ದಾವಣಗೆರೆಯಲ್ಲಿ ಚೌಕ ಗೆದ್ದರಂತೂ ಇಡೀ ರಾಜ್ಯದಲ್ಲೇ ಗೆದ್ದಂತೆ


Team Udayavani, Feb 14, 2017, 12:59 PM IST

dvg3.jpg

ದಾವಣಗೆರೆ: ಕನ್ನಡ ಚಲನಚಿತ್ರ ರಂಗದ ದಂತಕಥೆ ದ್ವಾರಕೀಶ್‌ ಬ್ಯಾನರ್‌ನ 50ನೇ ಚಿತ್ರ ಚೌಕಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಚಿತ್ರದ ಗೆಲುವಿಗೆ ಕಾರಣವಾಗಿರುವ ಜನರಿಗೆ ಕೃತಜ್ಞತೆ ತಿಳಿಸುವುದಕ್ಕಾಗಿ ಚೌಕ ದಿಗ್ವಿಜಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದ ನಿರ್ಮಾಪಕ, ದ್ವಾರಕೀಶ್‌ ಪುತ್ರ ಯೋಗೇಶ್‌ ತಿಳಿಸಿದರು.

ಚೌಕಕ್ಕೆ ಸಾಕಷ್ಟು ಹಣ ತೊಡಗಿಸಲಾಗಿದೆ. ಈವರೆಗೆ ಹಾಕಿದ ಬಂಡವಾಳ ವಾಪಾಸ್ಸು ಬಂದಿಲ್ಲ. ಆದರೂ, ಚಿತ್ರಕ್ಕೆ ದೊರಕಿರುವ ಬೆಂಬಲದಿಂದ ಹಣ ವಾಪಾಸ್ಸು ಬಂದೇ ಬರುವ ವಿಶ್ವಾಸ ಇದೆ. ಹಣಕ್ಕಿಂತಲೂ ಮುಖ್ಯವಾಗಿ ಕರ್ನಾಟಕದ ಜನರ ಪೀತಿ, ಅಭಿಮಾನದ ಫಲವಾಗಿ ನಮ್ಮ ಬ್ಯಾನರ್‌ನ 50ನೇ ಚಿತ್ರ ಗೆದ್ದಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬಣ್ಣಿಸಿದರು. 

ಬೆಂಗಳೂರು, ಮೈಸೂರು, ಮಂಗಳೂರು ಮುಂತಾದ ಕಡೆ ಚಿತ್ರ ಚೆನ್ನಾಗಿ ಓಡಿದರೆ ಆ ಚಿತ್ರ ಗೆದ್ದಂತೆ. ಇನ್ನು ಕರ್ನಾಟಕದ ಹೃದಯ ಭಾಗ ದಾವಣಗೆರೆಯಲ್ಲಿ ಚಿತ್ರ ಗೆದ್ದರಂತೂ ಇಡೀ ರಾಜ್ಯದಲ್ಲೇ ಗೆದ್ದಂತೆ. ಈ ಭಾಗದ ಜನರು ಕನ್ನಡ ಚಿತ್ರಕ್ಕೆ ನೀಡುವಂಥಹ ಪ್ರೋತ್ಸಾಹ, ಆಶೀರ್ವಾದ ಮರೆಯಲಿಕ್ಕಾಗದು. ಆಪ್ತಮಿತ್ರ ಚಿತ್ರ ಮೊದಲಿಗೆ ಗೆದ್ದಿದ್ದೇ ದಾವಣಗೆರೆಯಲ್ಲಿ ಎಂದು ಸ್ಮರಿಸಿದರು. 

ಚೌಕ ತಂಡವನ್ನಿಟ್ಟಿಕೊಂಡು ಇನ್ನೊಂದು ಚಿತ್ರ ಮಾಡುವ ಬಯಕೆ ಇದೆ. ಪ್ರೇಮ್‌, ದಿಗಂತ್‌, ಪ್ರಜ್ವಲ್‌ ಹಾಗೂ ಚಿತ್ರದ ನಿರ್ದೇಶಕ ತರುಣ್‌ ಬೇರೆ ಚಿತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಪ್ರಾಜೆಕ್ಟ್ ಮುಗಿದ ನಂತರ ಮುಂದಿನ ಚಿತ್ರ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹಿಂದೆಲ್ಲ ಕನ್ನಡ ಚಿತ್ರದ ಗುರಿ 50, 100 ದಿನ ಇತ್ತು. ಈಗ ವರ್ಷಕ್ಕೆ 120-150 ಚಿತ್ರ ನಿರ್ಮಾಣವಾಗುತ್ತಿವೆ.

