ಅಂಚೆ ಇಲಾಖೆ ನೌಕರರ ಪ್ರತಿಭಟನೆ
Team Udayavani, Mar 17, 2017, 12:47 PM IST
ದಾವಣಗೆರೆ: ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಚೆ ಇಲಾಖೆ ನೌಕರರು ಗುರುವಾರ ಕೆಲಸ ಸ್ಥಗಿತಗೊಳಿಸಿ, ಪ್ರತಿಭಟಿಸಿದ್ದಾರೆ. ಗಡಿಯಾರಕಂಬದ ಬಳಿಯ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ನೌಕರರು ತಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲು ಆಗ್ರಹಿಸಿದರು.
7ನೇ ವೇತನ ಆಯೋಗವು ಆರಂಭಿಕ ವೇತನ 24 ಸಾವಿರ ರೂ. ಇರಬೇಕೆಂದು ಶಿಫಾರಸ್ಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ 18 ಸಾವಿರ ರೂ. ಮಾತ್ರ ನೀಡುವುದಾಗಿ ಹೇಳುತ್ತಿದೆ. ಇನ್ನು ಮೂಲ ವೇತನ ಹೆಚ್ಚಳ ಆಧರಿಸಿ, ಮನೆ ಬಾಡಿಗೆ ವೆಚ್ಚ ನೀಡುವ ಪರಿಪಾಠ ಮೊದಲಿನಿಂದ ಇತ್ತು. ಆದರೆ, ಈ ಬಾರಿ ಹಳೆಯ ಬಾಡಿಗೆ ಭತ್ಯೆ ಮುಂದುವರಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರಿ ನೌಕರರ ವೇತನ ವಿಷಯದಲ್ಲಿ ಇದುವರೆಗೆ ಎಂದೂ ತಾರತಮ್ಯ ಆಗಿಲ್ಲ. ಈ ಬಾರಿಯ ಸರ್ಕಾರ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಈ ಹಿಂದೆ ಇದ್ದಂತೆಯೇ ವೇತನ ಹೆಚ್ಚಳ ಕುರಿತು ಕ್ರಮ ವಹಿಸಬೇಕು. ಹೊಸದಾಗಿ ನೌಕರಿ ಸೇರುವವರಿಗೆ ಪಿಂಚಣಿ ಸವಲತ್ತು ನೀಡಲು ಸಾಧ್ಯವಿಲ್ಲ ಎಂಬ ನೆಪವೊಡ್ಡಿ ಹೊಸ ಪಿಂಚಣಿ ಯೋಜನೆ ಜಾರಿ ಮಾಡಲಾಗಿದೆ.
ಈ ಯೋಜನೆ ಪ್ರಕಾರ ಸರ್ಕಾರ ತನ್ನ ನೌಕರರಿಗೆ ಯಾವುದೇ ಪಿಂಚಣಿ ವಂತಿಗೆ ನೀಡುವುದಿಲ್ಲ. ಬದಲಿಗೆ ನೌಕರರೇ ತಮ್ಮ ಪಿಂಚಣಿ ಮೊತ್ತ ನೀಡಬೇಕಿದೆ. ಇದರಿಂದ ನೌಕರರ ನಿವೃತ್ತಿ ನಂತರದ ಜೀವನ ಸುಗಮವಾಗಿರಲು ಸಾಧ್ಯ ಇಲ್ಲ. ಇದನ್ನು ಮನಗಂಡು ಸರ್ಕಾರ ಹಳೆ ಪಿಂಚಣಿ ಪದ್ಧತಿ ಮುಂದುವರಿಸಿಕೊಂಡು ಹೋಗಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವಂತಹ ನೌಕರರನ್ನು ಖಾಯಂ ಮಾಡಿಲ್ಲ.
ಖಾಯಮಾತಿಗೆ ಆಗ್ರಹಿಸಿ, ಹಲವು ದಿನಗಳಿಂದ ನಾವು ಹೋರಾಟ ಮಾಡುತ್ತಾ ಬಂದಿದ್ದೇವೆ. ಅನೇಕ ಬಾರಿ ಮನವಿ ಸಹ ಸಲ್ಲಿಸಿದ್ದೇವೆ. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ. ಕೂಡಲೇ ಸರ್ಕಾರ ಈ ನೌಕರರ ಖಾಯಂಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಗ್ರಾಮೀಣ ಅಂಚೆ ನೌಕರರ ಸಂಘ, ಅಂಚೆ ನೌಕರರ ಒಕ್ಕೂಟದ ಲಿಂಗಾನಾಯ್ಕ, ಹರೀಶ್, ವೆಂಟಕರಾಮಯ್ಯ, ಟಿ. ಮುಕುಂದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.