ಹೊರಗುತ್ತಿಗೆಗೂ ನೇರ ವೇತನ ಪದ್ಧತಿ ಜಾರಿಯಾಗಲಿ


Team Udayavani, Nov 10, 2021, 4:52 PM IST

davanagere news

ದಾವಣಗೆರೆ: ರಾಜ್ಯದ ಮಹಾನಗರ ಪಾಲಿಕೆ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವಾಹನ ಚಾಲಕರು, ನೀರಗಂಟಿಗಳು, ಡಾಟಾಆಪರೇಟರ್‌ಗಳನ್ನು ಗುತ್ತಿಗೆ ಪದ್ಧತಿ ಬದಲುಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದು ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಟಣ ಪಂಚಾಯತಿ ಹೊರ ಗುತ್ತಿಗೆನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಒತ್ತಾಯಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ರಾಜ್ಯದ 288 ನಗರ ಸ್ಥಳೀಯ ಸಂಸ್ಥೆಗಳಲ್ಲಿ15 ಸಾವಿರಕ್ಕೂ ಹೆಚ್ಚು ಜನರು ವಾಹನ ಚಾಲಕರು,ನೀರಗಂಟಿಗಳು, ಡಾಟಾ ಆಪರೇಟರ್‌ಗಳಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನುಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ.

ಹಾಗಾಗಿ ಸರ್ಕಾರ ಗುತ್ತಿಗೆ ಪದ್ಧತಿ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದರು.ಗುತ್ತಿಗೆ ಏಜೆನ್ಸಿಗಳ ಮೂಲಕ ಕೆಲಸಪಡೆದಿರುವಂತಹವರಿಗೆ ಬಹುತೇಕ ಎಲ್ಲ ನಗರಸ್ಥಳೀಯ ಸಂಸ್ಥೆಗಳಲ್ಲಿ ಸರಿಯಾದ ವೇತನ ಇಲ್ಲ.ಸಮಯಕ್ಕೆ ಸರಿಯಾಗಿ ಪಾವತಿಯೂ ಆಗುವುದಿಲ್ಲ.

ಭವಿಷ್ಯನಿಧಿ ಬಗ್ಗೆ ಹೇಳುವಂತೆಯೇ ಇಲ್ಲ. ಅನೇಕಕಡೆ ವೇತನ ಪಾವತಿಯ ಬಿಲ್‌ ಸಹ ನೀಡುವುದಿಲ್ಲ.ಇನ್ನು ಕೆಲವಡೆ ಹಾಜರಾತಿ ಪುಸ್ತಕ ನಿರ್ವಹಣೆಮಾಡುವುದೇ ಇಲ್ಲ ಎಂದು ದೂರಿದರು.ಹೊರ ಗುತ್ತಿಗೆ ಆಧಾರದಲ್ಲಿ ಕೆಲಸಮಾಡುತ್ತಿರುವರನ್ನು ಪೌರಕಾರ್ಮಿಕರಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವುದರಿಂದ ಸರ್ಕಾರಕ್ಕೆ ಶೇ.18 ರಷ್ಟುಜಿಎಸ್‌ಟಿ, ಗುತ್ತಿಗೆ ಏಜೆನ್ಸಿಗಳಿಗೆ ನೀಡುವ ಶೇ. 5ರಷ್ಟು ಸೇವಾ ಶುಲ್ಕ ಉಳಿಯಲಿದೆ.

ಒಟ್ಟು ಸರ್ಕಾರಕ್ಕೆಶೇ. 25 ರಷ್ಟು ಹಣ ಉಳಿತಾಯವಾಗಲಿದೆ. ನೌಕಕರಮೇಲೆ ಆಗುವಂತಹ ಕಿರುಕುಳ, ದೌರ್ಜನ್ಯ ಎಲ್ಲವೂನಿಲ್ಲಲಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಸರ್ಕಾರಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆಒಳಪಡಿಸಬೇಕು ಎಂದರು.ಹಾಸನ ಜಿಲ್ಲೆ ಹೊಳೆನರಸಿಪುರ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಚಾಲಕರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದರೂ ಅಧಿಕಾರಿಗಳು ಪರಿಹಾರ ನೀಡುವುದಿರಲಿ, ಮೃತನಕುಟುಂಬದವರಿಗೆ ಸೌಜನ್ಯಕ್ಕೂ ಸಾಂತ್ವನ ಹೇಳಿಲ್ಲ.

ಕೊರೊನಾ ಸಂದರ್ಭದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿಶವ ಸಾಗಾಣಿಕೆ, ಸಂಸ್ಕಾರ ನೆರವೇರಿಸಿದಂತಹನೌಕಕರನ್ನು ಸರ್ಕಾರ ಈವರೆಗೆ ಗುರುತಿಸಿಲ್ಲ ಎಂದುಅಸಮಾಧಾನ ವ್ಯಕ್ತಪಡಿಸಿದರು.ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಘದಅಧ್ಯಕ್ಷರಾಗಿದ್ದ ದುಗ್ಗೇಶ್‌ ಎಂಬುವವರನ್ನು ಏಕಾಏಕಿಕೆಲಸ ದಿಂದ ಕಿತ್ತು ಹಾಕಲಾಗಿದೆ.

ಒಂದು ವಾರದಲ್ಲಿಅವರನ್ನು ಮರು ನಿಯೋಜನೆ ಮಾಡಿಕೊಳ್ಳಬೇಕು.ಇಲ್ಲದಿದ್ದಲ್ಲಿ ದಾವಣಗೆರೆ ಒಳಗೊಂಡಂತೆ ರಾಜ್ಯದ288 ನಗರ ಸ್ಥಳೀಯ ಸಂಸ್ಥೆಗಳ ಮುಂದೆ ಪ್ರತಿಭಟನೆನಡೆಸಲಾಗುವುದು ಎಂದು ಎಚ್ಚರಿಸಿದರು.ಸಂಘದ ರಾಜ್ಯ ಕಾರ್ಯದರ್ಶಿ ಜಿ. ಶ್ರೀನಿವಾಸ್‌,ದುಗ್ಗೇಶ್‌, ಹರಿಹರದ ದಸಂಸ ಮುಖಂಡಪಿ.ಜೆ. ಮಹಾಂತೇಶ್‌, ವಿಜಯಮ್ಮ ಇತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.