ತುರ್ತು ಸಹಾಯಕ್ಕೆ 112 ಡಯಲ್‌ ಮಾಡಿ


Team Udayavani, Oct 7, 2020, 5:11 PM IST

dg-tdy-2

ದಾವಣಗೆರೆ: ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ಸರಕಾರ ಹೊಸ ತುರ್ತು ಸ್ಪಂದನ ಸಹಾಯ ವ್ಯವಸ್ಥೆ(ಸಹಾಯವಾಣಿ-112)ಯನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು ಇದಕ್ಕಾಗಿ 13 ತುರ್ತು ಸೇವಾ ವಾಹನಗಳು ಕಾರ್ಯನಿರತವಾಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತುರ್ತು ಸ್ಪಂದನ ವ್ಯವಸ್ಥೆ ಕುರಿತು ವಿವರಣೆ ನೀಡಿದರು. ಅ. 1ರಿಂದಲೇ ಈ ನೂತನ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದೆ. ಈ ವ್ಯವಸ್ಥೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿದ್ದು ಇದರಲ್ಲಿ ದಾವಣಗೆರೆ ಜಿಲ್ಲೆಯೂ ಒಂದು ಎಂದರು.

ಪೊಲೀಸ್‌ ನೆರವು, ಅಗ್ನಿಶಾಮಕದಳದ ನೆರವು ಅಥವಾ ಆಂಬ್ಯುಲೆನ್ಸ್‌ ಸೇವೆ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನ ಸಹಾಯವಾಣಿ ಸಂಖ್ಯೆ 112ಕ್ಕೆ ಸಾರ್ವಜನಿಕರು ಕರೆ ಮಾಡಿದರೆ ಸಾಕು ಪೊಲೀಸರುರಕ್ಷಣೆ, ಸಹಾಯಕ್ಕೆ (ಇಆರ್‌ಎಸ್‌ಎಸ್‌) ಎಮೆರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಂ ವ್ಯವಸ್ಥೆಯಡಿ ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ. 112ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕೀಕೃತ ತುರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15ನಿಮಿಷಗಳಲ್ಲಿಯೇ ಇಆರ್‌ಎಸ್‌ಎಸ್‌ ವಾಹನ ಅಲ್ಲಿಗೆ ತಲುಪಿ, ಸಂಕಷ್ಟದಲ್ಲಿರುವವವರಿಗೆ ತುರ್ತು ನೆರವು ಒದಗಿಸುವ ವ್ಯವಸ್ಥೆ ಇದಾಗಿದೆ ಎಂದರು.

ತುರ್ತು ಸಹಾಯ ಒದಗಿಸುವ ಉದ್ದೇಶಕ್ಕಾಗಿಯೇ ಜಿಲ್ಲೆಗೆ ಆರು ಸ್ಕಾರ್ಪಿಯೋ, ಏಳು ಇನ್ನೋವಾ ಸೇರಿ ಒಟ್ಟು 13ಬೀಟ್‌ ವಾಹನಗಳನ್ನು ಪೂರೈಸಲಾಗಿದೆ. ಇಆರ್‌ಎಸ್‌ಎಸ್‌ ಸೇವೆ ನೀಡುವ ಈ ವಾಹನಕ್ಕೆಹೊಯ್ಸಳ ಎಂದು ಹೆಸರಿಡಲಾಗಿದೆ. ಒಂದು ವಾಹನದಲ್ಲಿ ಒಬ್ಬ ಎಎಸ್‌ಐ, ಒಬ್ಬ ಕಾನ್ಸ್ ಟೇಬಲ್‌ ಹಾಗೂ ವಾಹನ ಚಾಲಕ ಸೇರಿ  ಮೂವರು ಸಿಬ್ಬಂದಿ ಇರುತ್ತಾರೆ. ಸಂರಕ್ಷಣಾ ಸಲಕರಣೆಗಳು ವಾಹನದಲ್ಲಿರುತ್ತವೆ. 24/7 ತುರ್ತು ಸ್ಪಂದನಾ ಕರ್ತವ್ಯಕ್ಕಾಗಿ ಈಗಾಗಲೇ 65 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ, 26 ಚಾಲಕರಿಗೆ ತರಬೇತಿ ನೀಡಲಾಗಿದೆ. ದಿನದ 24ತಾಸು ಪ್ರಾಯೋಗಿಕ ಚಟುವಟಿಕೆ ಪ್ರಾರಂಭಿಸಲಾಗಿದ್ದು ಎರಡು ತಾಸಿಗೊಮ್ಮೆ ಇಆರ್‌ಎಸ್‌ಎಸ್‌ ವಾಹನ ನಿಲುಗಡೆ ಸ್ಥಳ ಬದಲಾಯಿಸಲಾಗುತ್ತದೆ. ಎರಡು ಶಿಫ್ಟ್‌ಗಳಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ವ್ಯವಸ್ಥೆ ಆರಂಭಿಸಿದ ಎರಡು ದಿನಗಳಲ್ಲಿಯೇ ಎಂಟು ಪ್ರಕರಣಗಳಿಗೆ ಸ್ಪಂದನ ಸೇವೆ ನೀಡಲಾಗಿದೆ ಎಂದು ಎಸ್ಪಿ ತಿಳಿಸಿದರು.

ಇನ್ನು ಮುಂದೆ ಪೊಲೀಸ್‌ ಕಂಟ್ರೋಲ್‌ ರೂಮ್‌ನ 100 ಸಹಾಯವಾಣಿ , ಅಗ್ನಿಶಾಮಕದಳದ 101 ಸಹಾಯವಾಣಿ ಹಾಗೂ ಆರೋಗ್ಯ ಇಲಾಖೆಯ 108 ಸಹಾಯವಾಣಿ 108 ಎಲ್ಲವೂ ನೂತನ ಸಹಾಯವಾಣಿ ಸಂಖ್ಯೆ 112ರಲ್ಲಿ ವಿಲೀನವಾಗಿದೆ. ಯಾವುದೇಸಮಸ್ಯೆ ಇದ್ದರೂ ಸಾರ್ವಜನಿಕರು 112ಕ್ಕೆ ಕರೆ ಮಾಡಬಹುದು. ಅಥವಾ ಕೆಎಸ್‌ಪಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಅದರಿಂದಲೂ ಇಲ್ಲವೇ  [email protected]  ಮೂಲಕವೂ ಸಂದೇಶ ರವಾನಿಸಬಹುದಾಗಿದೆ ಎಂದು ತಿಳಿಸಿದರು.

ಪೊಲೀಸ್‌ ಉಪಾಧೀಕ್ಷಕ ಬಸವರಾಜ್‌, ಅಗ್ನಿಶಾಮಕದಳ ಜಿಲ್ಲಾ ನಿರೀಕ್ಷಕ ಬಸವಪ್ರಭು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.