ಹಾಕಿದಂತಹ ಬಂಡವಾಳ 2-3 ದಿನಗಳಲ್ಲಿ ವಾಪಾಸ್ಸು ಬರುತ್ತದೆ. ಹಣ ವಾಪಾಸ್ಸಾಗುವುದು ಮುಖ್ಯವಾಗಿರುವಾಗ ಚಿತ್ರ ಓಡುವುದರತ್ತ ಅಷ್ಟಾಗಿ ಗಮನ ನೀಡುತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಮಾತನಾಡಿ, ಮೇಯರ್‌ ಮುತ್ತಣ್ಣ, ವಿಷ್ಣುವರ್ಧನ ಇತರೆ ಚಿತ್ರ ಮಾಡಿರುವಂತಹ ದ್ವಾರಕೀಶ್‌ ಬ್ಯಾನರ್‌ನಡಿ ಚಿತ್ರ ಮಾಡುವಾಗ ನಿಜಕ್ಕೂ ದೊಡ್ಡ ಜವಾಬ್ದಾರಿ ಇತ್ತು.

ಒಂದು ವರ್ಷ ಕಷ್ಟಪಟ್ಟು ಮಾಡಿದ್ದೇವೆ. ಈಗ ಚಿತ್ರ ಗೆದ್ದಿದೆ. ಚಿತ್ರದ ಗೆಲುವಿಗೆ ಕಾರಣವಾಗಿರುವ ಜನರಿಗೆ ಧನ್ಯವಾದ ಹೇಳಿ, ಅವರ ಅಭಿಪ್ರಾಯ ತಿಳಿದುಕೊಳ್ಳಲು ಈ ಪ್ರವಾಸ. ದರ್ಶನ್‌ ಅವರಂತಹವರು ಒಂದೇ ಮಾತಿಗೆ ಈ ಚಿತ್ರದಲ್ಲಿ ನಟಿಸಲಿಕ್ಕೆ ಒಪ್ಪಿಕೊಂಡಿದ್ದರು. ಮಲ್ಟಿ ನಾಯಕರ ಚಿತ್ರ ಸದಾ ಬರುತ್ತಿವೆ. ಪುನೀತ್‌, ಸುದೀಪ್‌, ದರ್ಶನ್‌ ಎಲ್ಲರೂ ಒಂದೇ ಚಿತ್ರದಲ್ಲಿ ನಟಿಸುವುದೇ ಇಲ್ಲ ಎನ್ನುವುದಿಲ್ಲ, ಅವರಿಗೆ ಬೇಕಾದ ಕಥೆ ಮುಖ್ಯ.

ದರ್ಶನ್‌ ಅವರ 50ನೇ ಚಿತ್ರ ನಿರ್ದೇಶಿಸುತ್ತಿರುವುದಾಗಿ ಅವರು ತಿಳಿಸಿದರು. ನಾಯಕ ನಟರಾದ ಪ್ರೇಮ್‌, ದಿಗಂತ್‌, ಪ್ರಜ್ವಲ್‌ ದೇವರಾಜ್‌, ಚಿತ್ರದ ಗೆಲುವಿಗೆ ಕಾರಣರಾದ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸುವುದಕ್ಕಾಗಿ ಅವರ ಬಳಿಗೆ ಬಂದಿದ್ದೇವೆ. ಚೌಕ ಚಿತ್ರ ಎಲ್ಲ ಕಡೆ ಭರ್ಜರಿ ಓಪನಿಂಗ್‌ ಪಡೆದುಕೊಂಡಿದೆ. ಕಥೆಯೇ ಚಿತ್ರದ ಗೆಲುವಿಗೆ ಮುಖ್ಯ ಕಾರಣ. ಚಿತ್ರ ತಂಡದ ಶ್ರಮಕ್ಕೆ ಒಳ್ಳೆಯ ಫಲ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು. ಅಶೋಕ ಚಿತ್ರಮಂದಿರದ ಮಾಲೀಕ ಲಕ್ಷ್ಮೀಕಾಂತ್‌ರೆಡ್ಡಿ ಇದ್ದರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.