಚಿನ ದಿನಗಳಲ್ಲಿಟಿವಿ, ಮೊಬೈಲ್‌ಗ‌ಳು ಜನರನ್ನು ಆಕರ್ಷಣೆಮಾಡುತ್ತಿದ್ದು, ಸಂಸ್ಕೃತಿ, ಜಾನಪದ, ಭಾವಗೀತೆ,ವಚನಗಾಯನಗಳು ಕಣ್ಮರೆಯಾಗುತ್ತಿವೆ.

ಈಕಾರಣದಿಂದ 66ನೇ ಕನ್ನಡ ರಾಜ್ಯೋತ್ಸವಅಂಗವಾಗಿ ರಾಜ್ಯ ಸರ್ಕಾರ ಕನ್ನಡಕ್ಕಾಗಿ ನಾವುಅಭಿಯಾನವನ್ನು ಆಯೋಜಿಸಲಾಗಿದೆ. ಶುದ್ಧವಾಗಿಕನ್ನಡ ಮಾತನಾಡುವವರಿಗೆ ಪ್ರಶಸ್ತಿ ನೀಡಲಾಗುತ್ತಿದೆಎಂದು ತಿಳಿಸಿದರು.ಪತ್ರಕರ್ತ ಮಲ್ಲಿಕಾರ್ಜುನ್‌ ಕಬ್ಬೂರುಪ್ರಾಸ್ತಾವಿಕವಾಗಿ ಮಾತನಾಡಿದರು.

ಗಾಯಕರಾದಮುರಾರ್ಜಿ, ಸತೀಶ್‌ಕುಮಾರ್‌ ಜಟ್ಟಿ, ತ್ರಿವೇಣಿ, ಬಿ.ಬಿ.ನಿಂಗಪ್ಪ ಇತರರು ಜಾನಪದ ಗೀತೆ, ವಚನಗೀತೆ‌,ದೇಶಭಕ್ತಿ ಗಾಯನ ನಡೆಸಿಕೊಟ್ಟರು. ಇಲ್ಲಿನ ಸರ್ಕಾರಿಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳು ನಡೆಸಿಕೊಟ್ಟಸಾಮೂಹಿಕ ನೃತ್ಯ ಕಾರ್ಯಕ್ರಮ ನೋಡುಗರ ಮನಸೂರೆಗೊಂಡಿತು.

ಅತ್ತಿಗೆರೆ ಗ್ರಾಪಂ ಅಧ್ಯಕ್ಷೆಯಶೋದಮ್ಮ ಚಂದ್ರಪ್ಪ, ಗ್ರಾಪಂ ಸದಸ್ಯ ಪಿ.ಎಂ.ಶಿವಕುಮಾರ್‌, ಆರ್‌. ಕಲ್ಲೇಶ್‌, ಎನ್‌.ಎಂ. ಕೋಟಿ,ವಿಜಯಮ್ಮ, ಪಾರ್ವತಮ್ಮ, ಎಸ್‌ಡಿಎಂಸಿ ಅಧ್ಯಕ್ಷಶರಣ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.