Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Team Udayavani, Sep 22, 2024, 12:52 PM IST
ದಾವಣಗೆರೆ: ಹಿಂದೂಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿಯನ್ನು ಶನಿವಾರ (ಸೆ.21) ತಡರಾತ್ರಿ ಸಾಗರದಲ್ಲಿ ವಶಕ್ಕೆ ಪಡೆಯಲಾಗಿದೆ.
ದಾವಣಗೆರೆಯಲ್ಲಿ ಗುರುವಾರ ಬೇತೂರು ರಸ್ತೆಯ ವೆಂಕಾಭೋವಿ ಕಾಲೋನಿಯ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನಾತ್ಮಕ ಹೇಳಿಕೆ ಕಾರಣ ಎಂಬುದಾಗಿ ಕೇಳಿ ಬಂದಿತ್ತು.
ನಾಗಮಂಗಲದ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ವಿರೋಧಿಸಿ ಬುಧವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಗುರುವಾರ ವೆಂಕಾಭೋವಿ ಕಾಲೋನಿಯ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆದು ಇಬ್ಬರು ಪೊಲೀಸರು ಸೇರಿದಂತೆ ಅನೇಕರಿಗೆ ಗಾಯಗಳಾಗಿದ್ದವು. ಮನೆಗಳ ಮೇಲೂ ಕಲ್ಲು ತೂರಲಾಗಿತ್ತು. ಮನೆಗಳ ಮುಂದೆ ಕಾರು, ಬೈಕ್ ಜಖಂ ಗೊಳಿಸಲಾಗಿತ್ತು. ಗುರುವಾರ ದಾವಣಗೆರೆಯಲ್ಲಿ ನಡೆದ ಗಲಾಟೆಗೆ ಪ್ರಚೋದನಾತ್ಮಕ ಹೇಳಿಕೆಯೇ ಪ್ರಮುಖ ಕಾರಣ ಎಂಬುದು ಕೇಳಿ ಬಂದಿತ್ತು.
ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ, ಪೂರ್ವ ವಲಯ ಉಪ ಪೊಲೀಸ್ ಮಹಾ ನಿರೀಕ್ಷಕ ಆರ್. ರಮೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಎಲ್ಲರೂ ಇದೇ ಅಂಶ ತಿಳಿಸಿದ್ದರು.
ದಾವಣಗೆರೆಯಲ್ಲಿ ಗಲಾಟೆ ನಡೆದ ನಂತರ ನಾಪತ್ತೆಯಾಗಿದ್ದ ಸತೀಶ್ ಪೂಜಾರಿ ವಶ ಪಡೆಯಲು ಪೊಲೀಸರು ಸಾಕಷ್ಟು ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸಾಗರದಲ್ಲಿದ್ದ ಸತೀಶ್ ಪೂಜಾರಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ದಾವಣಗೆರೆಗೆ ಕರೆ ತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.