ಅಭಿವೃದ್ದಿ ಕಾರ್ಯ ಮಾಡಿದ ಸಂತೋಷ-ತೃಪ್ತಿಯಿದೆ

ದೂಡಾಕ್ಕೆ ಆದಾಯ ದೊರಕಿಸಲು ಶ್ರಮಿಸಿರುವೆ: ದೇವರಮನೆ ಶಿವಕುಮಾರ್‌

Team Udayavani, Apr 7, 2022, 3:37 PM IST

kesari

ದಾವಣಗೆರೆ: ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದ ರವೀಂದ್ರನಾಥ್‌, ರೇಣುಕಾಚಾರ್ಯ ಇತರರು ನನ್ನ ಮೇಲೆ ವಿಶ್ವಾಸವಿಟ್ಟು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜವಾಬ್ದಾರಿ ನೀಡಿದ್ದರು. ಏಳು ತಿಂಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿರುವ ಸಂತೋಷ ಮತ್ತು ತೃಪ್ತಿ ಇದೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ದೇವರಮನೆ ಶಿವಕುಮಾರ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಒಳ್ಳೆಯ ಕೆಲಸ ಮಾಡಿದ ಸಂತೋಷ, ತೃಪ್ತಿ ಇದೆ. ಅವಕಾಶ ಮತ್ತು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಸದಾ ಆಭಾರಿ ಎಂದರು.

ಕಳೆದ 40 ವರ್ಷದಿಂದ ಇರುವ ದೇವರಾಜ ಅರಸು ಬಡಾವಣೆ, ಡಿಸಿಎಂ ಟೌನ್‌ಶಿಪ್‌ಗೆ ನಾಮಫಲಕ, ಕಮಾನು ಇರಲಿಲ್ಲ. ನನ್ನ ಕಾಲಾವಧಿಯಲ್ಲಿ ಮಾಡಲಾಗಿದೆ. ರಿಂಗ್‌ ರಸ್ತೆ, ಹೊಂಡದ ವೃತ್ತ, ಶಿವಾಜಿ ವೃತ್ತದಲ್ಲಿನ ಶಿವಾಜಿ ಪ್ರತಿಮೆ ಕೆಲಸ ಪೂರ್ಣ, ಡಿಸಿಎಂ ಟೌನ್‌ಶಿಪ್‌ ಅನೇಕ ಅಭಿವೃದ್ಧಿ ಕೆಲಸ ಮಾಡಲಾಗಿದೆ. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆದಾಯ ತರುವ ಉದ್ದೇಶದಿಂದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿ ಬಳಿ 4 ಕೋಟಿ ರೂ. ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಟೆಂಡರ್‌ ಕರೆಯಲಾಗಿದೆ.

ಮುಂದಿನ ದಿನಗಳಲ್ಲಿ ಅನುಮೋದನೆ ಸಿಗಲಿದೆ. ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಇ-ಪೇಪರ್‌ ಆಡಳಿತಕ್ಕೆ ಟೆಂಡರ್‌ ಕರೆಯಲಾಗಿದೆ. ಜಿಲ್ಲಾಧಿಕಾರಿ ಅನುಮೋದನೆ ದೊರೆತ ಕೂಡಲೇ ಕೆಲಸ ಪ್ರಾರಂಭವಾಗಲಿದೆ ಎಂದು ಹೇಳಿದರು.

ದೊಡ್ಡಬಾತಿಕೆರೆಯಲ್ಲಿ ವಂಡರ್‌ ಲಾ ಮಾದರಿಯಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ 4.5 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಸಿದ್ಧವಾಗಲಿದೆ. ಕೆರೆ ಅಭಿವೃದ್ಧಿ ಸಮಯದಲ್ಲಿ ಒತ್ತುವರಿ ತೆರೆವುಗೊಳಿಸಲಾಗುವುದು. ಕುಂದುವಾಡದಲ್ಲಿ 53 ಎಕರೆ ಜಮೀನು ಖರೀದಿಸಲು ದರ ನಿಗದಿಪಡಿಸಲಾಗಿದೆ. ಕಾನೂನಾತ್ಮಕ ಮಂಜೂರಾತಿ ದೊರೆತಿದೆ. ಅತಿ ಶೀಘ್ರವೇ ಆರ್‌ಟಿಜಿಎಸ್‌ ಮೂಲಕ ಜಮೀನು ನೀಡಿದವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ಆದಷ್ಟು ಬೇಗ ಸಾರ್ವಜನಿಕರಿಗೆ ನಿವೇಶನ ವಿತರಿಸುವ ಕೆಲಸ ಸಹ ಮಾಡಲಾಗುವುದು ಎಂದರು.

ಕಳೆದ 10 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಸಿಡಿಪಿ ಯೋಜನೆಯನ್ನು ತ್ವರಿತವಾಗಿ ಚಾಲನೆ ನೀಡಲಾಗುತ್ತಿದೆ. 2041ರಲ್ಲಿನ ಜನಸಂಖ್ಯೆ, ವಾಹನಗಳ ಸಂಖ್ಯೆಗೆ ಅನುಗುಣವಾಗಿ ಅದ್ಭುತ ಯೋಜನೆ ಕಾರ್ಯಗತವಾಗಲಿದೆ. ಹೊನ್ನೂರು, ಬೆಳವನೂರು, ಬನ್ನಿಕೋಡು ಗ್ರಾಮಗಳು ಸಿಡಿಪಿ ಯೋಜನೆಯ ವ್ಯಾಪ್ತಿಗೆ ಒಳಪಡಲಿವೆ. ವಿವಿಧ ಸಮಾಜಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ಅತ್ಯಂತ ಕಡಿಮೆ ದರದಲ್ಲಿ 16 ನಾಗರಿಕ ಸೌಲಭ್ಯ ನಿವೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ದಾವಣಗೆರೆ ಹಾಗೂ ಹರಿಹರ ನಗರ ಮುಂಚೂಣಿಯಲ್ಲಿ ಬೆಳೆಯುತ್ತಿರುವ ನಗರಗಳಾಗಿವೆ. ಅದಕ್ಕಾಗಿ ಸುಮಾರು 120 ಕೋಟಿ ರೂ. ವೆಚ್ಚದಲ್ಲಿ ರಿಂಗ್‌ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಬಳಿ ಮಾಡಿದ ಮನವಿಗೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ದೂಡಾ ಸದಸ್ಯರಾದ ನಿಟುವಳ್ಳಿ ಲಕ್ಷ್ಮಣ್‌, ಬಾತಿ ಚಂದ್ರಶೇಖರ್‌, ಮಾಲತೇಶ್‌ ಘಾಟ್ಗೆ, ಗೌರಮ್ಮ ವಿ.ಪಾಟೀಲ್‌, ಶಿವನಗೌಡ ಟಿ. ಪಾಟೀಲ್‌, ಟಿಂಕರ್‌ ಮಂಜಣ್ಣ, ಜಯಪ್ರಕಾಶ್‌ ಮಾಗಿ, ಅಭಿಷೇಕ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.