ದಾವಿವಿ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆ ಭರವಸೆ


Team Udayavani, Feb 28, 2017, 1:19 PM IST

dvg2.jpg

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ದಾವಣಗೆರೆ ವಿಶ್ವವಿದ್ಯಾನಿಲಯದ ಸಿ ಮತ್ತು ಡಿ ಗ್ರೂಪ್‌ ಹೊರಗುತ್ತಿಗೆ ನೌಕರರ ಸಂಘದಿಂದ ಆರಂಭಗೊಳಿಸಿದ್ದ 48 ಗಂಟೆಗಳ ಧರಣಿ, ಮೊದಲ ದಿನವೇ ಅಂತ್ಯಗೊಂಡಿದೆ. ತೋಳಹುಣಸೆ ಗ್ರಾಮದ ಹೊರವಲಯದಲ್ಲಿರುವ ಶಿವಗಂಗೋತ್ರಿಯ ವಿವಿ ಮುಂಭಾಗದಲ್ಲಿ ಸೋಮವಾರ ಯುಟಿಯುಸಿ ನೇತೃತ್ವದಲ್ಲಿ ಧರಣಿ ನಡೆಸಿದ ನೌಕರರು, ತಮ್ಮ ಬೇಡಿಕೆ ಈಡೇರಿಕೆಗೆ ವಿವಿ ಅಧಿಕಾರಿಗಳು ಸ್ಪಂದಿಸಲು ಧರಣಿ ನಡೆಸಿ ಒತ್ತಾಯಿಸಿದರು.

ವಿವಿ ಅಧಿಕಾರಿಗಳು, ಗುತ್ತಿಗೆದಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಧರಣಿ ವಾಪಸ್‌ ಪಡೆಯಲಾಯಿತು. ಇದಕ್ಕೂ ಮುನ್ನ ಧರಣಿನಿರತರನ್ನುದ್ದೇಶಿಸಿ ಮಾತನಾಡಿದ ಸಂಘದ ಗೌರವ ಕಾರ್ಯದರ್ಶಿ ಮಂಜುನಾಥ ಕುಕ್ಕವಾಡ, ವಿಶ್ವವಿದ್ಯಾನಿಲಯದಲ್ಲಿ 165ಕ್ಕೂ ಹೆಚ್ಚು ಕಾರ್ಮಿಕರು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಕಾರ್ಮಿಕರಿಗೆ ಕನಿಷ್ಠ ವೇತನ, ವೇತನ ಚೀಟಿ, ಸೆಕ್ಯೂರಿಟಿ ಗಾರ್ಡಗಳಿಗೆ ವಾರದ ರಜೆ ಸೌಲಭ್ಯ, ಇಎಸ್‌ಐ, ಇಪಿಎಫ್‌ ಸೌಲಭ್ಯ ಕೊಡುತ್ತಿಲ್ಲ. ಈ ಸವಲತ್ತು ಪಡೆಯಲು ಸಂಘಟಿತ ಹೋರಾಟವೊಂದೇ ಮಾರ್ಗ ಎಂದರು. ಗುತ್ತಿಗೆದಾರ ಬಿ.ಕೆ.ಆರ್‌.ಸ್ವಾಮಿ ಅವರೊಂದಿಗೆ ವಿವಿ ಕುಲಸಚಿವ ಡಾ| ಶರಣಪ್ಪ ವೈಜನಾಥ ಹಲಸೆ ಸಭೆ ನಡೆಸಿ ಕನಿಷ್ಠ ವೇತನ ನೀಡಲು ಕ್ರಮ  ವಹಿಸಬೇಕು.

ಪ್ರತಿ ತಿಂಗಳು ಒಂದನೇ ತಾರೀಖೀನಂದೇ ವೇತನ ಪಾವತಿ ಜೊತೆಗೆ ವೇತನ ಚೀಟಿ ನೀಡಬೇಕು. ಇಎಸ್‌ಐ ಮತ್ತು ಪಿಎಫ್‌ ಗೊಂದಲ ಕೂಡಲೇ ಬಗೆಹರಿಸಬೇಕು ಹಾಗೂ ಸೆಕ್ಯೂರಿಟಿ ಗಾರ್ಡ್‌ಗಳಿಗೆ ವಾರದಲ್ಲಿ ಒಂದು ರಜೆ ನೀಡಲೇಬೇಕೆಂದು ಒತ್ತಾಯಿಸಿದರು. ವಿವಿ ಕುಲಸಚಿವರು, ಗುತ್ತಿಗೆದಾರ ಹಾಗೂ ಕಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ 48 ಗಂಟೆಯ ಮುಷ್ಕರ ಹಿಂಪಡೆಯಲಾಯಿತು. 

ಸಂಘದ ಉಪಾಧ್ಯಕ್ಷರಾದ ಎಲ್‌. ಎಚ್‌. ಪ್ರಕಾಶ್‌, ಆರ್‌. ತಿಪ್ಪೇಶ್‌, ಸಹಕಾರ್ಯದರ್ಶಿಗಳಾದ ಸಿ.ಎಚ್‌. ಜಗದೀಶ್‌, ವಿಜಯಮ್ಮ, ಖಜಾಂಚಿ ಪಿ. ಮಂಜುನಾಥ್‌, ಆಲ್‌ ಇಂಡಿಯಾ ಯುಟಿಯುಸಿಯ ಮಂಜುನಾಥ್‌  ರೆಡ್ಡಿ, ಶಿವಾಜಿರಾವ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.