Davanagere; ಕತ್ತಲಗೆರೆಯಲ್ಲಿ ನಡೆಯಿತು ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಅಂತ್ಯಕ್ರಿಯೆ
Team Udayavani, Jul 9, 2024, 7:14 PM IST
ದಾವಣಗೆರೆ: ಹೊನ್ನಾಳಿ ತಾಲೂಕಿನ ಅರಕೆರೆ ಬಳಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಕೆ.ಜಿ. ಪ್ರತಾಪ್ ಕುಮಾರ್ ಅವರ ಅಂತ್ಯಕ್ರಿಯೆ ಮಂಗಳವಾರ ಚನ್ನಗಿರಿ ತಾಲೂಕಿನ ಸ್ವಗ್ರಾಮ ಕತ್ತಲಗೆರೆಯಲ್ಲಿ ವೀರಶೈವ ಪದ್ಧತಿಯಂತೆ ನೆರವೇರಿತು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಪ್ರತಾಪ್ ಕುಮಾರ್ ಅವರ ಪಾರ್ಥಿವ ಶರೀರವನ್ನು ತಡರಾತ್ರಿಯೇ ಕತ್ತಲಗೆರೆಗೆ ತಂದು ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿನ ಜನರು ಅಂತಿಮ ದರ್ಶನ ಪಡೆದರು. ಮನೆಯಿಂದ ತೋಟದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಪ್ರತಾಪ್ ಕುಮಾರ್ ಅವರ ತಂದೆಯ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಹಿರೇಕೆರೂರು ಶಾಸಕ ಯು.ವಿ. ಬಣಕಾರ್, ಬಿ.ಸಿ. ಪಾಟೀಲ್, ಪತ್ನಿ ವನಜಾ ಪಾಟೀಲ್, ಪ್ರತಾಪ್ ಕುಮಾರ್ ಪತ್ನಿ ಸೌಮ್ಯ, ಸೊಸೆ ಸೃಷ್ಟಿ ಪಾಟೀಲ್, ಪ್ರತಾಪ್ ಕುಮಾರ್ ತಾಯಿ ವಸಂತಮ್ಮ, ಸಹೋದರರು ಒಳಗೊಂಡಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು, ಎರಡು ಕುಟುಂಬಗಳ ಸದಸ್ಯರು, ಬಂಧು-ಬಳಗದವರು ಅಂತ್ಯಸಂಸ್ಕಾರ ಸಂದರ್ಭದಲ್ಲಿ ಹಾಜರಿದ್ದರು.
ಅಕಾಲಿಕವಾಗಿ ಪತಿಯನ್ನು ಕಳೆದುಕೊಂಡಿರುವ ಸೌಮ್ಯ ಪಾಟೀಲ್ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಯಾರು ಎಷ್ಟೇ ಸಮಾಧಾನ ಪಡಿಸಲು ಯತ್ನಿಸಿದರೂ ರೋಧನ ನಿಲ್ಲಿಸಲಿಲ್ಲ. ಪ್ರತಾಪ್ ಕುಮಾರ್ ಅವರ ತಾಯಿ ವಸಂತಮ್ಮ ಮಗನ ನೆನೆದು ಕಂಬನಿ ಮಿಡಿದರು.
ಕಳೆದ 16 ವರ್ಷಗಳಿಂದ ಪ್ರತಾಪ್ ಕುಮಾರ್ ಅಳಿಯ ಎನ್ನುವುದಕ್ಕಿಂತಲೂ ನನ್ನ ಹಿರಿಯ ಮಗನಂತೆ ಇದ್ದರು. ಮನೆ, ತೋಟ, ಹೊಲ ಎಲ್ಲ ವಿಷಯಗಳನ್ನೇ ಅವರೇ ನೋಡಿಕೊಳ್ಳುತ್ತಿದ್ದರು. ಮಕ್ಕಳಾಗಲಿಲ್ಲ ಎಂಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಹಿರಿಯ ಮಗನನ್ನೇ ಕಳೆದು ಕೊಂಡಿದ್ದೇನೆ. ಪ್ರತಾಪ್ ಆತ್ಮಹತ್ಯೆಯ ಕುರಿತಂತೆ ಅವರ ಸಹೋದರ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.